Mangalore

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.08:  ಕಳೆದ ದಿನ ಕಡಬ ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ದೃಡಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು 48 ಗಂಟೆ ಸೀಲ್ ಡೌನ್ ಮಾಡಲಾಗಿದೆ. ಕಚೇರಿಯ 59 ವರ್ಷ ಸಿಬ್ಬಂದಿಯ ಕೊವೀಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು.   ಈ ಹಿನ್ನಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.  

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.8., ಭಾರೀ ಗಾಳಿ, ಮಳೆಗೆ ಹಲಸಿನ ಮರವೊಂದು ಉರುಳಿಬಿದ್ದು, ಮನೆ ಹಾಗೂ ವಿದ್ಯುತ್ ಲೈನ್‍ಗೆ ಹಾನಿಯುಂಟಾದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಕಲ್ಲುಗುಡ್ಡೆ ಕಾಂತಪ್ಪ ಅಜಿಲ ಎಂಬವರ ಮನೆ ಬಳಿಯ ಹಲಸಿನ ಮರ ಬುಡ ಸಮೇತ ಉರುಳಿ ಬಿದ್ದಿದ್ದು, ಮನೆಯ ಒಂದು ಭಾಗಕ್ಕೆ ಹಾನಿಯಾಗಿ, ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ ಇದರಿಂದ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಕಂದಾಯ ಇಲಾಖೆಯವರು ಬಂದು ಪರಿಶೀಲನೆ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ Read More »

ಕರಾವಳಿ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಆ.07:  ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.   ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ.07: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.   ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07:  ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಗ ಡಾ.ಯತೀಂದ್ರ ಅವರಿಬ್ಬರಿಗೂ ಕೊರೋನಾ ಸೋಂಕು ತಗುಲಿದೆ.     ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.07: ಲಯನ್ಸ ಕ್ಲಬ್ ಕಂಕನಾಡಿ ಪಡೀಲಿನ 2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.   ಕಾರ್ಯದರ್ಶಿಯಾಗಿ ಲಯನ್ ಎಸ್. ಎಂ. ಐರನ್ ರವರು ಮತ್ತು ಖಜಾಂಚಿಯಾಗಿ ಲಯನ್ ಮಾಧವ ಉಳ್ಳಾಲ್ ಅವರು ಆಯ್ಕೆಯಾಗಿದ್ದಾರೆ.  

2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್

ಆಗಸ್ಟ್‌ ೧೦ಕ್ಕೆ ಎಸ್ಎಸ್ಎಲ್‌ ಸಿ ಫಲಿತಾಂಶ ಪ್ರಕಟ➤ ಶಿಕ್ಷಣ ಸಚಿವರ ಅಧಿಕೃತ ಹೇಳಿಕೆ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಆ.7:  ಕೊರೊನಾದ ಮಧ್ಯೆ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರು ವಿದ್ಯಾರ್ಥಿಗಳಿಗೆ ಸರಕಾರ ಕೊನೆಗೂ ಫಲಿತಾಂಶದ ಸ್ಪಷ್ಟ ದಿನಾಂಕ ತಿಳಿಸಿದೆ. ಆಗಸ್ಟ್ 10 ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್‌ ಸಿ ಪಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರವಿರೋಧ ಚರ್ಚೆಯ ನಡುವೆಯೇ ಜೂನ್ 25ರಿಂದ ಜುಲೈ 4ರವರೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ರಾಜ್ಯದಲ್ಲಿ ಎಸ್ಎಸ್ಎಲ್‌ ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಮೌಲ್ಯಮಾಪನ ಹಾಗೂ ಇತರೆ ಪ್ರಕ್ರಿಯೆಯು ಮುಗಿದಿರುವುದರಿಂದ ಆಗಸ್ಟ್

ಆಗಸ್ಟ್‌ ೧೦ಕ್ಕೆ ಎಸ್ಎಸ್ಎಲ್‌ ಸಿ ಫಲಿತಾಂಶ ಪ್ರಕಟ➤ ಶಿಕ್ಷಣ ಸಚಿವರ ಅಧಿಕೃತ ಹೇಳಿಕೆ Read More »

ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.07: ಮನೆಯ ಹತ್ತಿರದಲ್ಲೆ ಸರ್ಕಾರಿ ಶಾಲೆಯಿದ್ದರೂ, ಪಾಠ ಕೇಳಲು ಮಕ್ಕಳಿಲ್ಲ. ಇದ್ದ ಬೆರಳೆಣಿಕೆಯ ಮಕ್ಕಳು ಅಂಗ್ಲ ಮದ್ಯಮದತ್ತ ಮುಖಮಾಡಿದ್ದರು. ಇದರಿಂದ್ದಾಗಿ, ವರುಷಗಳ ಹಿಂದೇ ಕುಕ್ಕೆ ಸುಬ್ರಹ್ಮಣ್ಯದ ಸಮೀಪದಲ್ಲಿನ ಸರಕಾರಿ ದೇವರಹಳ್ಳಿ ಎಂಬ ಶಾಲೆಯೊಂದು ಮುಚ್ಚಲ್ಪಟ್ಟಿತ್ತು. ಆದರೆ, ಇದೀಗಾ ಮತ್ತೆ ಊರವರ ಹಾಗೂ ತಾ. ಪಂ ಸದಸ್ಯ ಅಶೋಕ್ ನೆಕ್ರಾಜೆ ಅವರ ಪ್ರಯತ್ನದ ಫಲವಾಗಿ ಮುಚ್ಚಿದ್ದ ಶಾಲೆ ಮತ್ತೆ ತೆರೆದುಕೊಂಡಿದೆ.       ವರ್ಷದ ಹಿಂದೆ ಮುಚ್ಚಲ್ಪಟ್ಟಿದ್ದ ಇಲ್ಲಿನ ದೇವರಹಳ್ಳಿ ಕಿರಿಯ ಪ್ರಾಥಮಿಕ

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ Read More »

ಕರಾವಳಿ, ಕರ್ನಾಟಕ

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.7: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು ಯಾವುದೇ ಖಾಸಗಿ ಆಸ್ಪತ್ರೆ ಚಿಕಿತ್ಸೆಗಾಗಿ ಹೆಚ್ಚುವರಿ ಬಿಲ್ ತೆಗೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಕೊಟ್ಟಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್ Read More »

ಕರಾವಳಿ
Scroll to Top