Mangalore

ಪುತ್ತೂರು: ಓಮ್ನಿ ಕಾರು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣ ಹೆಚ್ಚಾಗುತ್ತಿದ್ದು, ಕಳೆದ ದಿನ ಮಾರುತಿ ಓಮ್ನಿ ಕಾರೊಂದು ಕಳವಾಗಿದೆ.     ಪುತ್ತೂರು ಉಪ ನೋಂದಣಿ ಕಛೇರಿಗೆ ಬಂದಿದ್ದ ಬಜತ್ತೂರು ನಿವಾಸಿ ಉಮೇಶ್ ಗೌಡ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯ ಚಿಣ್ಣರ ಪಾರ್ಕ್ ಬಳಿ ಪಾರ್ಕಿಂಗ್ ಮಾಡಿದ್ದರು ಅವರು ಕಛೇರಿಯಿಂದ ಕೆಲಸ ಮುಗಿಸಿ ಹಿಂದಿರಗುವಾಗ ಮಾರುತಿ ಓಮ್ನಿ ಕಾರೊಂದು ಕಳವಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.    

ಪುತ್ತೂರು: ಓಮ್ನಿ ಕಾರು ಕಳವು Read More »

ಕರಾವಳಿ

ಕೋಡಿಂಬಾಳ : ಉಂಡಿಲ ಮತ್ತಾಯಿ (ಅಪ್ಪಚ್ಚನ್) ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 08:ಕೋಡಿಂಬಾಳ ಉಂಡಿಲ ನಿವಾಸಿ ಮತ್ತಾಯಿ (ಅಪ್ಪಚ್ಚನ್) 70 ವರ್ಷ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೇರಿ,ಮಗ ಸೊಸೆ,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರದ ಕಾರ್ಯಕ್ರಮಗಳು ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳದಲ್ಲಿ ಇಂದು ಸಂಜೆ 4:00 ಗಂಟೆಗೆ ನಡೆಯಲಿದೆ.  

ಕೋಡಿಂಬಾಳ : ಉಂಡಿಲ ಮತ್ತಾಯಿ (ಅಪ್ಪಚ್ಚನ್) ನಿಧನ Read More »

ಕರಾವಳಿ

ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ

(ನ್ಯೂಸ್ ಕಡಬ) newskadaba.com ಅಮೆರಿಕ  ನ. 08: ಜೋಸೆಫ್​ ಬಿಡೆನ್​ ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಕಮಲ ಹ್ಯಾರಿಸ್​ ಉಪಾಧ್ಯಕ್ಷರಾಗಿದ್ದಾರೆ. ಈ ಮೂಲಕ ಶ್ವೇತಭವನಕ್ಕೆ ಪ್ರವೇಶಿಸಿದ ಬ್ಲಾಕ್​ ಅಮೆರಿಕನ್​ ಅವರಾಗಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ಮೊದಲ ಏಷ್ಯಾನ್​ ಅಮೆರಿಕನ್​ ಮಹಿಳೆ ಇವರಾಗಿದ್ದಾರೆ. ಕ್ಯಾಲಿಫೋರ್ನಿಯಾದ ಸೆನೆಟರ್​ ಆಗಿರುವ ಹ್ಯಾರಿಸ್​, ಈ ಮೊದಲು ಸ್ಯಾನ್​ಫ್ರಾಸಿಸ್ಕೋದಲ್ಲಿ ವಕೀಲರಾಗಿದ್ದರು. ಅಲ್ಲದೇ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್​ ಆಗಿ ಕೂಡ ಸೇವೆ ಸಲ್ಲಿಸಿದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಭಾರತೀಯ ಮೂಲದ ಹ್ಯಾರಿಸ್​ ಶ್ವೇತಭವನ ಪ್ರವೇಶ ಭಾರತೀಯರಲ್ಲಿಯೂ

ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ

(ನ್ಯೂಸ್ ಕಡಬ) newskadaba.com ಅಮೆರಿಕ ನ. 08: ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಿ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಅವರು ದೇಶದ ಜನರಲ್ಲಿ ಒಗ್ಗಟ್ಟು ಮೂಡಿಸುವ ತಮ್ಮ ಇಚ್ಛೆಯನ್ನು ತೋರ್ಪಡಿಸಿದ್ದಾರೆ. ಡೆಲಾವೇರ್ ರಾಜ್ಯದ ವಿಲ್ಮಿಂಗ್ಟನ್ ನ ಗರದಲ್ಲಿರುವ ತಮ್ಮ ಮನೆಯ ಬಳಿ ನೆರೆದಿದ್ದ ಬೆಂಬಲಿಗರನ್ನುದ್ದೇಶಿಸಿ ಮಾತನಾಡುತ್ತಾ ಬೈಡನ್ ಅವರು ಈಗ ಅಮೆರಿಕಕ್ಕೆ ಚಿಕಿತ್ಸಕ ಸಮಯ ಬಂದಿದೆ ಎಂದರು. “ನಾನು ಅಮೆರಿಕ ಅಧ್ಯಕ್ಷನಾಗಿ ಈ ದೇಶದ ಆತ್ಮಕ್ಕೆ ಮರುಜೀವ ತುಂಬಲು, ಈ ದೇಶದ ಬೆನ್ನೆಲುಬಾದ ಮಧ್ಯಮ

