Mangalore

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಾಣಿಯೂರು ,ಜು.16: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತ ತೆರಳಿದ್ದ ಕಾಣಿಯೂರಿನ ಖಾಸಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಯುವಕ ಮಂಗಳೂರಿನ ಆಹಾರ ತಯಾರಿಕೆಯ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆತನಿಗೆ ಆರೋಗ್ಯ ಸಮಸ್ಯೆ ಬಂದಿದ್ದರಿಂದ ಕಾಣಿಯೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ರಕ್ತ ಪರೀಕ್ಷಾ ಲ್ಯಾಬ್ ತೆರಳಿದ್ದಾರೆ.ಬಳಿಕ ಯುವಕ ಕಾಣಿಯೂರು ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ಹಾಗೂ ಬ್ಯಾಂಕ್ ಗಳಿಗೆ ತೆರಳಿರುವ ಬಗ್ಗೆ […]

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ವೈದ್ಯರು, ನರ್ಸ್ ಸೇರಿದಂತೆ 14 ಮಂದಿಗೆ ಕೊರೊನಾ ಅಜ್ಜರಕಾಡು ಆಸ್ಪತ್ರೆ 2ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com. ಉಡುಪಿ,ಜು.16: ಕೊರೊನಾ ಬಾಧೆಯಿಂದಾಗಿ ಈಗಾಗಲೇ ಹಲವು ಭಾಗಗಳಲ್ಲಿ ಆಸ್ಪತ್ರೆ, ಮನೆ, ಪೊಲೀಸ್ ಸ್ಟೇಷನ್,ಬ್ಯಾಂಕ್, ಅಂಗಡಿ ಮುಂಗಟ್ಟು ಸೀಲ್ ಡೌನ್ ಆಗಿತ್ತು ಇದೀಗ ಅಂತದ್ದೆ ಇನ್ನೊಂದು ಪ್ರಕರಣ ಉಡುಪಿಯಲ್ಲಿ ವರದಿಯಾಗಿದೆ. ಗ್ಯಾಂಗ್ರಿನ್‌‌ ಸಮಸ್ಯೆಯಿಂದ ದಾಖಲಾಗಿದ್ದ ರೋಗಿಯಿಂದ ಕೊರೊನಾ ಹರಡಿದೆ ಎಂದು ಶಂಕಿಸಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ರೋಗಿಗೆ ಜ್ವರ ಕಾಣಿಸಿಕೊಂಡಿದ್ದು, ಗಂಟಲ ದ್ರವ ಪರೀಕ್ಷೆಯ ಬಳಿಕ ರೋಗಿಗೆ ಕೊರೊನಾ ದೃಢಪಟ್ಟಿತ್ತು, ಈತನ ವಾರ್ಡ್‌‌ನಲ್ಲಿದ್ದ 9 ರೋಗಿಗಳಿಗೂ ಕೊರೊನಾ ಸೋಂಕು ತಗುಲಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಇಬ್ಬರು

ವೈದ್ಯರು, ನರ್ಸ್ ಸೇರಿದಂತೆ 14 ಮಂದಿಗೆ ಕೊರೊನಾ ಅಜ್ಜರಕಾಡು ಆಸ್ಪತ್ರೆ 2ದಿನ ಸೀಲ್ ಡೌನ್ Read More »

