Mangalore

ಪುತ್ತೂರು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ವ್ಯಕ್ತಿಗಳಿಬ್ಬರ ಕೊವೀಡ್ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.02: ಪುತ್ತೂರಿನ ಎರಡು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ದ ಮತ್ತು ಬಪ್ಪಳಿಗೆಯ 20 ವರ್ಷದ ಯುವಕನಿಗೆ ಜೂ.27 ರಂದು ಕೊರೋನಾ ದೃಢಪಟ್ಟಿತ್ತು.   ಅದೇ ದಿನ ಅವರಿಬ್ಬರನ್ನ ಮಂಗಳೂರು ಕೋವಿಡ್ ಆಸ್ಪತ್ರೆ ಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರಿಬ್ಬರು ಗುಣಮುಖ ಹೊಂದಿದ್ದು ಕೊವೀಡ್ ನೆಗೆಟಿವ್ ವರದಿ ಬಂದಿದೆ.ಎಂದು ಆರೋಗ್ಯಧಿಕಾರಿಯವರು ತಿಳಿಸಿದ್ದಾರೆ.      

ಪುತ್ತೂರು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ವ್ಯಕ್ತಿಗಳಿಬ್ಬರ ಕೊವೀಡ್ ವರದಿ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್

(ನ್ಯೂಸ್ ಕಡಬ) newskadaba.com.ಮಡಿಕೇರಿ,ಜು.2:  ಕೊರೊನಾ ಕಾರಣದಿಂದ ರೈತರ ಸಾಲ ಮರುಪಾವತಿ ಅವಧಿಯನ್ನು ಎರಡರಿಂದ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ. ಜೂನ್ 30 ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಸಹಕಾರ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್ Read More »

ಕರ್ನಾಟಕ

ಬೆಂಗಳೂರು: BMTC ಯ 32 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಬೆಂಗಳೂರು ನಗರದ ಜನರ ಜೀವನಾಡಿ ಬಿಎಂಟಿಸಿ ಬಸ್. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲುತ್ತಿದೆ. ಕಳೆದ ಒಂದು ವಾರದಲ್ಲಿ 20 ಸಿಬ್ಬಂದಿಗೆ ಸೋಂಕು ತಗುಲಿದೆ. ಬಿಎಂಟಿಸಿಯ ಒಟ್ಟು 32 ಸಿಬ್ಭಂದಿಗಳಿಗೆ ಇದುವರೆಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ಈಗಾಗಲೇ ಕೆಲವೇ ಬಸ್‌ಗಳು ಮಾತ್ರ ಸಂಚಾರ ನಡೆಸುತ್ತಿದ್ದು, ರಾತ್ರಿ 8 ಗಂಟೆಗೆ ಬಸ್ ಸಂಚಾರ ಸ್ಥಗಿತಗೊಳ್ಳುತ್ತಿದೆ.ಜೂನ್ 12ರಂದು ಬಿಎಂಟಿಸಿ ಸಿಬ್ಬಂದಿಗೆ ಸೋಂಕು ತಗುಲಿದ ಮೊದಲ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: BMTC ಯ 32 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು Read More »

ಕರಾವಳಿ, ಕರ್ನಾಟಕ

ಟ್ರಬಲ್ ಶೂಟರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ ➤ ಡಿಕೆಶಿಯಿಂದ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಗುರುವಾರ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರುಗಳು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮವು ಐತಿಹಾಸಿಕ ದಾಖಲೆ ಬರೆಯಿತು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು.

ಟ್ರಬಲ್ ಶೂಟರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ ➤ ಡಿಕೆಶಿಯಿಂದ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ವಯನಾಡು: ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿ ನೀಡಿದ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ವಯನಾಡು ,ಜು.02:ಕೊರೊನಾ ವೈರಸ್‌ ಕಾರಣದಿಂದ ಕೇರಳದಲ್ಲಿ ಆನ್‌ಲೈನ್‌ ಶಿಕ್ಷಣವನ್ನು ಆರಂಭ ಮಾಡಲಾಗಿದ್ದು ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಯನಾಡು ಜಿಲ್ಲೆಯ ಕಲ್ಪೆಟ್ಟ ಪಟ್ಟಣದ ಬುಡಕಟ್ಟು ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿಗಳನ್ನು ನೀಡಿದ್ದಾರೆ.   ಕೇರಳದಲ್ಲಿ ಫಸ್ಟ್‌ ಬೆಲ್‌ ಆನ್‌ಲೈನ್‌ ತರಗತಿಗಳನ್ನು ನಡೆಸುತ್ತಿದ್ದು ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳು ಈ ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಯನಾಡು ಸಂಸದರಾಗಿರುವ ರಾಹುಲ್‌ ಗಾಂಧಿ ಬುಡಕಟ್ಟು ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿಗಳನ್ನು ಒದಗಿಸಿದ್ದಾರೆ.  

