Mangalore

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ […]

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಉಡುಪಿ,ಜು.15: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದ್ದರೆ, ಉಡುಪಿ ಜಿಲ್ಲೆ ಮಾತ್ರ ವಿಭಿನ್ನವಾಗಿ ಗಡಿಗಳನ್ನು ಸೀಲ್ ಮಾಡಲು ಮುಂದಾಗಿದೆ. ಹೀಗಾಗಿ ಜುಲೈ 15ರ ರಾತ್ರಿ 8 ಗಂಟೆಯಿಂದ ಉಡುಪಿ ಜಿಲ್ಲೆಗೆ ಯಾರು ಬರುವಂತಿಲ್ಲ ಉಡುಪಿ ಜಿಲ್ಲೆಯಿಂದ ಯಾರು ಹೊರಹೋಗುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲೆಯ ತಜ್ಞ ಆರೋಗ್ಯಾಧಿಕಾರಿಗಳ ಜೊತೆಗೆ ಮಂಗಳವಾರ ಮಹತ್ವದ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್ Read More »

ಕರಾವಳಿ, ಕರ್ನಾಟಕ

ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.15 : ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕರಾಗಿ ಹಲವು ಮೇಳಗಳಲ್ಲಿ ಭಾಗವಹಿಸಿ ಖ್ಯಾತರಾಗಿದ್ದ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ನಿವಾಸಿ ಯುವರಾಜ ಆಚಾರ್ಯ ಕಾವಳಕಟ್ಟೆ( 60) ಅನಾರೋಗ್ಯದಿಂದ ಜು.14 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಆರಂಭದಲ್ಲಿ ಹವ್ಯಾಸಿ ಮದ್ದಳೆವಾದಕರಾಗಿದ್ದ ಅವರು ಬಳಿಕ ಸುಮಾರು 15 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ಮದ್ದಳೆಗಾರರಾಗಿ ಸೇವೆ ಸಲ್ಲಿಸಿದ್ದರು. ಹೊಸನಗರ ಮೇಳ, ಹಿರಿಯಡ್ಕ, ಮಂಗಳಾದೇವಿ, ಬಪ್ಪನಾಡು, ಸಸಿಹಿತ್ಲು ಮೇಳಗಳಲ್ಲಿ ಮದ್ದಳೆ ವಾದಕರಾಗಿದ್ದ ಅವರು ಅನಾರೋಗ್ಯ ದಿಂದ ಮೇಳದಿಂದ ನಿವೃತ್ತಿ

ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇನ್ನಿಲ್ಲ Read More »

ಕರಾವಳಿ

ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜು.15:  ಕೊರೊನಾ ತನ್ನ ವೇಗವನ್ನು ಹೆಚ್ಚಿಸುತ್ತಾ ಮುಂದುವರಿಯುತ್ತಿದೆ ಇದರ ನಡುವೆ ವ್ಯಕ್ತಿಯೊಬ್ಬರ ವಿರುದ್ಧ ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಂಬೆ ಗ್ರಾಮದ ಕಾಣೆಮಾರ್ ನಿವಾಸಿ ಸಾಹಿದ್ (32) ವಿರುದ್ಧ ಕಾನೂನು ಉಲ್ಲಂಘಿಸಿದ ಆರೋಪ ಕೇಳಿಬಂದಿರುವುದು. ಸಾಹಿದ್ ಗೆ ಜು.೦೯ ರಿಂದ ಜು.23 ರವರೆಗೆ ಹೋಮ್ ಕಾರಂಟೈನ್ ಇರುವಂತೆ ತುಂಬೆ ಗ್ರಾಮ ಪಂಚಾಯತ್ ನಿಂದ ನೋಟಿಸು ಕೂಡ ಜಾರಿ ಮಾಡಿತ್ತು. ಆದರೆ ಜುಲೈ 14

ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಜಿಲ್ಲೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಅಭಿಪ್ರಾಯ ಪಡೆದು ಒಂದು ವಾರಗಳ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಇಂದು ರಾತ್ರಿ ಎಂಟು ಗಂಟೆಯಿಂದ ಮುಂದಿನ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಜಿಲ್ಲೆಯಲ್ಲಿ ಲಾಕ್‌ಡೌನ್ ಇರಲಿದೆ. ನಿನ್ನೆ

ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14: ಈಗಾಗಲೇ ದ್ವಿತೀಯ ಪಿಯುಸಿ ಪಿ.ಯು.ಸಿ ಫಲಿತಾಂಶ ಹೊರಬಿದ್ದಿದ್ದು ಅಚ್ಚರಿಯ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ 90.71 ಫಲಿತಾಂಶ ಪಡೆದುಕೊಂಡರೆ ನಂತರದ ಸ್ಥಾನ ಕೊಡಗಿನ ಪಾಲಾಗಿದೆ 81.53, ಉತ್ತರ ಕನ್ನಡ 80.97,ಚಿಕ್ಕಮಗಳೂರು 79.11 ನಂತರದ ಸ್ಥಾನ ಪಡೆದ ಜಿಲ್ಲೆಗಳಾಗಿವೆ. ಈ ಬಾರಿಯೂ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ ಆಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ Read More »

ಕರಾವಳಿ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜು.14: ಕೋವಿಡ್-19 ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಶಾಸಕರ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಿರ್ದೇಶನದಂತೆ ತೆಕ್ಕಾರು ಗ್ರಾಮ ಪಂಚಾಯತ್ ಇವತ್ತಿನಿಂದ ಜುಲೈ 28 ರ ವರೆಗೆ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು ಎಂದು ತೆಕ್ಕಾರು ಗ್ರಾಮ ವರ್ತಕರ ಮುಖ್ಯಸ್ಥ ಎ.ಟಿ ಅಶ್ರಫ್ ತೆಕ್ಕಾರು ತಿಳಿಸಿದರು. ಇವತ್ತಿನಿಂದಲೇ ಮದ್ಯಾಹ್ನ 3 ರಿಂದ ಬೆಳಿಗ್ಗೆ 6ರ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗುತ್ತದೆ. ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ವೇಳೆಯಲ್ಲಿ ವಾಹನ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಧಿತರ ಪೈಕಿ 16 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ 19 ತಗಲಿದೆ. ವಿದೇಶದಿಂದ ಆಗಮಿಸಿದ್ದ ನಾಲ್ವರಿಗೆ, ಇನ್‌ಫ್ಲೂಯೆನ್ಷಾ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿದ್ದ 63 ಮಂದಿಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ಮಂದಿಗೆ ಕೋವಿಡ್ 19 ಪಾಸಿಟಿವ್‌ ಬಂದಿದೆ. 38 ಮಂದಿಯ ಸಂಪರ್ಕವನ್ನು

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14:  ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದು, ರೋಗಿಗಳು ತಮ್ಮ ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ. ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಸಾಮರ್ಥ್ಯ ಪರಿಶೀಲಿಸಿದ ಬಳಿಕ

ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ Read More »

ಕರಾವಳಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top