ಕರ್ನಾಟಕ

ಕುಖ್ಯಾತ ದರೋಡೆಕೋರನ ಬಂಧಿಸಿದ ಪಣಂಬೂರು ಪೊಲೀಸರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.16: ದರೋಡೆ, ಹಲ್ಲೆ, ಅಪಘಾತ ಸಹಿತ ಹತ್ತಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ದರೋಡೆಕೋರ ಶಮ್ಮಿ ಯಾನೇ ಶಮೀರ್ ಕಾಟಿಪಳ್ಳ (30)ನನ್ನು ಬೆಳ್ಳಿಯಪ್ಪ ನೇತೃತ್ವದ ಪಣಂಬೂರು ರೌಡಿ ನಿಗ್ರಹದಳ ಹಾಗೂ ಪಣಂಬೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ಪಣಂಬೂರು ಬಂದರು ವ್ಯಾಪ್ತಿಯಲ್ಲಿ ಬರುವ ಲಾರಿ ಚಾಲಕರಿಗೆ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗುತ್ತಿದ್ದ. ಈ ಹಿಂದೆ ಎಎಸ್ಐ ಒಬ್ಬರಿಗೆ ರಾಡ್ ನಿಂದ ಮಾರಣಾಂತಿಕ ಹಲ್ಲೆಗೈದಿದ್ದ. ಬೆಂಜನ ಪದವಿನಲ್ಲಿ ದ್ವಿಚಕ್ರ ವಾಹನಕ್ಕೆ ತನ್ನ ವಾಹನ

ಕುಖ್ಯಾತ ದರೋಡೆಕೋರನ ಬಂಧಿಸಿದ ಪಣಂಬೂರು ಪೊಲೀಸರು Read More »

ಕರ್ನಾಟಕ

ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಪಟ್ರಮೆ ,ಜು.16: ವೀರಕೇಸರಿ ಸಂಘಟನೆ ಅನಾರು, ಪಟ್ರಮೆ ಹಾಗೂ ಸ್ಪಂದನ ಸೇವಾ ಸಂಘ ಬೆಳ್ತಂಗಡಿ ಹಾಗೂ ಊರಿನ ಸಹೃದಯಿಗಳ ಸಹಾಯದಿಂದ ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬವೊಂದಕ್ಕೆ, 2 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆಯನ್ನು ನಿರ್ಮಿಸಿಕೊಟ್ಟ ಪ್ರಶಂಶನೀಯ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಮೈಕೆ ಎಂಬಲ್ಲಿ ನಡೆದಿದೆ.   ಕಳೆದ ಹಲವಾರು ವರ್ಷಗಳಿಂದ ಗಿರಿಜ ಎಂಬುವರು ಯಾವುದೇ ರೀತಿಯ ಮೂಲ ಸೌಕರ್ಯಗಳಿಲ್ಲದೆ ನಿರ್ಗತಿಕರಂತೆ ಗುಡಿಸಲಲ್ಲಿ ವಾಸಮಾಡುತ್ತಿದ್ದರು. ಇವರ ಕಷ್ಟವನ್ನು ಗಮನಿಸಿದ ವೀರಕೇಸರಿ ಸಂಘಟನೆ ಹಾಗೂ

ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ Read More »

ಕರಾವಳಿ, ಕರ್ನಾಟಕ

ಕರಾವಳಿ ಮತ್ತೆ ವರುಣನ ಆರ್ಭಟ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.16: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗಿನಿಂದ ರಾತ್ರಿವರೆಗೂ ನಿರಂತರವಾಗಿ ಮಳೆ ಸುರಿದಿದೆ. ಕೆಲವೆಡೆ ಸಾಧಾರಣ, ಕೆಲವೆಡೆ ಉತ್ತಮ ಮಳೆಯಾಗಿದೆ. ಕಳೆದೆರಡು ದಿನಗಳಿಂದ ಮಳೆ ಸ್ವಲ್ಪ ಚುರುಕುಗೊಂಡಿದ್ದು, ಹವಾಮಾನ ಇಲಾಖೆಯೂ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಳಗ್ಗಿನಿಂದ ಸಾಯಂಕಾಲವರೆಗೆ ಕಡಬ, ಮರ್ಧಾಳ, ಬಿಳಿನೆಲೆ, ಕಾಣಿಯೂರು ನೂಜಿಬಾಳ್ತಿಲದಲ್ಲಿ ಉತ್ತಮ ಮಳೆ ಸುರಿದಿದೆ. ಮಳೆಯೊಂದಿಗೆ ಹಗುರವಾಗಿ ಗಾಳಿಯೂ ಬೀಸುತ್ತಿದೆ. ಸಮುದ್ರದಿಂದಲೂ ತೀರಕ್ಕೆ ಗಂಟೆಗೆ 45-55 ಕಿ.ಮೀ.

