Mangalore

ಉಡುಪಿ: ಸಚಿವ ಮಾಧುಸ್ವಾಮಿ ಶ್ರೀ ಕೃಷ್ಣಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 26: ಶ್ರೀಕೃಷ್ಣ ಮಠಕ್ಕೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಪಿ.ಮಾಧುಸ್ವಾಮಿ ಕಳೆದ ದಿನ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸಿದ ಸಚಿವರು, ದೇವರ ದರ್ಶನ ಪಡೆದು ಪುರೋಹಿತ ಲಕ್ಷ್ಮೀಶಾಚಾರ್ಯ ಅವರಿಂದ ಪ್ರಸಾದ ಸ್ವೀಕರಿಸಿದರು.   ಸಚಿವರ ಭೇಟಿ ವೇಳೆ ಶಾಸಕ ಕೆ.ರಘುಪತಿ ಭಟ್,ವ್ಯವಸ್ಥಾಪಕ ಗೋವಿಂದ್ರಾಜ್ , ಪಿಆರ್ ಒ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.  

ಉಡುಪಿ: ಸಚಿವ ಮಾಧುಸ್ವಾಮಿ ಶ್ರೀ ಕೃಷ್ಣಮಠಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಮಾಜಿ ಫುಟ್ ಬಾಲ್ ಆಟಗಾರ ಡಿಗೊ ಮರುಡೋನಾ ನಿಧನ

(ನ್ಯೂಸ್ ಕಡಬ) newskadaba.com  ನ. 26: ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಗೊ ಮರುಡೋನಾ ರವರು ಹಲವು ವರ್ಷಗಳಿಂದ ಅಸೌಖ್ಯದಿಂದ ಅವರು ಕಳೆದ ದಿನ ಹೃದಯಾಘಾತದಿಂದ ನಿಧನರಾಗಿದ್ದಾರೆ.     ಅರ್ಜೆಂಟೀನಾ ರಾಷ್ಟ್ರೀಯ ಫುಟ್ ಬಾಲ್ ತಂಡಕ್ಕೆ ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು. ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು. 15 ನೇ ವಯಸ್ಸಿನ ಮೆರೆಡೋನ ಅರ್ಜೆಂಟಿನೋಸ್

ಮಾಜಿ ಫುಟ್ ಬಾಲ್ ಆಟಗಾರ ಡಿಗೊ ಮರುಡೋನಾ ನಿಧನ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಶ್ಲೀಲ ಫೋಟೊ ವೈರಲ್ ಬೆದರಿಕೆ ➤ ಕಿಲಾಡಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಫೇಸ್ಬುಕ್ ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿ ಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ.

ಮಂಗಳೂರು: ಅಶ್ಲೀಲ ಫೋಟೊ ವೈರಲ್ ಬೆದರಿಕೆ ➤ ಕಿಲಾಡಿ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಚರಂಡಿಯಲ್ಲಿ ಹೂತುಹೋದ ಕಂಟೈನರ್ ➤ ಹೆದ್ದಾರಿ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ರಾ.ಹೆ. 66 ಪಡುಪಣಂಬೂರು ಬಳಿ ಕಂಟೈನರ್ ಚರಂಡಿಯಲ್ಲಿ ಹೂತು ಹೋಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.   ಬೈಕಂಪಾಡಿಯಿಂದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿಯ ಗೋಡೌನ್ ನಲ್ಲಿ ಸರಕು ಲೋಡ್ ಮಾಡಲು ಹೆದ್ದಾರಿಯಿಂದ ಒಳಗಡೆ ಕಂಟೈನರ್ ಹೋಗಲು ಯತ್ನಿಸಿದಾಗ ಇಕ್ಕಟ್ಟಾದ ರಸ್ತೆಯಲ್ಲಿ ಚಕ್ರ ಹೂತುಹೋಗಿವೆ. ಈ ಸಂದರ್ಭ ಕಂಟೈನರ್ ಹಿಂಭಾಗ ರಸ್ತೆಗೆ ತಾಗಿ ಜಖಂಗೊಂಡಿದೆ. ಕಂಟೈನರ್ ಹೂತುಹೋದ ಪರಿಣಾಮ ಅರ್ಧಭಾಗ ಹೆದ್ದಾರಿಯಲ್ಲಿ ಉಳಿದಿದೆ. ಇದರಿಂದಾಗಿ ಮಂಗಳೂರಿನಿಂದ

