Mangalore

4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು/ಬೆಂಗಳೂರು ಅ. 20: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ನಿಯಮದ ಪ್ರಕಾರ, ನಾಲ್ಕು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ದ್ವಿಚಕ್ರವಾಹನದಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಿದೆ. ಹೆಲ್ಮೆಟ್ ಹಾಕದ ಚಾಲಕನಿಗೆ ದಂಡ ವಿಧಿಸುವ ಜೊತೆಗೆ ಚಾಲನಾ ಪರವಾನಿಗೆಯನ್ನು ಮೂರು […]

4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯ Read More »

ಕರ್ನಾಟಕ

ಬಾಲಿವುಡ್ ನಟಿ ಝರೀನಾ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ ಅ. 19:  ಕುಂಕುಮ್‍ಭಾಗ್ಯ ಧಾರಾವಾಹಿಯಿಂದ ಪ್ರಸಿದ್ಧರಾಗಿದ್ದ ಬಾಲಿವುಡ್ ನ ಕಿರುತೆರೆ ನಟಿ ಜರೀನಾ ರೋಷನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜರೀನಾ (54) ಕಿರುತೆರೆಯಲ್ಲಿ ಬಲು ಪ್ರಸಿದ್ಧರಾಗಿದ್ದು ಅಮ್ಮ, ಅತ್ತೆ ಪಾತ್ರಗಳಿಗೆ ನಿರ್ದೇಶಕರ ಮೊದಲ ಆಯ್ಕೆ ನಟಿಯಾಗಿದ್ದರು. ಕುಂಕುಮಭಾಗ್ಯದಲ್ಲಿ ಇವರು ನಟಿಸಿದ್ದ ಇಂದೂ ದಾಸಿ ಎಂಬ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟಿಯಾಗಿದ್ದರು.      

ಬಾಲಿವುಡ್ ನಟಿ ಝರೀನಾ ನಿಧನ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.     ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರಾವಳಿ

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.    

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಲಡಾಖ್ ಗಡಿಯಲ್ಲಿ ಚೀನಾ ಯೋಧನ ಬಂಧನ

(ನ್ಯೂಸ್ ಕಡಬ) newskadaba.com ಲಡಾಖ್ ಅ. 19: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಮೂಲಗಳು  ವರದಿ ಮಾಡಿದೆ.ಲಡಾಖ್ ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಈ ಬೆಳವಣಿಗೆ

ಲಡಾಖ್ ಗಡಿಯಲ್ಲಿ ಚೀನಾ ಯೋಧನ ಬಂಧನ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.   ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…!

(ನ್ಯೂಸ್ ಕಡಬ) newskadaba.com ಮೇರಠ್, ಅ.19: ಪಬ್​ಜಿ ಆಡಬೇಡ, ಅದು ಒಳ್ಳೆಯದಲ್ಲ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೇಳಿ ಕೇಳಿ ಕೆದರಿದ ಮಗ ಪಕ್ಕದಲ್ಲೇ ಇದ್ದ ಚೂರಿ ತಗೊಂಡು ಅಪ್ಪನ ಕತ್ತು ಸೀಳಿಯೇ ಬಿಟ್ಟ! ಇಂಥದ್ದೊಂದು ವಿಲಕ್ಷಣ ಕೃತ್ಯ ಮೇರಠ್ ಜಿಲ್ಲೆಯ ಖಾರ್​ಖೋಡ ಪಟ್ಟಣದ ಜಾಮ್​ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಆಮಿರ್ ಎಂದು ಗುರುತಿಸಲಾಗಿದೆ.     ಈ ಕೃತ್ಯ ಗುರುವಾರವೇ ನಡೆದಿದೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಸುದೀರ್ಘ ಹೊತ್ತು ಗೇಮ್​ನಲ್ಲೇ ಕಾಲಕಳೆಯುತ್ತಿದ್ದ ಆಮಿರ್​ಗೆ ಈ ಬಗ್ಗೆ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…! Read More »

ರಾಷ್ಟ್ರೀಯ ನ್ಯೂಸ್

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.19: ಇತ್ತೀಚೆಗೆ ಎಡೆಬಿಡದೆ ಸುರಿದ ಭಾರಿ ಮಳೆಗೆ ಕೊಲ್ಲಮೊಗ್ರ ಕಡಂಬಳ ಸಂಪರ್ಕ ರಸ್ತೆಯ ಕಡಂಬಳ ಸೇತುವೆಯ ಇಕ್ಕೆಳಗಳಲ್ಲಿ ಮಣ್ಣು ಕೊಚ್ಚಿ ಹೋಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.     ಈಗ ಇದನ್ನು ಉದಯ ಕೊಪ್ಪಡ್ಕ, ಶರತ್‌ ಕಲ್ಲೇಮಠ, ಮನೋಜ್‌ ಪೆರ್ನಾಜೆ, ಗಿರೀಶ ಕಡಂಬಳ, ಕುಸುಮಾ ಕಡಂಬಳ ಮತ್ತೀತರರು ಸೇರಿ ತಾತ್ಕಾಲಿಕವಾಗಿ ದುರಸ್ಥಿಗೊಳಿಸಿದ್ದಾರೆ.    

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ Read More »

ಕರಾವಳಿ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!?

(ನ್ಯೂಸ್ ಕಡಬ) newskadaba.com ನವದೆಹಲಿ ಅ. 19: ಮಾರ್ಚ್ 2021 ರ ವೇಳೆಗೆ ದೇಶದಲ್ಲಿ ಕೊರೋನಾ ಲಸಿಕೆ ಸಿಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಸುರೇಶ್ ಜಾಧವ್ ಹೇಳಿದ್ದಾರೆ. ‘ಮಾರ್ಚ್ 2021 ರ ವೇಳೆಗೆ ಭಾರತಕ್ಕೆ COVID-19 ಲಸಿಕೆ ಸಿಗಬಹುದು, ಏಕೆಂದರೆ ನಿಯಂತ್ರಕರು ಈ ಪ್ರಕ್ರಿಯೆಯನ್ನು ವೇಗಗೊಳಿಸುತ್ತಾರೆ, ಏಕೆಂದರೆ ಅನೇಕ ತಯಾರಕರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ” ಎಂದು ಜಾಧವ್ ಐಸಿಸಿಐಡಿಡಿ ಸಹಯೋಗದೊಂದಿಗೆ ಹೆಲ್ ಫೌಂಡೇಶನ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಹೇಳಿದರು. ಡಾ. ಜಾಧವ್ ಅವರ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!? Read More »

ಕರಾವಳಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ ಅ. 19: ನವರಾತ್ರಿ ಉತ್ಸವಕ್ಕಾಗಿ ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಗುಲಿ 16 ವರ್ಷದ ಬಾಲಕ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ.   ಇಲ್ಲಿನ ಉಪ್ಪಿನ ಕುದ್ರು ನಿವಾಸಿ ಗಂಗಾಧರ ಆಚಾರ್ ಅವರ ಪುತ್ರ ಧನುಷ್ (16) ಮೃತ ದುರ್ದೈವಿ ಬಾಲಕ .ಈತ ಹತ್ತನೆ ತರಗತಿ ಓದುತ್ತಿದ್ದ.ಧನುಷ್ ತನ್ನ ಮನೆ ಸಮೀಪದ ಶ್ರೀ ಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ರಾತ್ರಿ 8:00 ಗಂಟೆಯ ಸುಮಾರಿಗೆ ಮನೆಯಿಂದ ಹೋಗಿದ್ದು, ರಾತ್ರಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top