Mangalore

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »

ಕರಾವಳಿ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ; ಕೃಷಿ ನಾಶ

(ನ್ಯೂಸ್ ಕಡಬ)newskadaba.com ಕಡಬ, ಜು.31. ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಕೆ.ರಮೇಶ್‌ ಗೌಡ, ಕುಶಾಲಪ್ಪ ಗೌಡ ದೇಸಾಲು, ಹೊನ್ನಪ್ಪ ಗೌಡ ದೇಸಾಲು ಅವರ ತೋಟಕ್ಕೆ ದಾಳಿ ಮಾಡಿರುವ ಕಾಡಾನೆ ಅಡಿಕೆ ಗಿಡ, ಬಾಳೆ ಗಿಡಗಳನ್ನು ಹಾನಿಗೊಳಿಸಿವೆ ಎನ್ನಲಾಗಿದೆ. ಕೃಷಿ ತೋಟಕ್ಕೆ ನುಗ್ಗಿರುವ ಕಾಡಾನೆ ನೇಂದ್ರ ಬಾಳೆಗಿಡ ಹಾನಿಗೊಳಿಸಿದೆ ಮಾತ್ರವಲ್ಲದೇ ಬಿಂದು ಸಂತೋಷ್‌ ಅವರ ನಿರ್ಮಾಣ ಹಂತದ

ಕಡಬ: ಕಾಡಾನೆ ದಾಳಿ; ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.31. ನನಗೆ ಯಾರೂ ಲಂಚ ಕೊಡಬೇಡಿ, ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂದು ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ಮಹಿಳಾ ಅಧಿಕಾರಿ ತಮ್ಮ ಕಚೇರಿಯಲ್ಲಿ ಬ್ಯಾನರ್ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ಇದು ಮಾದರಿ ನಡೆ, ಎಲ್ಲಾ ಅಧಿಕಾರಿಗಳೂ ಈ ರೀತಿ ಬೋರ್ಡ್ ಹಾಕಿಸಿಕೊಳ್ಳಬೇಕು ಎಂದು ಜನರು ವ್ಯಕ್ತಪಡಿಸಿದ್ದಾರೆ. ಸರಕಾರಿ ಕಚೇರಿಯಲ್ಲಿ ವ್ಯಾಪಕ ಲಂಚ ಕೊಟ್ಟರೆ ಮಾತ್ರ ಅಧಿಕಾರಿಗಳೂ ಸ್ಪಂದನೆ ನೀಡುತ್ತಾರೆ ಎಂಬ ಭಾವನೆ ಜನ

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮುಖ್ಯಮಂತ್ರಿ ಅಮಿತ್ ಷಾ ಪುತ್ರ ಜಯ್ ಷಾ ಭೇಟಿ ನೀಡಿದ್ದಾರೆ. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ಆರಂಭದಲ್ಲಿ ಸಂಪರ್ಕ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದ್ದು, ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ Read More »

ಕರಾವಳಿ, ಕರ್ನಾಟಕ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಹಳ್ಳವೊಂದಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ವರುಣ್‌ (27) ಮತ್ತು ವೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ವರುಣ್‌ ಮತ್ತು ವೀಕ್ಷಿತ್‌ ಹಳ್ಳದ ದಡದಲ್ಲೇ ಕುಳಿತ್ತಿದ್ದರು. ಕೆಲವೇ ಹೊತ್ತಿನಲ್ಲಿ ದಡದಲ್ಲಿ ಕುಳಿತಿದ್ದ ವರುಣ್‌ ಆಯತಪ್ಪಿ ನೀರಿಗೆ ಬಿದ್ದಿದ್ದರು. ಇದನ್ನು ಗಮನಿಸಿದ ವೀಕ್ಷಿತ್‌ ಕೂಡಲೇ ಹಳ್ಳಕ್ಕೆ ದುಮುಕಿದರು. ಆದರೆ, ಹಳ್ಳದಲ್ಲಿ ಹೂಳು ತುಂಬಿದ್ದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಘಟನಾ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ ಎನ್ನಲಾಗಿದೆ.

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ Read More »

ಕರಾವಳಿ
Scroll to Top