ಚರಂಡಿಯಲ್ಲಿ ಹೂತುಹೋದ ಕಂಟೈನರ್ ➤ ಹೆದ್ದಾರಿ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಬಂಟ್ವಾಳ: ಪಣೋಲಿಬೈಲ್ ಕಲ್ಲುರ್ಟಿ ದೈವಸ್ಥಾನದಲ್ಲಿ ನಾಗ ತಂಬಿಲ ಸೇವೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 25: ದೈವಸ್ಥಾನದ ಆಡಳಿತಾಧಿಕಾರಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಉಪಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ಐತಿಹಾಸಿಕ ಹಿನ್ನಲೆಯುಳ್ಳ ಸಜಿಪ ಮೂಡ ಗ್ರಾಮದ ತುಳುನಾಡಿನ ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ನಾಗ ತಂಬಿಲ ಸೇವೆ ನಡೆಯಿತು.     ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ರವಿಶಂಕರ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಹಾಗೂ ಬಂಟ್ವಾಳ ಕಂದಾಯ ಸಿಬ್ಬಂದಿ ವರ್ಗ ಸಹಿತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.  

ಬಂಟ್ವಾಳ: ಪಣೋಲಿಬೈಲ್ ಕಲ್ಲುರ್ಟಿ ದೈವಸ್ಥಾನದಲ್ಲಿ ನಾಗ ತಂಬಿಲ ಸೇವೆ Read More »

ಕರಾವಳಿ

ಬೆಳ್ತಂಗಡಿ: ಮೆಸ್ಕಾಂ ನಿವೃತ್ತ ಅಧೀಕ್ಷಕ ನಾರಾಯಣ ಪೂಜಾರಿ ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 25: ಮಂಗಳೂರಿನ ಅತ್ತಾವರದಲ್ಲಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪುತ್ತೂರು ಸರ್ವೆ ಗ್ರಾಮದ ಸರ್ವೆದೋಳ ನಿವಾಸಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಪೂಜಾರಿ(61) ಎಂದು ಗುರುತಿಸಲಾಗಿದೆ.     ಕಳೆದ ನಾಲ್ಕು ವರ್ಷಗಳ ಹಿಂದೆ ಬೆಳ್ತಂಗಡಿ ಮೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರಾಗಿ ಕಾರ್ಯನಿರ್ವಹಿಸಿದ್ದು, ನಂತರ ಪುತ್ತೂರಿಗೆ ವರ್ಗಾವಣೆಗೊಂಡಿದ್ದರು. ಎರಡು ವರ್ಷಗಳ ನಂತರ ಅವರು ಅಧೀಕ್ಷಕ ಇಂಜಿನಿಯರ್ ಆಗಿ ಮಂಗಳೂರಿನ ಅತ್ತಾವರಕ್ಕೆ ವರ್ಗಾವಣೆಗೊಂಡಿದ್ದು, ಇವರು ಏ.30 ಕ್ಕೆ

ಬೆಳ್ತಂಗಡಿ: ಮೆಸ್ಕಾಂ ನಿವೃತ್ತ ಅಧೀಕ್ಷಕ ನಾರಾಯಣ ಪೂಜಾರಿ ನಿಧನ Read More »

