Mangalore

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21:  ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ 9 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊಡಗು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಗಡಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆ ಸುರಿದಿದೆ.ದಕ್ಷಿಣ […]

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!! Read More »

ಕರಾವಳಿ, ಕರ್ನಾಟಕ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ದೇವೇಗೌಡರು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ20:  ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಸದಸ್ಯರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.   ರಾಜ್ಯಸಭೆಯ ಸಭಾಧ್ಯಕ್ಷರೂ ಆಗಿರುವ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪ್ರಮಾಣವಚನ ಬೋಧಿಸಿದರು. ದೇವೇಗೌಡರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ‘ನಮ್ಮ ಸದನಕ್ಕೆ ಉತ್ತಮ ವ್ಯಕ್ತಿಯ ಸೇರ್ಪಡೆಯಾಗಿದೆ. ಮಾಜಿ ಪ್ರಧಾನಿ ಹಾಗೂ ದೇಶದ ಹಿರಿಯ ರಾಜಕೀಯ ನಾಯಕರಲ್ಲಿ ಒಬ್ಬರಾಗಿರುವ ಎಚ್.ಡಿ. ದೇವೇಗೌಡ ಅವರು ಈಗ ನಮ್ಮ ಸದನಕ್ಕೆ ಬಂದಿದ್ದಾರೆ’ ಎಂದು ಉಪ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ದೇವೇಗೌಡರು Read More »

ರಾಷ್ಟ್ರೀಯ ನ್ಯೂಸ್

ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ20:  ಮಳೆಯ ಅಬ್ಬರದ ನಡುವೆಯು ಸರಣಿ ಅಪಘಾತಗಳು ಬೆಳಕಿಗೆ ಬರುತ್ತಿದೆ. ಇಂದು ಹೋಂಡಾ, ಡಿಯೋ, ಟೊಯೊಟೊ ಇನ್ನೋವಾ ಕಾರು ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.   ಮಂಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಇನೋವಾ ಕಾರು ಅಯ್ಯಪ್ಪ ಮಂದಿರದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಸಂಚರಿಸಿ ಎದುರಿನಿಂದ ಬರುತ್ತಿದ್ದ ಸ್ಕೂಟಿಸಯ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸರಣಿ

ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ Read More »

ಕರಾವಳಿ, ಕರ್ನಾಟಕ

ಮಂಗಳೂರು: 3 ಬೋಟ್‌ ಮುಳುಗಡೆ, ಸುರಕ್ಷಿತವಾಗಿ ದಡ ಸೇರಿದ ಮೀನುಗಾರರು.

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.20: ಇತ್ತೀಚೆಗೆ ಕರಾವಳಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು, ಇದರಿಂದಾಗಿ ಅಲೆಗಳ ಹೊಡೆತಕ್ಕೆ ಮಲ್ಪೆಯಲ್ಲಿ ಮೂರು ಬೋಟ್ ಗಳು ಮುಳುಗಡೆಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಬೋಟ್ ಗಳಲ್ಲಿದ್ದ ಮೀನುಗಾರರು ಕಲ್ಲು ಬಂಡೆ ಮೇಲೆ ಆಶ್ರಯ ಪಡೆದು ದಡ ಸೇರಿದ್ದು ಸುರಕ್ಷಿತವಾಗಿದ್ದಾರೆ. ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.     ಕಳೆದ ದಿನ ರಾತ್ರಿಯೇ ಕರಾವಳಿ ರಕ್ಷಣೆ ಪಡೆಯಿಂದ ರಕ್ಷಣಾ ಕಾರ್ಯಾಚರಣೆ ಪ್ರಯತ್ನ ನಡೆದಿದ್ದು, ಸಾಧ್ಯವಾಗದ ಹಿನ್ನಲೆಯಲ್ಲಿ

ಮಂಗಳೂರು: 3 ಬೋಟ್‌ ಮುಳುಗಡೆ, ಸುರಕ್ಷಿತವಾಗಿ ದಡ ಸೇರಿದ ಮೀನುಗಾರರು. Read More »