ಕರಾವಳಿ ಮತ್ತೆ ವರುಣನ ಆರ್ಭಟ Read More »

ಕರಾವಳಿ

ಕಡಬ ತಾಲೂಕಿನಲ್ಲಿ ಲಾಕ್‍ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ

(ನ್ಯೂಸ್ ಕಡಬ) newskadaba.com ಕಡಬ,ಜು.16: ಮಾನವ ಸಂಕುಲಕ್ಕೆ ಮೃತ್ಯುವಾಗಿ ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ತನ್ನ ವರಸೆಯನ್ನೆ  ಬದಲಾಯಿಸುತ್ತಿದೆ. ಮಿತಿ ಮೀರಿ ಹಬ್ಬುತ್ತಿರುವ ಕೊರೋನಾ ಸೊಂಕಿನಿಂದಾಗಿ, ರಾಜ್ಯ ಸರ್ಕಾರ ಮುಂದಿನ 7 ದಿನಗಳ ಕಾಲ ಲಾಕ್ ಡೌನ್ ಆದೇಶ ಹೊರಡಿಸಿದೆ. ಲಾಕ್ ಡೌನ್ ನ ಮೊದಲ ದಿನವಾದ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ ಹಾಲು, ಮೆಡಿಕಲ್ , ಆಸ್ಪತ್ರೆ, ತರಕಾರಿ, ಅಗತ್ಯ ವಸ್ತುಗಳ ಅಂಗಡಿಗಳು, ಪತ್ರಿಕೆ ಬಿಟ್ಟು ಉಳಿದೆಲ್ಲಾ ವ್ಯವಹಾರದ ಅಂಗಡಿಗಳು ಸ್ಥಗಿತಗೊಂಡಿತ್ತು.

ಕಡಬ ತಾಲೂಕಿನಲ್ಲಿ ಲಾಕ್‍ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ Read More »

ಕರಾವಳಿ, ಕರ್ನಾಟಕ

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರು ವಿಧಿವಶ

(ನ್ಯೂಸ್ ಕಡಬ) newskadaba.com ಬಳ್ಳಾರಿ ,ಜು.16:  ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರು(81) ವಿಧಿವಶರಾಗಿದ್ದಾರೆ. ಸ್ವಗ್ರಾಮ ಬಳ್ಳಾರಿಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ.   ರಂಗಭೂಮಿ ಚರಿತ್ರೆಯಲ್ಲಿ ಅರ್ಧ ಶತಮಾನ ಕಳೆದವರು. ತಮ್ಮ 27ನೇ ವಯಸ್ಸಿಗೆ ರಂಗಪ್ರವೇಶಿಸಿದ್ದ ಇವರು, ಕುಂತಿ, ಗಾಂಧಾರಿ, ದ್ರೌಪದಿ, ಉತ್ತರೆ, ಸೀತೆ ಪಾತ್ರಗಳ ಮೂಲಕ ಜನಮಾನಸದಲ್ಲಿ ಅಚ್ಚೊತ್ತಿದ್ದ ಕಲಾವಿದೆ. ಬಳ್ಳಾರಿ ಸುಭದ್ರಮ್ಮ ಅಂತಲೇ ಖ್ಯಾತಿ ಗಳಿಸಿದ್ದ ರಂಗಕರ್ಮಿ. ಎರಡು ಸಾವಿರಕ್ಕೂ ಹೆಚ್ಚು ನಾಟಕ ಪ್ರದರ್ಶನಗಳಿಗೆ ಬಣ್ಣ ಹಚ್ಚಿದ್ದ ಸುಭದ್ರಮ್ಮನವರು. ರಾಜ್ಯೋತ್ಸವ ಪ್ರಶಸ್ತಿ,

