Mangalore

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ – ಆಟೋ ಚಾಲಕನ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ ಎನ್ನಲಾಗಿದೆ. ಆಟೋದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ ಸಂಘ ಪರಿವಾರದ ಕಾರ್ಯಕರ್ತರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಆಟೋ ಚಾಲಕನನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ. ಈ ಕುರಿತು ‌ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ – ಆಟೋ ಚಾಲಕನ ಮೇಲೆ ಹಲ್ಲೆ Read More »

ಕರಾವಳಿ

ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೋಟ್ಟೋದ ಕಾಣಿಕೆ ಡಬ್ಬಿಯನ್ನು ಕಳ್ಳರು ಕಳ್ಳತನಗೈದಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಚರ್ಚ್ ನ ಮುಂಭಾಗದಲ್ಲಿ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ. ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವ ರಸ್ತೆ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.  

ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಎಂಡಿಎಂಎ ಮಾರಾಟ….! – ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಡ್ರಗ್ಸ್ ಮುಕ್ತ ಮಂಗಳೂರು ನಗರ ನಿರ್ಮಿಸುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34) ಎಂದು ಗುರುತಿಸಲಾಗಿದೆ. ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎ ಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ

ಮಾದಕ ವಸ್ತು ಎಂಡಿಎಂಎ ಮಾರಾಟ….! – ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕುಲಶೇಖರದ ಕಿರಣ್ ಎಂಟರ್‌ಪ್ರೈಸಸ್ ಕಟ್ಟಡದ ಬಳಿ ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಶಿವನಗರದ ದೀಪಕ್ (27) ಎಂಬುದಾಗಿ ತಿಳಿದು ಬಂದಿದೆ. ಈತ ಪೊಲೀಸರು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡದ ಕಾರಣ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಬಲವಾದ ಸಂಶಯ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ಕಾರವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..! Read More »

ಕರಾವಳಿ

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ. ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೂಚಿಸಿದರು. ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯ, ಈ ಬಾರಿ ವಾಡಿಕೆಯಷ್ಟು ಮುಂಗಾರು ಸುರಿದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಆದರೆ ಜುಲೈನಲ್ಲಿ

ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್, ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಆನ್ಲೈನ್

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top