Mangalore

ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.12: ಸಾರಿಗೆ ನೌಕರರ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ‌. ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇದೆ.   ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಡಿಪೋದಿಂದ ಬಸ್ ಗಳು ನಿಲ್ದಾಣಕ್ಕೆ ಬಂದಿವೆ. ಎಲ್ಲ ತಾಲೂಕುಗಳಿಗೆ ಬಸ್ ಸಂಚರಿಸುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 300 ಬಸ್ಸುಗಳ ಓಡಾಟ ನಡೆದಿದೆ.  

ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ Read More »

ಕರಾವಳಿ, ಕರ್ನಾಟಕ

ವಸತಿ ಸಚಿವ ವಿ ಸೋಮಣ್ಣ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12 :ರಾಜ್ಯ ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಡಿಸೆಂಬರ್ 13 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 13 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ, ಸಂಜೆ 5.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿರುವ ಸರ್ವಧರ್ಮ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ

ವಸತಿ ಸಚಿವ ವಿ ಸೋಮಣ್ಣ ಜಿಲ್ಲಾ ಪ್ರವಾಸ Read More »

ಕರಾವಳಿ

ರಾಜ್ಯದ 15 ಸ್ಥಳಗಳನ್ನು ಮತ್ಸ್ಯಧಾಮ ಎಂದು ಘೋಷಿಸಲು ಜೀವವೈವಿಧ್ಯ ಮಂಡಳಿ ಶಿಫಾರಸ್ಸು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಮಲೆನಾಡಿನಲ್ಲಿ ಹುಟ್ಟಿ ಹರಿಯುವ ಹಲವು ನದಿಗಳಲ್ಲಿರುವ ಅಪರೂಪದ ಮೀನು ವೈವಿಧ್ಯತೆಇರುವ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಮೀನುಗಾರಿಕೆ ಕಾಯಿದೆ ಅಡಿಯಲ್ಲಿ ಮತ್ಸ್ಯಧಾಮ ಎಂದು ಘೋಷಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ.ಮೀನುಗಾರಿಕೆ ಸಚಿವಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಭೇಟಿ ಮಾಡಿ ಶಿಫಾರಸ್ಸು ವಿವರ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಚಿವರು, ಮತ್ಸ್ಯಧಾಮಗಳ ಮೂಲಕ ಅಪರೂಪದ ಮೀನು ಸಂತತಿ ಸಂರಕ್ಷಣೆ ಸಾಧ್ಯವಾಗಿದ್ದು,ಇದು

ರಾಜ್ಯದ 15 ಸ್ಥಳಗಳನ್ನು ಮತ್ಸ್ಯಧಾಮ ಎಂದು ಘೋಷಿಸಲು ಜೀವವೈವಿಧ್ಯ ಮಂಡಳಿ ಶಿಫಾರಸ್ಸು Read More »

ಕರಾವಳಿ

ದೇವಿಪ್ರಸಾದ್ ಕಾನತ್ತೂರು ರವರಿಗೆ ಹೃದಯವಂತರು 2020’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಹೃದಯವಾಹಿನಿ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಸ್ ಯೂನಿಯನ್ ಆಶ್ರಯದಲ್ಲಿ ಇಂದು ಮಂಗಳೂರಿನ ಪುರಭವನದಲ್ಲಿ ನಡೆದ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗ್ರಾಮೀಣ ಪಶುವೈದ್ಯಕೀಯ ಸೇವೆ, ಸಮಾಜ ಸೇವೆ ಹಾಗೂ ಧಾರ್ಮಿಕ ಸೇವೆಗಾಗಿ ಪಂಜದ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಹಲವು ಸಾಧಕರಿಗೆ ‘ಹೃದಯವಂತರು 2020’ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ಡಾ.ಮಹೇಶ್ ಜೋಷಿ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕನ್ನಡ ಸಮ್ಮೇಳನ ಅಧ್ಯಕ್ಷ

ದೇವಿಪ್ರಸಾದ್ ಕಾನತ್ತೂರು ರವರಿಗೆ ಹೃದಯವಂತರು 2020’ ಪ್ರಶಸ್ತಿ ಪ್ರದಾನ Read More »