ಕರಾವಳಿ

ಮಂಗಳೂರು : ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ನಗರದ ಹೊರವಲಯದ ನೀರುಮಾರ್ಗ ಎಂಬಲ್ಲಿ ರಸ್ತೆ ಬಾಯ್ತೆರೆದರೆ, ಅದ್ಯಪಾಡಿಯಲ್ಲಿ ಗುಡ್ಡ ಕುಸಿತಗೊಂಡಿದೆ. ನಗರದ ಹೊರವಲಯದ ನೀರುಮಾರ್ಗದಲ್ಲಿ ಕಟಿಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತವಾಗಿದೆ. ರಸ್ತೆ ಸಂಪೂರ್ಣವಾಗಿ ಎರಡು ಭಾಗವಾಗಿದ್ದು, ಸಂಚಾರ ಸ್ಥಗಿತವಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.     ಅಳಪೆಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯ ಕಂಪೌಂಡ್ ಗೋಡೆಗಳು ಕುಸಿದಿದ್ದು, ಗಾಯಗೊಂಡಿರುವ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಜಪೆ ಸಮೀಪದ ಅದ್ಯಪಾಡಿ ಸಮೀಪದಲ್ಲಿ

ಮಂಗಳೂರು : ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ.! Read More »

ಕರಾವಳಿ, ಕರ್ನಾಟಕ

ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.20: ಸಂಬಂಧಿಕರ ಮನೆಯಲ್ಲಿದ್ದ ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬವರ ಪತ್ನಿ ದಿವ್ಯಶ್ರೀ (29ವ) ಎಂಬ ಮಹಿಳೆಯೊಬ್ಬರು ಜ್ಯೂಸ್‌ ನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ಬಳಿಕ ತಾನೂ ಸೇವಿಸಿ ಮಂಗಳೂರಿಗೆ ಸಂಬಂಧಿಕರ ಮನೆಗೆ ತೆರಳಿ ಬಳಿಕ ತಾನೂ ಆತ್ಮ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಎಂಟು ವರ್ಷದ ಪುತ್ರಿ ಅನ್ವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಿಸದೆ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ.  ಇನ್ನು ಹತ್ತು ವರ್ಷದ ಪುತ್ರ

ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!! Read More »

ಕರಾವಳಿ, ಕ್ರೈಮ್ ನ್ಯೂಸ್

ತಡರಾತ್ರಿ ಗುಡ್ಡ ಕುಸಿದು ಮನೆ ನೆಲಸಮ ➤ ಅವಷೇಶದಡಿ ಸಿಲುಕಿದ್ದ ಆರು ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇಯಿದೆ. ಈಗಾಗಲೇ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯ ಅವಾಂತರಕ್ಕೆ ಅಪಾರ ಪ್ರಮಾಣದ ಹಾನಿಯು ಉಂಟಾಗಿದೆ.     ಕಳೆದ ತಡರಾತ್ರಿ ವಿಟ್ಲದ ಮಂಗಳಪದವು ಬಳಿಯ ಬಾಬುಕಟ್ಟೆ ಎಂಬಲ್ಲಿ ಗುಡ್ಡವೊಂದು ಕುಸಿದು ಮನೆಯು ಸಂಪೂರ್ಣವಾಗಿ ನೆಲಸಮಗೊಂಡ ಘಟನೆ ನಡೆದಿದೆ. ತರಕಾರಿ ವ್ಯಾಪಾರಿ ಅಬ್ದುಲ್ಲ ಎಂಬುವರ ಮನೆಯ ಪಕ್ಕದಲ್ಲಿದ್ದ ಧರೆ ಕುಸಿದು ಮನೆ ಸಂಪೂರ್ಣವಾಗಿ ನೆಲಸಮವಾಗಿತ್ತು. ಮನೆಯಲ್ಲಿದ್ದ ಆರು ಮಂದಿ ಅವಷೇಶದಡಿಯಲ್ಲಿ ಸಿಲುಕಿದ್ದರು, ತಕ್ಷಣವೇ

