Mangalore

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್             

(ನ್ಯೂಸ್ ಕಡಬ) newskadaba.com ಮಂಗಳೂರು, ಆ.03.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು […]

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್              Read More »

ಕರಾವಳಿ

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.03. ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅವರು

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.02.  ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಎಂ ಶಶಿಧರ ಹೆಗ್ಡೆ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದಲ್ಲಿ ಸನ್ಮಾನ ಮಾಡಲಾಯಿತು. ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಬಸ್‌ನ‌‌ ಚಾಲಕ ಮತ್ತು‌ ನಿರ್ವಾಹಕ ಪ್ರಯಾಣಿಕರಿದ್ದ ಬಸ್ ಅನ್ನು ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆ ಬಾಗಿಲಿಗೆ ತೆಗೆದುಕೊಂಡು ಹೋಗಿ ವಿದ್ಯಾರ್ಥಿಯ ಪ್ರಾಣ ರಕ್ಷಣೆ ಮಾಡಿದ ಬಸ್ ಚಾಲಕ ನಿರ್ವಾಹಕರಾದ ಗಜರಾಜ್ ಕುಂದರ್ ಪೂಜಾರಿ, ಮಹೇಶ್ ಪೂಜಾರಿ,ಸುರೇಶ್ ಬಜ್ಪೆಯವರನ್ನು

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ

(ನ್ಯೂಸ್ ಕಡಬ) newskadaba.com ಉಡುಪಿ, ಆ.02. ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ ಎನ್ನಲಾಗಿದೆ.  

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್  

(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಮುಂಜಾನೆ ನಡೆದಿದೆ. ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ. ಗುಡ್ಡ ಕುಸಿತ ಸಂಭವಿಸುವ ಸಮಯ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್   Read More »

ಕರಾವಳಿ, ಕ್ರೈಮ್ ನ್ಯೂಸ್

   ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ನೆರೆ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶಗಳ ಭೇಟಿ ನೀಡಿದ ನಂತರ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

   ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ Read More »

ಕರಾವಳಿ

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                              

(ನ್ಯೂಸ್ ಕಡಬ)newskadaba.com ಉಡುಪಿ, ಆ.01. ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಮನೆಯಿಂದ ಹೋದವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಅವನು 5 ಅಡಿ 4 ಇಂಚು ಎತ್ತರ, ಎಣ್ಣೆಯುಕ್ತ ಕಂದು ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಅವರು ಕನ್ನಡ, ತುಳು, ಹಿಂದಿ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ ಎಂದು ವರದಿ ತಿಳಿಸಿದೆ.    

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                               Read More »

ಕರಾವಳಿ

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು ಜುಲೈ 31 ರಂದು ಬುಧವಾರ ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಖಾದರ್, ತುಳುವಿನ ಸಾಂಸ್ಕೃತಿಕ ಮತ್ತು ಭಾಷಿಕ ಮಹತ್ವವನ್ನು ಒತ್ತಿ ಹೇಳಿದರು, “ಕಲಾವಿದರು, ನಾಟಕಕಾರರು ಮತ್ತು ಚಲನಚಿತ್ರ ನಿರ್ಮಾಪಕರು ಭಾಷೆಯನ್ನು ಜಾಗತಿಕವಾಗಿ ಗಮನಾರ್ಹವಾಗಿ ಪ್ರಚಾರ ಮಾಡಿದ್ದಾರೆ. ತುಳು ಲೇಖಕರು ಅದರ ಖ್ಯಾತಿಯನ್ನು ಬಹಳವಾಗಿ ಹೆಚ್ಚಿಸಿದ್ದಾರೆ. ತುಳುವಿನ ಪ್ರೀತಿ, ಸಂಪ್ರದಾಯ, ಪರಂಪರೆಯನ್ನು

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್ Read More »

ಕರಾವಳಿ

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top