Mangalore

Death, deadbody, Waterfall

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಜು.30. ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪುಯಲ್ಲಿ ವರದಿಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು, ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.29. ಕಡಲ್ಕೊರೆತ ಪರಿಣಾಮ ಬೀಚ್ ರಸ್ತೆ ಕುಸಿಯುವ ಭೀತಿ ಉಂಟಾಗಿದ್ದು, ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್‌ಗೆ ತೆರಳುವ ಸಂಪರ್ಕ ರಸ್ತೆಯ ಅಡಿಭಾಗಕ್ಕೆ ಅಲೆಗಳು ಅಪ್ಪಳಿಸುತ್ತಿವೆ. ಹೀಗಾಗಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ರಸ್ತೆ ಕುಸಿಯುವ ಸಾಧ್ಯತೆ ಇರುವ ಹಿನ್ನೆಲೆ ಬೀಚ್‌ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ  Read More »

ಕರಾವಳಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗುತ್ತಿವೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿದೆ. ಹಳಿ ದುರಸ್ತಿಪಡಿಸುವ ಕಾರ್ಯ ಮುಂದುವರಿದಿದ್ದು, ಇದರಿಂದ ಕೆಲ ರೈಲುಗಳ ಸಂಚಾರ ಜುಲೈ ೨೯ರವರೆಗೆ ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಹಳಿಯ ಕೆಳಭಾಗದಲ್ಲಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ      Read More »

ಕರಾವಳಿ

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಭೂಕುಸಿತ ಸಂಭವಿಸಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಡಿಸಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಸಮಸ್ಯೆಗೆ ಕಾರಣ ಹಾಗೂ ಪರಿಹಾರಕ್ಕೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.   ಸ್ಥಳದಲ್ಲಿದ್ದ ಎನ್‌ಎಚ್‌ಐ ಅಧಿಕಾರಿಗಳನ್ನು ಡಿಸಿ ತರಾಟೆಗೆ ತೆಗೆದುಕೊಂಡರು. ಸಮಸ್ಯೆಯ ಕುರಿತು ಸಮಗ್ರ ವರದಿ ನೀಡಲು ಎಂಸಿಸಿಗೆ ಸೂಚನೆಗಳನ್ನು ನೀಡಲಾಗಿದೆ. ಎಸಿ ಹರ್ಷವರ್ಧನ್, ಎಂಸಿಸಿ ಜಿಲ್ಲಾಧಿಕಾರಿ, ಎಂಜಿನಿಯರ್ ಮತ್ತು ಎನ್‌ಎಚ್‌ಐ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ Read More »

ಕರಾವಳಿ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ   

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಜ.27.  ಸುಬ್ರಹ್ಮಣ್ಯ ಸಮೀಪದ ರೈಲ್ವೆ ಹಳಿ ಮೇಲೆ ಸಂಜೆ 6:56 ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಮಣ್ಣಿನ ಸವಕಳಿ ಸಂಭವಿಸಿದ್ದು, ಹಲವು ರೈಲು ಸೇವೆಗಳನ್ನು ರದ್ದು ಪಡಿಸಲಾಗಿದೆ. ರದ್ದು ಪಡಿಸಲಾದ  ರೈಲು ಸೇವೆಗಳು ಈ ಕೆಳಗಿನಂತಿವೆ ರೈಲು ಸಂಖ್ಯೆ 16595 KSR ಬೆಂಗಳೂರು – ಕಾರವಾರ ಪಂಚಗಂಗಾ ಸೂಪರ್-ಫಾಸ್ಟ್ ಎಕ್ಸ್‌ಪ್ರೆಸ್, 26.07.2024 ರಂದು ಪ್ರಾರಂಭವಾಗುವ ರೈಲು ಸಂಚಾರ ರದ್ದು ಪಡಿಸಲಾಗಿದೆ. ರೈಲು ಸಂಖ್ಯೆ 16596 ಕಾರವಾರ – ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಸೂಪರ್-ಫಾಸ್ಟ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ    Read More »

ಕರಾವಳಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಆಟೋ ಚಾಲಕ ನಾಪತ್ತೆ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.27. ಆಟೋ ಚಾಲಕರೋರ್ವರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಉಳ್ಳಾದ ಮಡ್ಯಾರ್ ನಿವಾಸಿ ಮೆಲ್ವಿನ್ ಮೋಂತೆರೋ (56) ಎಂದು ಗುರುತಿಸಲಾಗಿದೆ. ಕೋಟೆಕಾರಿನ ಖಾಸಗಿ ಶಾಲೆಯೊಂದರ ಬಳಿ ಬೆಳಗ್ಗೆ ರಿಕ್ಷಾ ಬಾಡಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದಾರೆನ್ನಲಾಗಿದೆ. ರಾತ್ರಿಯಾದರೂ ಮನೆಗೂ ವಾಪಸ್ ಬಾರದೆ ಇದ್ದಾಗ ಮನೆ ಮಂದಿ ಸಂಬಂಧಿಕರ ಬಳಿ ವಿಚಾರಿಸಿದಾಗಲೂ ಪತ್ತೆಯಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಉಳ್ಳಾಲ: ಆಟೋ ಚಾಲಕ ನಾಪತ್ತೆ ದೂರು ದಾಖಲು Read More »

ಕರಾವಳಿ

ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.27. ದಿನಗಳಿಂದ ಕೆಲವು ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಸಂಭವಿಸಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆ ಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ವರದಿ ತಿಳಿಸಿದೆ.

ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ ಸಂಚಾರ ಸ್ಥಗಿತ Read More »

ಕರಾವಳಿ

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಸಂಭವಿಸಿದೆ.ಮಳೆಯಿಂದಾಗಿ ಮೋರಿಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಸ್ವಲ್ಪ ಹೆಚ್ಚು ಕಮ್ಮಿ ಆದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇದನ್ನು ಗಮನಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಮೋರಿಗೆ ಇಳಿದು ವ್ಯಕ್ತಿಯನ್ನು

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು Read More »

ಕರಾವಳಿ
Scroll to Top