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾರ್ಕ್ ರೊಡ್ರಿಗಸ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7:  ಎರಡನೇ ಮಹಾಯುದ್ಧದ ಅನುಭವಿ ಮಾರ್ಕ್ ರೊಡ್ರಿಗಸ್‌ (98) ಅವರು ಕಳೆದ ದಿನದಂದು ನಿಧನರಾದರು. 1922ರ ಎಪ್ರಿಲ್ 25 ರಂದು ಕುಂದಾಪುರದಲ್ಲಿ ಜನಿಸಿದ್ದು,  ಇವರು ಬೆಳೆದಿದ್ದು ಮಂಗಳೂರಿನಲ್ಲಿ. ಇವರು ಸೈಂಟ್‌ ಅಲೋಶಿಯಸ್‌ ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡಿ ನಂತರ 1940ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಬ್ರಿಟಿಷ್ ಭಾರತೀಯ ಸೇನೆಗೆ ಸೇರ್ಪಡೆಗೊಂಡರು.     ಎರಡನೆಯ ಮಹಾಯುದ್ಧ (1939-1945) ಪ್ರಗತಿಯಲ್ಲಿದ್ದ ಸಂದರ್ಭ ಇವರನ್ನು ಮಿತ್ರರಾಷ್ಟ್ರಗಳ ವಿರುದ್ದ ಹೋರಾಡಲು ಮಧ್ಯಪ್ರಾಚ್ಯ ಯುದ್ದ ವಲಯಕ್ಕೆ ಕಳುಹಿಸಲಾಗಿತ್ತು. 1942 ರಲ್ಲಿ,

ಮಂಗಳೂರು: ಮಾರ್ಕ್ ರೊಡ್ರಿಗಸ್ ನಿಧನ Read More »

ಕರಾವಳಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07: 65ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿ, ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಈ ವೇಳೆ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.  

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ Read More »

ಕರ್ನಾಟಕ

ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 07: ಬೆಳ್ತಂಗಡಿ ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯು ಚುನಾವಣಾಧಿಕಾರಿ, ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತಿಯಲ್ಲಿ ಇಂದು ನಡೆಯಿತು.     ಬೆಳ್ತಂಗಡಿ ನಗರ ಪಂಚಾಯತ್ ನೂತನ ಅಧ್ಯಕ್ಷರಾಗಿ ಬಿಜೆಪಿಯ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಳಸಿ ಆಯ್ಕೆಯಾಗಿದ್ದಾರೆ. ಪಂಚಾಯತಿನ ಅಧ್ಯಕ್ಷ ಗಾದಿ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಗಾದಿಯನ್ನು ಸಾಮಾನ್ಯ ಸ್ಥಾನಕ್ಕೆ ಮೀಸಲಿರಿಸಿ ಸರಕಾರ

ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ Read More »

ಕರಾವಳಿ, ಕರ್ನಾಟಕ

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07:  ಸಂತೆ ಮಾರುಕಟ್ಟೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳನ್ನು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.     ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆಯು ನಿರಂತರವಾಗಿ 1 ವಾರದ ಜಂಟಿ ಕಾರ್ಯಚರಣೆ ನಡೆಸಿ, 28 ಮಕ್ಕಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.    

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 07: ನಾಳೆಯಿಂದ ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ಶಿಬಿರವು ನ.8 ರಿಂದ ಆರಂಭಗೊಂಡು ನ.14 ರವರೆಗೆ ನಡೆಯಲಿದ್ದು, ಶಿಬಿರವನ್ನು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಉದ್ಘಾಟಿಸಲಿದ್ದಾರೆ.     ಈಗಾಗಲೇ 450 ಶಿಬಿರಾರ್ಥಿಗಳು ಹೆಸರು ನೊಂದಾಯಿಸಿರುವುದಾಗಿ ಶಿಬಿರದ ಸಂಯೋಜಕ ಜಯಪ್ರಕಾಶ್ ಕೂಜುಗೋಡು ಮಾಹಿತಿ ನೀಡಿದರು. ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ದುರಸ್ತಿ, ಕಸಿ ಕಟ್ಟುವುದು, ಅಣಬೆ ಕೃಷಿ, ಜೇನು ಕೃಷಿ, ಹೈನುಗಾರಿಕೆ ಮೀನುಗಾರಿಕೆ, ಕೋಳಿ, ಕುರಿ,

ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ Read More »

ಕರಾವಳಿ

ಕಳೆಂಜ: ಹೊಳೆ ದಾಟುತ್ತಿದ್ದ ವೇಳೆ ಜಾರಿ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಳೆಂಜ ನ. 07: ಕಳೆಂಜದಲ್ಲಿ ಬಾಲಕನೋರ್ವ ಹೊಳೆ ದಾಟುತ್ತಿದ್ದಾಗ ಕಾಲು ಜಾರಿ ಹೊಳೆ ಬಿದ್ದು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೊಗ್ರ ಗ್ರಾಮದ ಮುಗೆರಡ್ಕ ಅಲೆಕ್ಕಿ ನಿವಾಸಿ ಧರ್ಣಪ್ಪ ಗೌಡ ಮತ್ತು ಯಮುನಾ ದಂಪತಿಯ ಪುತ್ರ ದುರ್ಗೇಶ್ (17) ಮೃತ ಬಾಲಕ. ಸಂಬಂಧಿಕರ ಮನೆಗೆ ಬಂದಿದ್ದ ದುರ್ಗೇಶ್ ತನ್ನ ಸಹೋದರ ಹಾಗೂ ಸಹೋದರಿಯ ಜೊತೆ ಪಂಜಾಲ ಎಂಬಲ್ಲಿನ ಹೊಳೆಯನ್ನು ದಾಟುತ್ತಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಈ ಸಂಬಂಧ

ಕಳೆಂಜ: ಹೊಳೆ ದಾಟುತ್ತಿದ್ದ ವೇಳೆ ಜಾರಿ ಬಿದ್ದು ಬಾಲಕ ಮೃತ್ಯು Read More »

ಕರಾವಳಿ
Scroll to Top