Mangalore

ಉಡುಪಿ: ಬೀದಿ ನಾಯಿಯಿಂದ ಗಾಯಗೊಂಡಿದ್ದ ನವಿಲಿನ ರಕ್ಷಣೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.07.  ಬೀದಿನಾಯಿಯಿಂದ ಗಾಯಗೊಂಡಿದ್ದ ಹೆಣ್ಣು ನವಿಲನ್ನು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ್ ವೊಲಕಾಡ್ ಅವರು ರಕ್ಷಿಸಿದ ಘಟನೆ ಉಡುಪಿಯ ಭಹ್ಮಗಿರಿಯಲ್ಲಿ ನಡೆದಿದೆ. ಬೀದಿ ನಾಯಿಯೊಂದು ನವಿಲಿನ ಮೇಲೆ ದಾಳಿ ಮಾಡಿದ್ದು, ಹಾರಲು ಸಾಧ್ಯವಾಗದೆ ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದೆ.ನವಿಲು ಕೆಸರಿನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ನಿತ್ಯನಾಡು ವೊಳಕಾಡುಗೆ ಮಾಹಿತಿ ನೀಡಿದ್ದಾರೆ. ಕೂಡಲೇ ನವಿಲನ್ನು ತನ್ನ ರಕ್ಷಣೆಗೆ ತೆಗೆದುಕೊಂಡು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಗಾಯಗೊಂಡ ಹಕ್ಕಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಅರಣ್ಯ ಇಲಾಖೆ ಘೋಷಿಸಿದೆ.

ಉಡುಪಿ: ಬೀದಿ ನಾಯಿಯಿಂದ ಗಾಯಗೊಂಡಿದ್ದ ನವಿಲಿನ ರಕ್ಷಣೆ Read More »

ಕರಾವಳಿ

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ತಗುಲಿದ ಬೆಂಕಿ ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಸುಳ್ಯ, ಆ.07. ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ರಬ್ಬರ್ ಸ್ಕ್ರಾಪ್, ಶೀಟು ಸೇರಿದಂತೆ ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ಅವರ ಮನೆಯ ಸಮೀಪದಲ್ಲಿರುವ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ರಬ್ಬರ್ ಸ್ಕ್ರಾಪ್ ಹಾಗೂ ಶೀಟುಗಳಿಗೆ ತಗುಲಿದ್ದು, ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿದೆ. ಕೂಡಲೇ ರಮಾದೇವಿ ಕಳಗಿ ಅವರು ಸ್ಥಳೀಯರಿಗೆ

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ತಗುಲಿದ ಬೆಂಕಿ ಅಪಾರ ನಷ್ಟ Read More »

ಕರಾವಳಿ

ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ       

(ನ್ಯೂಸ್ ಕಡಬ)newskadaba.comಸುಳ್ಯ, ಆ.07. ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಕಂಡುಬಂದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದ್ದು, ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.

ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ        Read More »

ಕರಾವಳಿ

ದ.ಕ. ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಸಂಚರಿಸಲು ಅನುಮತಿ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

ದ.ಕ. ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಸಂಚರಿಸಲು ಅನುಮತಿ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ Read More »

ಕರಾವಳಿ

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                    

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ ಎಂದು ವರದಿ ತಿಳಿಸಿದೆ. 40 ವರ್ಷದ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಕುಸಿದು ಬಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೋವಾದಿಂದ ಹುಬ್ಬಳ್ಳಿಗೆ ಇದೇ ಮಾರ್ಗವಾಗಿ ತೆರಳುತಿದ್ದ ಖಾಲಿ ಲಾರಿಯು ಸೇತುವೆಯಿಂದ ಕೆಳಗೆ ಬಿದ್ದಿದೆ. ಬಳಿಕ ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು

ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                     Read More »

ಕರಾವಳಿ

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.06.  ಆಟೋ ಚಾಲಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೃತಪಟ್ಟವರನ್ನು ಮಹಮ್ಮದ್(48) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ ಎಂದು ವರದಿ ತಿಳಿಸಿದೆ.

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ,ಆ.06. ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.ಕಲ್ಮಾಡಿ ಮನೆಯಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ನಡೆಯಲಿದ್ದು, ಇಂದೇ ಅಂತ್ಯಕ್ರಿಯೆ ನಡೆಯಲಿದೆ.

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ Read More »

ಕರಾವಳಿ

ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಆ.8ರವರೆಗೆ ರದ್ದು

(ನ್ಯೂಸ್ ಕಡಬ)newskadaba.com ಮಂಗಳೂರು,ಆ.06. ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಆಗಸ್ಟ್ 8ರ ನಂತರವೇ ಪುನರಾರಂಭಗೊಳ್ಳಲಿದೆ ಎಂದು ಮೈಸೂರು ರೈಲ್ವೆ ವಿಭಾಗ ಮಾಹಿತಿ ನೀಡಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿತ್ತು. ಪರಿಣಾಮ 12 ರೈಲುಗಳ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಘಟನಾ ಸ್ಥಳದ ಪಕ್ಕದಲ್ಲಿ ರಿಟೈನರ್ ವಾಲ್ ನಿರ್ಮಾಣ ಕಾರ್ಯವು ತ್ವರಿತ ಗತಿಯಲ್ಲಿ ಸಾಗುತ್ತಿದೆ. ಟ್ರ್ಯಾರಕ್

ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಆ.8ರವರೆಗೆ ರದ್ದು Read More »

ಕರಾವಳಿ
Scroll to Top