Mangalore

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ […]

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ Read More »

ಕರಾವಳಿ

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.07. ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ ಪೆರಿಯಡ್ಕದ ನೆಡ್ಚಿಲ್ ಬಳಿ ನಡೆದಿದೆ. ಕೇರಳ ಮೂಲದ ಮೂವರು ಇಲ್ಲಿ ಬಾಡಿಗೆ ರೂಂನಲ್ಲಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಡೆಸುತ್ತಿದ್ದರು. ಇವರು ತಮ್ಮ ಬಾಡಿಗೆ ಕೊಠಡಿಯಲ್ಲಿ ಪರಸ್ಪರ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ಸೇರಿ ಮರದ ತುಂಡಿನಿಂದ ಮತ್ತೋರ್ವನ ತಲೆಗೆ ಹೊಡೆದಿದ್ದಲ್ಲದೆ, ತೀವ್ರ ಗಾಯಗೊಂಡು ಬಿದ್ದಿದ್ದ ಈತನನ್ನು ಕೊಠಡಿಯ ಹೊರಗೆ ಹಾಕಿ, ಬಾಗಿಲು ಹಾಕಿ ಕುಳಿತ್ತಿದ್ದರು ಎನ್ನಲಾಗಿದೆ.

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..! Read More »

ಕರಾವಳಿ

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್‌ ಗಳಲ್ಲಿ ಕರ್ಕಶ ಹಾರ್ನ್, ಧ್ವನಿವರ್ಧಕ ಬಳಕೆ ವಿರುದ್ಧ ಕಾರ್ಯಾಚರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ವಾಹನಗಳಿಗೆ ನಿಯಮ ಮೀರಿ ಕರ್ಕಶ ಹಾರ್ನ್ ಅಳವಡಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆಗೆ ನಡೆಸಿದ್ದು ಒಟ್ಟಾರೆ 24 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 2 ಗಂಟೆಗಳ ಕಾಲ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 24 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಖಾಸಗಿ ಬಸ್‌ಗಳಲ್ಲಿ ಕರ್ಕಶ ಹಾರ್ನ್ ಬಳಕೆ ಮತ್ತು ಬಸ್‌ ನೊಳಗೆ ಧ್ವನಿ ವರ್ಧಕಗಳನ್ನು ಬಳಸುವುದರ ವಿರುದ್ಧ ಸಂಚಾರ ವಿಭಾಗದ ಪೊಲೀಸರು ಮಂಗಳೂರು ನಗರ ವ್ಯಾಪ್ತಿಯಲ್ಲಿ ವಿಶೇಷ

ಬಸ್‌ ಗಳಲ್ಲಿ ಕರ್ಕಶ ಹಾರ್ನ್, ಧ್ವನಿವರ್ಧಕ ಬಳಕೆ ವಿರುದ್ಧ ಕಾರ್ಯಾಚರಣೆ..! Read More »

ಕರಾವಳಿ

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ತೀರ ಪ್ರದೇಶದಿಂದ 5 ನಾಟಿಕಲ್ ಮೈಲುಗಳ ದೂರಕ್ಕೆ ಹೋದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.  ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ದೋಣಿಯಲ್ಲಿದ್ದ ಮೀನುಗಾರರೊಬ್ಬರು

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಹ್ಮಾವರ: ನೂತನ ಸಂಚಾರಿ ನ್ಯಾಯಾಲಯದಿಂದ ಜನರಿಗೆ ಅನುಕೂಲ

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಆ.05. ನೂತನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಸ್ಥಾಪನೆಯಾಗುತ್ತಿರುವುದು ಬ್ರಹ್ಮಾವರ ತಾಲೂಕಿನ ಜನತೆಗೆ ಸಂತಸದ ವಾತಾವರಣವನ್ನು ನಿರ್ಮಿಸಿದ್ದು, ಕೊನೆಗೂ ಜನರೆಲ್ಲರ ಆಸೆ ಈಡೇರಿದ್ದು, ಜನಸಾಮಾನ್ಯರಿಗೆ ನ್ಯಾಯದಾನ ಇನ್ನೂ ಹತ್ತಿರವಾಗಿದೆ. ತುಳುವರ ರಾಜಾಧಾನಿಯಾದ 365 ದೇವಸ್ಥಾನವಿದ್ದ ಐತಿಹಾಸಿಕ ಸ್ಥಳ ಬಾರಕೂರು, ಅತ್ಯಂತ ಹಳೆಯ ಬಂದರು ಆಗಿ ಇತಿಹಾಸ ಹೊಂದಿದ ಹಂಗಾರುಕಟ್ಟೆ, ಇಂತಹ ಹಲವಾರು ವೈಶಿಷ್ಟ್ಯಗಳನ್ನು, ಪ್ರವಾಸಿ ತಾಣಗಳನ್ನು, ಪುಣ್ಯಕ್ಷೇತ್ರಗಳನ್ನು ಹೊಂದಿದ ಬ್ರಹ್ಮಾವರ ಎಂಬ ದೊಡ್ಡ ತಾಲೂಕಿನಲ್ಲಿ ನ್ಯಾಯಾಲಯವು ಅತೀ ಅಗತ್ಯವಾಗಿದ್ದು, ಈ ಹಿಂದೆ

ಬ್ರಹ್ಮಾವರ: ನೂತನ ಸಂಚಾರಿ ನ್ಯಾಯಾಲಯದಿಂದ ಜನರಿಗೆ ಅನುಕೂಲ Read More »

ಕರಾವಳಿ

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.05. ದೇವಸ್ಥಾನವೊಂದರ ಅರ್ಚಕ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು ಎಂದು ಗುರುತಿಸಲಾಗಿದೆ. ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು,

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಟೈಲ್ಸ್‌ ಆಯಂಡ್‌ ಗ್ರಾನೈಟ್‌ ಅಂಗಡಿಯಲ್ಲಿ ನಗದು ಹಣ ಕಳವಾಗಿದೆ ಎಂದು ತಿಳಿದುಬಂದಿದೆ. ಅಂಗಡಿಯನ್ನು ಮುಚ್ಚಿ, ಮರುದಿನ ಬೆಳಗ್ಗೆ 9 ಗಂಟೆಗೆ ಬಂದು ತೆರೆದು ನೋಡಿದಾಗ ಕಳ್ಳರು ಯಾವುದೋ ಆಯುಧ ಉಪಯೋಗಿಸಿ ಎರಡು ಡ್ರಾವರ್‌ಗಳಲ್ಲಿದ್ದ ಒಟ್ಟು 9,700 ರೂ. ಕಳವು ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.  

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top