Mangalore

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತೆಂಗಿನ ಮರವೊಂದು ಬುಡ ಸಹಿತ ಬಿದ್ದಿರುವ ಘಟನೆ ಸುಳ್ಯದ ಮಂಡೆಕೋಲು ಗ್ರಾಮದ ಶಾಲಾ ಬಳಿ ನಡೆದಿದೆ.   ಇಲ್ಲಿನ ಭವಾನಿಶಂಕರ ಆಚಾರ್ಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಘಟನೆಯಲ್ಲಿ ಮನೆಯ ಮೇಲ್ಛಾವಣಿಗೆ ಅಪಾರ ಹಾನಿಯಾಗಿದೆ. ಮನೆಯೊಳಗೆ ಭವಾನಿಶಂಕರ ಅವರ ತಾಯಿ ಹಾಗೂ ಪತ್ನಿ ಇದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.    

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು Read More »

ಕರಾವಳಿ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ,ಜು.26. ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ . ಆರೋಪಿಗಳ ಸಹಿತ ಆಟಕ್ಕೆ ಬಳಸಿದ ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದೆ. ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್ Read More »

ಕರಾವಳಿ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌ ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24)  ಎಂದು ಗುರುತಿಸಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಹೆಚ್ಚು ಪ್ರಖರ ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 5,86,500 ಲಕ್ಷ ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ಪಡಿಸಿದ ಹೆಡ್‌ಲೈಟ್‌ ಗಳನ್ನು ಮಾತ್ರ ಅಳವಡಿಸಬೇಕು, ಹೆಚ್ಚುವರಿಯಾಗಿ ಆಲಂಕಾರಿಕ ದೀಪ ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್‌.ಇ.ಡಿ. ಬಲ್ಬ್ ಗಳನ್ನು ಅಳವಡಿಸುವಂತಿಲ್ಲ. ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.! Read More »

ಕರಾವಳಿ
crime, arrest, suspected

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು !

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.25. ಭಾರೀ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಗಾಳಿ-ಮಳೆಗೆ ಮಂಗಳೂರು ಹೊರವಲಯದ ಸುರತ್ಕಲ್‌ ಸಮೀಪವಿರುವ ಜೋಕಟ್ಟೆಯಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಶೈಲೇಶ್ (17) ಎಂದು ಗುರುತಿಸಲಾಗಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಕಾರಾಗೃಹದ ಮೇಲೆ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಮೊಬೈಲ್‌ ಸೇರಿ ಹಲವು ನಿಷೇಧಿತ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಕೋಡಿಯಾಲ್ ಬೈಲ್ ನಲ್ಲಿರುವ ಜೈಲಿನಲ್ಲಿರುವ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪೊಲೀಸ್‌ ಇನ್ಸ್‌ ಪೆಕ್ಟರ್‌ಗಳ ನೇತೃತ್ವದಲ್ಲಿ ಸುಮಾರು 150 ಮಂದಿ ಸಿಬ್ಬಂದಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಲಾಗಿದೆ. ಹಲವು ವಿಚಾರಣಾಧೀನ ಕೈದಿಗಳ ಬಳಿ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಸಾಧನ, 5 ಇಯರ್‌ಫೋನ್‌, ಒಂದು ಪೆನ್ ಡ್ರೈವ್, 5

ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ

(ನ್ಯೂಸ್ ಕಡಬ)newskadaba.com. ಉಡುಪಿ, ಜು.24. ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ದೊಡ್ಡ ಅನಾಹುತವನ್ನು ತಪ್ಪಿಸಿ, ಸಮಯಪ್ರಜ್ಞೆಯಿಂದ ನಿರ್ಣಾಯಕ ಕ್ರಮವನ್ನು ಕೈಗೊಂಡಿರುವ ಸಿಬ್ಬಂದಿಯನ್ನು ಗುರುತಿಸಿ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನೀಡಿದರು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ . ಮೃತರನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top