Mangalore

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲ ಪತ್ತೆ ಮಾಡಿದ್ದಾರೆ. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 35 ವರ್ಷದ ಮಹಿಳೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೂಟ್ ಕೇಸ್ ತಳ ಭಾಗದಲ್ಲಿ ಮರೆಮಾಚಿ 8 ಕೆ.ಜಿ. ತೂಕದ 56 ಕೋಟಿ ರೂ. ಮೌಲ್ಯದ ಹೆರಾಯಿನ್ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಮಹಿಳೆಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ.

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!!

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!! Read More »

ಕರಾವಳಿ

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02:ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು “ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ” ಎಂಬ ಮಾಹಿತಿ ನೀಡಿದ್ದರು. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ Read More »

ಕರ್ನಾಟಕ

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ!

(ನ್ಯೂಸ್ ಕಡಬ) newskadaba,ಚಿಕ್ಕಮಗಳೂರು ಜೂ.30:ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮೂರು ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ನವ ವಿವಾಹಿತೆಯನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ನೀರಿನ ಸಂಪ್ ಗೆ ಮುಳುಗಿಸಿ ಸಿಮ್ರಾನ್ (22) ಕೊಲೆ ಮಾಡಲಾಗಿದೆ. ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಅವರನ್ನು ಫೈರೋಜ್ ಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಮದುವೆಗೆ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಫೈರೋಜ್ ಮದುವೆ ಆದ ಮೇಲೂ ಮುಂದುವರಿಸಿದ್ದ. ಇದಕ್ಕೆ ಹೆತ್ತವರು ಕೂಡ ಬೆಂಬಲ

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ! Read More »

ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ➤ ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,382 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,43,810ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 111 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,040ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   ಬೆಂಗಳೂರಿನಲ್ಲಿ ಇಂದು 813 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,13,559ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.ರಾಜ್ಯದಲ್ಲಿ

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ➤ ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ Read More »

ಕರ್ನಾಟಕ

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ ಮಂಗಲ್ಪಾಡಿ ನಿವಾಸಿ ಅಜ್ಮಲ್ ಟಿ. ಹಾಗೂ ಮೂಲತಃ ಕನ್ಯಾಕುಮಾರಿ ನಿವಾಸಿ, ಪ್ರಸ್ತುತ ಸುರತ್ಕಲ್‍ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿನಿ ಮಿನು ರಶ್ಮಿ ಬಂಧಿತ ಆರೋಪಿಗಳು. ಮಾರುಕಟ್ಟೆಯಲ್ಲಿ ಈ ಗಾಂಜಾ ಅಂದಾಜು 30 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಬೆಲೆಬಾಳುವಂತಹದ್ದು ಎಂದು ಮಂಗಳೂರು ನಗರ ಪೊಲೀಸ್

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ

(ನ್ಯೂಸ್ ಕಡಬ) newskadaba,ಕೊಡಗು ಜೂ.30: ಜುಲೈ 5 ರವರೆಗೆ ಲಾಕ್ ಡೌನ್ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ಇಲ್ಲ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು, ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ತಿಳಿಸಿದ್ದಾರೆ. ಲಾಕ್ ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಬಂದಿದೆ. ಜಿಲ್ಲೆಯಲ್ಲಿ ಜುಲೈ 5 ರವರೆಗೆ ಲಾಕ್‌ಡೌನ್ ಇರುತ್ತದೆ. ಅಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಂಸ್ಟೇ ವಿರುದ್ದ ಕ್ರಮ

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ Read More »

ಕರ್ನಾಟಕ

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba,ಮುಂಬೈ ಜೂ.30: ಹಿರಿಯ ನಟ ನಾಸೀರುದ್ದೀನ್​ ಶಾ ನ್ಯುಮೋನಿಯಾ ತೊಂದರೆಯಿಂದಾಗಿ ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್​ ಮಾಹಿತಿ ನೀಡಿದ್ದಾರೆ. ನಾಸೀರುದ್ದೀನ್​ ಶಾ ಅವರು ಎರಡು ದಿನಗಳ ಕಾಲ ಮೆಡಿಕಲ್​ ಅಬ್ಸರ್ವೇಷನ್​ನಲ್ಲಿ ಇರಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್​ ಕಂಡುಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ಜೊತೆಗೆ ಶಾ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!! Read More »

ರಾಷ್ಟ್ರೀಯ ನ್ಯೂಸ್
Scroll to Top