ಕರಾವಳಿ

ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ ನ. 25: ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್​ ನೋಟ್​ ಬರೆದಿಟ್ಟಿದ್ದಾರೆ. ಬಾಳೆ ಹೊನ್ನೂರಿನ ರಂಭಾಪುರಿ ಶಾಖಾಮಠವಾದ ಆಲೂರು ತಾಲೂಕಿನ ಕಾರ್ಜುವಳ್ಳಿಯ ಮಠದ ಪೀಠದ ಜವಾಬ್ದಾರಿಯನ್ನು 2006ರಲ್ಲಿ ಇವರು ವಹಿಸಿಕೊಂಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಲಾಕ್​ಡೌನ್​ ಆದಾಗಿನಿಂದ ಮಠಕ್ಕೆ ಭಕ್ತರು ಬರುತ್ತಿರಲಿಲ್ಲ. ಸ್ವಾಮೀಜಿ ಒಬ್ಬರೇ ಆಗಿದ್ದರು. ಒಂಟಿತನದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶ್ರೀ

ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರ್ನಾಟಕ

ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಾಲೂಕು ಭೇಟಿಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಮೂಡಬಿದ್ರೆ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ದೂರು ಸ್ವೀಕರಿಸುವ ತಾಲೂಕು ಕೆಂದ್ರಗಳು: ನವೆಂಬರ್ 26 ರಂದು ಬೆಳಿಗ್ಗೆ 11ಕ್ಕೆ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ, ಹಾಗೂ ಮಧ್ಯಾಹ್ನ 2.30 ಕ್ಕೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ, ನವೆಂಬರ್ 27 ಬೆಳಿಗ್ಗೆ 11 ಘಂಟೆಗೆ

ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 25: ಸಾಲ ಕೇಳಲು ಹೋದ ಪತಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಿಪಿಸಿದ ಆರೋಪದಲ್ಲಿ ಐವರ ವಿರುದ್ಧ ಮೈಸೂರು ವಿಜಯ ನಗರದ ಪಲ್ಲವಿ ಪಿ.(38) ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.   ವೀರಭದ್ರೇಶ್ವರ ಸ್ಟೋನ್ ಕ್ರಷರ್ ಮಾಲಕಿ ಪ್ರೇಮ, ಅವರ ಗಂಡ ಕರೀಗೌಡ, ಪೆಟ್ರೋಲ್ ಬಂಕ್ ಮಾಲಕ ಜಿತೇಂದ್ರ ಗೌಡ, ಅವರ ಬಂಧು ಗಳಾದ ಅಶೋಕ್ ಎನ್.ಟಿ, ರಾಜೇಶ್ ಎನ್.ಟಿ ಎಂಬವರು ತನಗೆ ಬರಬೇಕಾದ

ಪತಿಯ ಆತ್ಮಹತ್ಯೆಗೆ ಪ್ರಚೋದನೆ ➤ ಐವರ ವಿರುದ್ಧ ದೂರು ದಾಖಲಿಸಿದ ಪತ್ನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 2.900 ಕೋಟಿ ರೂ ➤ ಸಚಿವ ಜೆ.ಸಿ. ಮಾಧುಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಪಶ್ಚಿಮವಾಹಿನಿ ಯೋಜನೆಯಲ್ಲಿ ಕರಾವಳಿಯ ಮೂರು ಜಿಲ್ಲೆಯಲ್ಲಿ ಸುಮಾರು 2.900 ಕೋಟಿ ರೂ. ವೆಚ್ಚದಲ್ಲಿ ತಲಾ 400 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ಉಪ್ಪು ನೀರಿನಿಂದ ಕಂಗೆಟ್ಟ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಂತರ್ಜಲ ವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಚಿಂತನೆ ನಡೆಸಿದ್ದು,

ಕರಾವಳಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 2.900 ಕೋಟಿ ರೂ ➤ ಸಚಿವ ಜೆ.ಸಿ. ಮಾಧುಸ್ವಾಮಿ Read More »

ಕರಾವಳಿ
Scroll to Top