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರು ವಿಧಿವಶ Read More »

ಕರಾವಳಿ, ಕರ್ನಾಟಕ

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ,ಜು.15: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಮಧ್ಯಾಹ್ನ ಬಿದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.   ನಂತರ ಸುಸ್ತಾಗಿ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದೆ. ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಛೇರಿಗೆ ಮಾಹಿತಿ ತಿಳಿಸಿದ್ದು ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಪಿಕಪ್ ವಾಹನದಲ್ಲಿ ಹಾಕಿಕೊಂಡು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ತಪಾಸನೆಗೆ ಆ್ಯಂಟಿಜೆನ್ ಕಿಟ್‍ನ ಬಳಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.15: ಕೋವಿಡ್-19 ಸೋಂಕಿತರನ್ನು ತಪಾಸನೆ ಮಾಡಿ ರ್ಯಾಪಿಡ್ ಫಲಿತಾಂಶ ನೀಡುವ ಆ್ಯಂಟಿಜೆನ್ ಕಿಟ್‍ನ ಬಳಕೆಯನ್ನು ಜು.14ರಿಂದ ದಕ್ಷಿಣ ಕನ್ನಡದಲ್ಲಿ ಆರಂಭಿಸಲಾಗಿದೆ. ಈ ಹಿಂದೆ ಕೊರೊನಾ ಸೋಂಕು ಇದೆಯೇ ಇಲ್ಲವೇ ಎಂದು ಪತ್ತೆ ಹಚ್ಚಲು ಎರಡು ದಿನಗಳ ಕಾಲ ಕಾಯಬೇಕಿತ್ತು. ಆ್ಯಂಟಿಜೆನ್ ಟೆಸ್ಟ್ ನಿಂದ 15 ರಿಂದ 20 ನಿಮಿಷದಲ್ಲಿ ಕೊರೊನಾ ಪಾಸಿಟಿವ್ ಪತ್ತೆ ಹಚ್ಚಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗೆ ಇಂತಹ 3500 ಕಿಟ್ ರಾಜ್ಯ ಸರ್ಕಾರದಿಂದ ಪೂರೈಕೆಯಾಗಿದೆ. ಈ ಕಿಟ್ ನಲ್ಲಿ ಇರುವ ಸ್ಟ್ರಿಪ್

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ತಪಾಸನೆಗೆ ಆ್ಯಂಟಿಜೆನ್ ಕಿಟ್‍ನ ಬಳಕೆ Read More »

ಕರಾವಳಿ, ಕರ್ನಾಟಕ

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಕಡಬ ,ಜು.15: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವಿದ್ಯಾರ್ಥಿಯೋರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಂಡೋಸಲ್ಪಾನ್ ನಿಂದ ತನಗಾದ ಅಂಗವೈಕಲ್ಯವನ್ನೂ ಮೆಟ್ಟಿನಿಂತು ಉತ್ತಮ ಸಾಧನೆ ಮಾಡಿದ್ದಾರೆ. ಶೇ. 85 ರಷ್ಟು ಎಂಡೋ ಪೀಡಿತರಾಗಿರುವ ವಿದ್ಯಾರ್ಥಿ ಮನೋಜ್ ಕುಮಾರ್ ಮಂಗಳೂರಿನ ಸೇವಾಭಾರತಿ ¸ನಡೆಸುತ್ತಿರುವ ಕಾಜರುಕುಕ್ಕು ವಿದ್ಯಾಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಪಿಯುಸಿ ಪರೀಕ್ಷೆಗೆ ತರಬೇತಿ ಪಡೆದು ಕಲಾ ವಿಭಾಗದಲ್ಲಿ 360 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮನೋಜ್ ಕುಮಾರ್ ಕಿವಿ. ಕೈ ಎಲುಬು

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ Read More »

ಕರಾವಳಿ, ಕರ್ನಾಟಕ
Scroll to Top