Mangalore

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.09. ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಜಗಳಕ್ಕಿಳಿದಿದ್ದ ಐವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸಾರ್ವಜನಿಕ ಶಾಂತಿ ಭಂಗ ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ನೆಲ್ಯಾಡಿಯ ಬೆಥನಿ ಕಾಲೇಜು ಬಳಿಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಕೆ (30), ಅಶ್ವಥ್ (26), ಸ್ವರೂಪ್ ಪಟ್ಟೆ (25), ಅಖಿಲೇಶ್ (21) ಲಕ್ಷ್ಮಣ ಗೌಡ (45) ಎಂಬವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು 2 ಬೈಕ್ ಗಳನ್ನು 5 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಕೊರಗಜ್ಜನ ಆದಿಸ್ಥಳ ವರ್ಷದ 365 ದಿನವೂ ತೆರೆದಿರುತ್ತದೆ – ಆಡಳಿತ ಮಂಡಳಿ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಕುತ್ತಾರಿನಲ್ಲಿರುವ ಕೊರಗಜ್ಜನ ಏಳೂ ಆದಿಸ್ಥಳಗಳು ವರ್ಷದ 365 ದಿನವೂ ದಿನದ 24 ಗಂಟೆಯೂ ತೆರೆದಿರುತ್ತದೆ ಎಂದು ಕುತ್ತಾರು ಶ್ರೀ ಪಂಜಂದಾಯ ಬಂಟ ವೈದ್ಯನಾಥ ದೈವಸ್ಥಾನ ಮತ್ತು ಕೊರಗ ತನಿಯ ದೈವದ ಆದಿಸ್ಥಳಗಳ ಆಡಳಿತ ಮಂಡಳಿಯು ತಿಳಿಸಿದೆ. ಏಳು ಆದಿಸ್ಥಳಗಳು ದಿನದ 24 ಗಂಟೆಯೂ ತೆರೆದಿದ್ದರೂ, ಮಹಿಳೆಯರಿಗೆ ಮಾತ್ರ ಬೆಳಗ್ಗೆ 6.30ರಿಂದ ಸಂಜೆ 6.30ರ ವರೆಗೆ ಮಾತ್ರ ಪ್ರವೇಶ ಇರುತ್ತದೆ. ಈ ಏಳು ಆದಿ ಸ್ಥಳಗಳಲ್ಲಿ ಕೊರಗಜ್ಜನ ಕೋಲಗಳು ಕತ್ತಲೆಯಲ್ಲಿಯೇ ನಡೆಯುತ್ತದೆ ಮತ್ತು

ಕೊರಗಜ್ಜನ ಆದಿಸ್ಥಳ ವರ್ಷದ 365 ದಿನವೂ ತೆರೆದಿರುತ್ತದೆ – ಆಡಳಿತ ಮಂಡಳಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಡಬ, ಆ.09. ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ಮಾಡುತ್ತಿದ್ದ  ಕುಂತೂರಿನ ಇಬ್ಬರು ಯುವಕರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಯುವಕರನ್ನು ಜುನೈದ್(23ವ.) ಹಾಗೂ ನಿತಿನ್(24ವ.) ಎಂದು ಗುರುತಿಸಲಾಗಿದೆ. ಯುವಕರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಕುಂತೂರು ಮಸೀದಿಯ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಒಬ್ಬರಿಗೊಬ್ಬರು ಕೈ ಮಿಲಾಯಿಸಿಕೊಂಡು ಸಾರ್ವಜನಿಕರಿಗೆ ಭಯ ಉಂಟು ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ರೌಂಡ್ಸ್ ಕರ್ತವ್ಯದಲ್ಲಿದ್ದ ಕಡಬ ಠಾಣೆ ಎಸ್.ಐ.ಅವರು ಗಮನಿಸಿದ್ದು, ಜೀಪು ನಿಲ್ಲಿಸಿ

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೆ ಗುರಿಯಾಗಿರುವ ಆರೋಪಿ ಎಂದು ತಿಳಿದುಬಂದಿದೆ. 15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಶೋಕ್,

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ಅಕ್ರಮ ಗೋ-ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುರುತಿಸಲಾಗಿದೆ. ಸ್ಕಾರ್ಫಿಯೋ ವಾಹನದಲ್ಲಿ ಆರೋಪಿಗಳು ಗೋವುಗಳನ್ನು ಸಾಗಾಟ ನಡೆಸುತ್ತಿದ್ದರು. ಬಜರಂಗದಳದ ಕಾರ್ಯಕರ್ತರ ಖಚಿತ ಮಾಹಿತಿಯನ್ವಯ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದು, ಬಜಗೋಳಿ ಬಳಿಯಲ್ಲಿ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23) ಮತ್ತು ಜಗನ್ನಾಥ ಶೆಟ್ಟಿ (58) ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ತಿಳಿಸಿದರು ಎಂದು ವರದಿ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ರು ಕುಟುಂಬದ ಕಲ್ಯಾಣ ಇಲಾಖೆ ವತಿಯಿಂದ ಪತ್ರಿಕಾ ಭವನದ ಮುಂಭಾಗದಲ್ಲಿ ಡೆಂಗ್ಯು ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆ ಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ನೀಡಿ

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ Read More »

ಕರಾವಳಿ

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು – ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಧರ್ಮಸ್ಥಳದ ಸೌಜನ್ಯ ಹತ್ಯೆ ಬಗ್ಗೆ ಮಾತನಾಡಿದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ‘ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು. ಪ್ರಕರಣದ ರಹಸ್ಯವನ್ನ ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು’ ಎಂಬ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಖಾಕಿಯಾಗಲೀ, ಕಾವಿಯಾಗಲೀ ಅವರನ್ನೂ ತನಿಖೆ ಮಾಡುವ ಶಕ್ತಿ ನಮ್ಮಲ್ಲಿ ಇದೆ. ಸಮಯ ಬಂದಾಗ ಮಾತನಾಡುತ್ತೇನೆ. ಆಗ ನನ್ನನ್ನೂ ಸಾಯಿಸಿಬಿಡಬಹುದು. ಆದರೆ ಸಾಯುವ ಮೊದಲು ನ್ಯಾಯ ಕೊಡಿಸಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.  

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು – ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ Read More »

ಕರಾವಳಿ

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ. ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ ! Read More »

ಕರ್ನಾಟಕ
Scroll to Top