ತಡರಾತ್ರಿ ಗುಡ್ಡ ಕುಸಿದು ಮನೆ ನೆಲಸಮ ➤ ಅವಷೇಶದಡಿ ಸಿಲುಕಿದ್ದ ಆರು ಮಂದಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ಸಿದ್ದವಾಯ್ತು ಸ್ಕೂಟರ್ ನಿಂದ ಮಿನಿ ಟಿಪ್ಪರ್ ➤ ಸವಣೂರಿನ ಯುವಕನಿಂದ ವಿಭಿನ್ನ ಅವಿಷ್ಕಾರ

(ನ್ಯೂಸ್ ಕಡಬ) newskadaba.com ಸವಣೂರು, ಸೆ20:  ಕೃಷಿ ಚಟುವಟಿಕೆಗಳಿಗೆ ಉಪಯೋಗಿಸುವಂತಹ ಸಣ್ಣ ಟಿಪ್ಪರ್ ಒಂದನ್ನು ದಕ್ಷಿಣಕನ್ನಡದ ಹಳ್ಳಿಯ ಯುವಕನೊಬ್ಬ ತಯಾರಿಸಿ ಗಮನ ಸೆಳೆದಿದ್ದಾನೆ. ಕಡಬ ತಾಲೂಕಿನ ಸವಣೂರಿನ ಬಂಬಿಲ ನಿವಾಸಿ ಪುರುಷೋತ್ತಮ್ ಈ ಸಣ್ಣ ಟಿಪ್ಪರ್ ನ ಆವಿಷ್ಕಾರ ಮಾಡಿದ್ದು, ಸ್ಕೂಟರ್ ಒಂದನ್ನು ಮಾರ್ಪಾಡು ಮಾಡಿ ಈ ಟಿಪ್ಪರ್ ಸಿದ್ಧ ಮಾಡಲಾಗಿದೆ.   ತೋಟದ ಮಧ್ಯೆ ಕಿತ್ತ ಕಳೆಗಳನ್ನು ಸ್ಥಳಾಂತರಿಸಲು, ತೋಟಕ್ಕೆ ಮಣ್ಣು ಹಾಕಲು, ಅಡಿಕೆ ಲೋಡ್ ಮಾಡಲು ಹೀಗೆ ವಿವಿಧ ಕೆಲಸಗಳಿಗೆ ಈ ಟಿಪ್ಪರ್ ಅನ್ನು

ಸಿದ್ದವಾಯ್ತು ಸ್ಕೂಟರ್ ನಿಂದ ಮಿನಿ ಟಿಪ್ಪರ್ ➤ ಸವಣೂರಿನ ಯುವಕನಿಂದ ವಿಭಿನ್ನ ಅವಿಷ್ಕಾರ Read More »

ಕರಾವಳಿ, ಕರ್ನಾಟಕ

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com  ಕಾವೂರು, ಸೆ.19:  ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ , ಕೂಳೂರಿನ ಶಾಲೆಯ ತಡೆಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾಂಪೌಂಡ್ ಗೋಡೆ ಕುಸಿದಿದೆ. ಇದ್ದಕ್ಕಿದ್ದಂತೆ ತಡೆಗೋಡೆ ಕುಸಿದ ಪರಿಣಾಮ ಉಮೇಶ್ ಅವರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ಮಾಡಿದರೂ ಕೂಡಾ ಉಮೇಶ್

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.19:  ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನವನ್ನು ಕೇರಳ ಸಾಂಸ್ಕೃತಿಕ ಸಚಿವ ಎ.ಕೆ ಬಾಲನ್‌ ಅವರು ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಮಂಜೇಶ್ವರ ಹೊಸಂಗಡಿ ಸಮೀಪ ನಿರ್ಮಿಸಿರುವ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕರಾಗಿದ್ದ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯವನ್ನು ಶಾಸಕ ಎಂ. ಸಿ ಕಮರುದ್ದೀನ್, ಸಭಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ. ಜಿ. ಸಿ ಬಶೀರ್ ಉದ್ಘಾಟಿಸಿದರು. ತುಳು

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ Read More »

ಕರ್ನಾಟಕ
Scroll to Top