Mangalore

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 16: 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಿಸುವ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದೆ. ತರಗತಿಗಳಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರವನ್ನು ನಿಗದಿ ಪಡಿಸಿ, ಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದ್ದು, ಹಿಂದಿನ ವರ್ಷಗಳಂತೆ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ವಿತರಿಸಲಿದ್ದು, ಈ ವಿಷಯದಲ್ಲಿ ಕೆಳಕಂಡ ನಿರ್ದೇಶನಗಳನ್ನು ಅನುಸರಿಸಲು ಆದೇಶಿಸಿದೆ. 2020-21ನೇ ಸಾಲಿಗೆ […]

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ Read More »

ಕರ್ನಾಟಕ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 16: ಸ್ನೇಹಿತರ ನಡುವೆ ಜಗಳ ನಡೆದ ಪರಿಣಾಮ ಓರ್ವನ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಈ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.ತಿರುವನಂತಪುರ ನಿವಾಸಿಯಾ ತಲೆಗೆ ಬಡಿದು ಹತ್ಯೆ ಮಾಡಿದಘಟನೆ ರವಿವಾರ ರಾತ್ರಿ ನಡೆದಿದೆ. ಕೊಲೆಗೀಡಾದವರನ್ನು ತಿರುವನಂತಪುರದ ವಿಜಯನ್ ಮೇಸ್ತ್ರಿ ( 55) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಚೆಂಗಳ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಕೃತ್ಯ ನಡೆದಿದೆ. ಜೊತೆಗಿದ್ದ ತಮಿಳುನಾಡು ಮೂಲದ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಜಯನ್ ಹಾಗೂ ಸ್ನೇಹಿತನ ನಡುವೆ ಉಂಟಾದ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ Read More »

ಕರ್ನಾಟಕ

ಸುಳ್ಯ :ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ ನ. 16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಕಂದ ಮಹಿಳಾ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಜಾಲ್ಸೂರು ಗ್ರಾಮ ಮಟ್ಟದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನವು ಅಡ್ಕಾರು ಅರಣ್ಯ ಇಲಾಖಾ ಸಭಾಂಗಣದಲ್ಲಿ ನಡೆಯಿತು. ಕಿಶೋರಿ ಸಂಘದ ಅಧ್ಯಕ್ಷೆ ಕು.ಗೌತಮಿ ಬಿ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಷಾಪ್ರಸಾದ್ ರೈ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಕಂದ ಮಹಿಳಾ ಮಂಡಲ

ಸುಳ್ಯ :ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಟೊಮೇಟೊ ಟೆಂಪದಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕೇರಳ ನ. 16: ಟೊಮ್ಯಾಟೋ ಬಾಕ್ಸ್ ಎಂಬುದಾಗಿ ತಿಳಿಸಿ, ಪೊಲೀಸರ ಕಣ್ ತಪ್ಪಿಸಿ, ಮೇಲೆ ಟೊಮ್ಯಾಟೋ, ಅದರ ಕೆಳಗೆ ಜಿಲೆಟಿನ್, ಡಿಟೋನೇಟರ್ ಗಳನ್ನು ಸಾಗಿಸುತ್ತಿದ್ದಂತ ಪ್ರಕರಣವನ್ನು ತಮಿಳುನಾಡು-ಕೇರಳ ಗಡಿ ಭಾಗದಲ್ಲಿ ಪೊಲೀಸರು ಭೇದಿಸಿದ್ದಾರೆ.   ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೇರಳ ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಯಮತ್ತೂರಿನಿಂದ ಕೇರಳಕ್ಕೆ ಟೆಂಪೋ ಒಂದರಲ್ಲಿ 30 ಬಾಕ್ಸ್ ಟೊಮ್ಯಾ ಟೋ ಸಾಗಿಸಲಾಗುತ್ತಿತ್ತು.ತಮಿಳುನಾಡು ಹಾಗೂ ಕೇಳರ ಗಡಿಭಾಗ ವಾಳಯಾರ್ ಚೆಕ್ ಪೋಸ್ಟ್ ಬಳಿಯಲ್ಲಿ ಟೊಮ್ಯಾಟೋ ತುಂಬಿಕೊಂಡು ಬಂದಂತ ಟೆಂಪೋವನ್ನು ತಪಾಸಣೆಗೆ

ಟೊಮೇಟೊ ಟೆಂಪದಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 16: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ದಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭಗೊಂಡಿವೆ. ಇದರಿಂದಾಗಿ ಕ್ಷೇತ್ರದಲ್ಲಿ ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಿವೆ.   ದೀಪಾವಳಿ ಪ್ರಯುಕ್ತ ಪಲ್ಲಕ್ಕಿ ಮತ್ತು ಬಂಡಿ ಉತ್ಸವ ನೆರವೇರಿದವು. ಕ್ಷೇತ್ರದಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಉತ್ಸವಾದಿಗಳು ಆರಂಭಗೊಳ್ಳಲಿವೆ. ಲಕ್ಷ ದೀಪೋತ್ಸವದ ನಂತರ ರಥ ಬೀದಿಯಲ್ಲಿ ರಥೋತ್ಸವಗಳೂ ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌. ತಿಳಿಸಿದ್ದಾರೆ.    

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ Read More »

ಕರಾವಳಿ

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ನ.17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಡಳಿತ ಹೇಳಿದೆ.ವಿದ್ಯಾರ್ಥಿಗಳು ಕೋವಿಡ್‌ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಕೋವಿಡ್‌ ಟೆಸ್ಟ್‌ ಮ್ಯಾಪಿಂಗ್‌ ಕಾಲೇಜುಗಳಿಗೆ ಲಿಂಕ್‌ ಮಾಡಲಾಗಿದೆ. ಕೋವಿಡ್‌ ಟೆಸ್ವ್‌ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ನ.17ರಂದು ಕಾಲೇಜು ಆರಂಭವೆಂದು

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ Read More »

ಕರಾವಳಿ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಂಬಾರು, ನ.15. ಬಾಣಂತಿ ಮಹಿಳೆಯೋರ್ವರು ತೀವ್ರ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಕೊಂಬಾರು ಗ್ರಾಮದ ಮಣಿಬಾಂಡ ಸಮೀಪದ ಕೆರೊಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ(35) ಎಂದು ಗುರುತಿಸಲಾಗಿದೆ. ಏಳನೇ ಗರ್ಭಿಣಿಯಾಗಿದ್ದ ಈಕೆಗೆ ಭಾನುವಾರದಂದು ಮನೆಯಲ್ಲೇ ಹೆರಿಗೆಯಾಗಿದ್ದು, ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆಯನ್ನು ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಅದಾಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮಗು ಆರೋಗ್ಯವಾಗಿದ್ದು, ಪುತ್ತೂರಿನ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು Read More »

ಕರಾವಳಿ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 15: ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ.   ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂಟೋ ಕಣ್ಣಾಸ್ಪತ್ರೆಗೆ ದಾಖಲಾಗಿದ್ದು, ಈತನ ಎರಡೂ ಕಣ್ಣುಗಳಿಗೂ ತೀವ್ರ ಹಾನಿಯಾಗಿದೆ. ಸುವೇಲ್ ನಿನ್ನೆ ರಾತ್ರಿ ಪಟಾಕಿ ಹೂವಿನ ಕುಂಡ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.! Read More »

ಕರಾವಳಿ
Scroll to Top