ಕರಾವಳಿ

ಬಿಳಿನೆಲೆ -ಕೈಕಂಬ :ರಾಂಪತ್ರೆ ಕೊಯ್ಯಲು ಕಾಡಿಗೆ ತೆರಳಿದ್ದ ವ್ಯಕ್ತಿ ವಾರದ ಬಳಿಕ ಶವವಾಗಿ ಪತ್ತೆ ➤ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಡಿ.12: ರಾಂಪತ್ರೆ ಕೊಯ್ಯಲು ಕಾಡಿಗೆ ತೆರಳಿದ್ದ ವ್ಯಕ್ತಿ ವಾರದ ಬಳಿಕ ಶವವಾಗಿ ಪತ್ತೆಯಾದ ಘಟನೆ ಕಡಬ ತಾಲೂಕಿನ ಬಿಳಿನೆಯಲ್ಲಿ ವರದಿಯಾಗಿದೆ.  ಬಿಳಿನೆಲೆ ಗ್ರಾಮದ ಮೂಳೆ ನಿವಾಸಿ ವೆಂಕಪ್ಪ ಗೌಡ ಹಾಗೂ ಬಾಲಚಂದ್ರ ಎಂಬುವರು ಡಿ.05 ರಂದು ರಾಂಪತ್ರೆ ಕೊಯ್ಯಲು ಭಾಗ್ಯ ಮಲೆ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ.  ತೆರಳುವ ಮುನ್ನ ಡಿ.08 ಅಥವಾ ಡಿ.09 ರಂದು ಕಾಡಿನಿಂದ ಹಿಂತಿರುಗಿ ಬರುವುದಾಗಿ ಮನೆಯವರಲ್ಲಿ ತಿಳಿಸಿ ಪ್ರತಿ ವರ್ಷದಂತೆ ಈ ಭಾರಿಯು ತೆರಳಿದ್ದಾರೆ. ಆದರೆ ಡಿ.11

ಬಿಳಿನೆಲೆ -ಕೈಕಂಬ :ರಾಂಪತ್ರೆ ಕೊಯ್ಯಲು ಕಾಡಿಗೆ ತೆರಳಿದ್ದ ವ್ಯಕ್ತಿ ವಾರದ ಬಳಿಕ ಶವವಾಗಿ ಪತ್ತೆ ➤ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಕೊಪ್ಪರಿಗೆ ಏರುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.12: ಹೆಸರಾಂತ ನಾಗಕ್ಷೇತ್ರ, ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಜಾತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಷಷ್ಠಿಯ ಪ್ರಮುಖ ಆಕರ್ಷಣೆಯಾಗಿರುವ ಬ್ರಹ್ಮ ರಥ ಕಟ್ಟುವ ಕೆಲಸ ಈ ಹಿಂದೆಯೇ ಆರಂಭಗೊಂಡಿದೆ. ಡಿ.11 ರ ಕಳೆದ ದಿನ ಕಾರ್ತಿಕ ಬಹುಳ ಏಕಾದಶಿಯ ದಿನ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆಯನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆಯುವ ಕಾರ್ಯಕ್ರಮ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಕೊಪ್ಪರಿಗೆ ಏರುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ Read More »

ಕರಾವಳಿ

ಪುತ್ತೂರು :ಸಾರಿಗೆ ನೌಕರರ ದಿಢೀರ್ ಮುಷ್ಕರ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ಸಾರಿಗೆ ನೌಕರರ ಮುಷ್ಕರದ ಬಿಸಿ ಕರಾವಳಿಗೂ ತಟ್ಟಿದೆ. ಇಂದು ಪುತ್ತೂರಿನಲ್ಲಿ  KSRTC ಬಸ್ಸ್ ಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದೆ. ಆದರೆ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಬಸ್ಸ್ಗಳು ಕಂಡು ಬಂದಿರಲಿಲ್ಲ. ಬಳಿಕ ಡಿಪೋದಿಂದ ಬಸ್ ಗಳನ್ನು ತಂಗುದಾಣಕ್ಕೆ ತಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಜನಸಾಮಾನ್ಯ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿದ್ದು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ದಿಢೀರ್ ಮುಷ್ಕರದಿಂದ ಮುಂಜಾನೆಯೇ KSRTC ವಿಭಾಗೀಯ ನಿಯಂತ್ರಣಾಧಿಕಾರಿ,

ಪುತ್ತೂರು :ಸಾರಿಗೆ ನೌಕರರ ದಿಢೀರ್ ಮುಷ್ಕರ.! Read More »

ಕರಾವಳಿ

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಡಿ.12: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾ.ಹೆ. 75ರಲ್ಲಿ ಗುರುವಾರ ಇಳಿಸಂಜೆ ಬೈಕ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ವಿಟ್ಲದ ಜನಪ್ರಿಯ ಬಾಣಸಿಗ ಕಾಂತಡ್ಕ ಶಂಕರನಾರಾಯಣ ಭಟ್ (58) ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಬರುತ್ತಿದ್ದ ಅವರ ಬೈಕ್, ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಘಟಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು Read More »

ಕರಾವಳಿ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ. ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ್ದು, 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ.ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗಿತ್ತೋ ಅಥವಾ ಗೋ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ.   ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top