ವಯನಾಡು: ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿ ನೀಡಿದ ರಾಹುಲ್‌ ಗಾಂಧಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ➤ ಹೆಚ್ಚಿನ ಮಳೆಯಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.02: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2 ಹಾಗೂ 3ರಂದು ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು ಹವಾಮಾನ ಇಲಾಖೆ ” ಆರೆಂಜ್ ಅಲರ್ಟ್” ಘೋಷಿಸಿದೆ.   ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ➤ ಹೆಚ್ಚಿನ ಮಳೆಯಾಗುವ ನಿರೀಕ್ಷೆ Read More »

ಕರಾವಳಿ, ಕರ್ನಾಟಕ

ತಡೆಗೋಡೆಗೆ ಗುದ್ದಿದ ಲಾರಿ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಅರಂತೋಡು,ಜು.02: ಮಡಿಕೇರಿ ಕಡೆಗೆ ಸಮಚರಿಸುತ್ತಿದ್ದ ಲಾರಿಯೊಂದು ಅರಂತೋಡು ತೆಕ್ಕಿಲ್ ಬಳಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿದೆ. ಸದ್ಯ ಯಾವುದೇ ಪ್ರಾಣಾಪಯಾವಿಲ್ಲದೆ ಚಾಲಕ ಪಾರಾಗಿದ್ದಾರೆ. ಇನ್ನು ರಸ್ತೆ ಬದಿಯಲ್ಲಿ ತಡೆಗೋಡೆ ಇದ್ದ ಕಾರಣ ಯಾವುದೇ ಹಾನಿಯಾಗಿಲ್ಲ. ಇಲ್ಲದಿದ್ದರೆ ಲಾರಿ ಅಲ್ಲಿರುವ ಮನೆ ಮೆಲೆ ಬೀಳುತ್ತಿತ್ತು ಎನ್ನಲಾಗಿದೆ.    

ತಡೆಗೋಡೆಗೆ ಗುದ್ದಿದ ಲಾರಿ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ

ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಹುಷಾರ್! ➤ ಕಟ್ಟಬೇಕಾದಿತು ದಂಡ

(ನ್ಯೂಸ್ ಕಡಬ) newskadaba.com.ಉಡುಪಿ,ಜು.2:ಕೊರೊನಾ ತಡೆಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಸಂಬಂಧಿಸಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವವರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡು ವಂತೆ ಅಧಿಕಾರಿ ಗಳು, ಕೊರೊನಾ ವಾರಿಯರ್ಸ್‌ ತಂಡ, ಆರೋಗ್ಯ ಇಲಾಖೆ, ಪೊಲೀಸರು ಜಾಗೃತಿ ಮೂಡಿಸಿದರೂ. ನಗರದಲ್ಲಿ ಮಾಸ್ಕ್ ಸಹಿತ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿ ನಗರಸಭೆ ಅಧಿಕಾರಿಗಳು ಮುಖ್ಯ ಪೇಟೆಯಲ್ಲಿ ಬುಧವಾರ ದಾಳಿ ನಡೆಸಿದರು. ನಿಟ್ಟೂರು, ನಗರ ಬಸ್‌ ಸ್ಟಾಂಡ್‌ ಮುಂತಾದ ಕಡೆ ಬೆಳಗ್ಗೆ ವಲಸೆ ಕಾರ್ಮಿಕರು ಮಾಸ್ಕ್ ಧರಿಸದೆ

ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಹುಷಾರ್! ➤ ಕಟ್ಟಬೇಕಾದಿತು ದಂಡ Read More »

ಕರ್ನಾಟಕ

ಮಂಗಳೂರು : 7 ದಿನದ ಕಂದಮ್ಮನಿಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.02: ದ.ಕ. ಜಿಲ್ಲೆಯಲ್ಲಿ 7 ದಿನದ ಕಂದಮ್ಮನಲ್ಲೂ ಕೊರೊನಾ ಸೋಂಕು ದೃಢಪಟ್ಟಿದೆ. ಏಳು ದಿನದ ಹಿಂದೆ ಜನಿಸಿದ ಹಸುಗೂಸಿನಲ್ಲೂ ಇದೀಗ ಸೋಂಕು ದೃಢಪಟ್ಟಿದೆ.   ಸೋಂಕಿತ ಸಂಪರ್ಕದಿಂದಲೇ 7 ದಿನದ ಕಂದಮ್ಮನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಮಗುವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಇದೀಗ ಕಂದಮ್ಮನನ್ನು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲೂ ಕೊರೊನಾ

ಮಂಗಳೂರು : 7 ದಿನದ ಕಂದಮ್ಮನಿಗೂ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.02: ಪೈಲೆಟ್ ತರಬೇತಿ ಪಡೆದಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮರೋಳಿಯಲ್ಲಿ ಬುಧವಾರ ನಡೆದಿದೆ. ನೂರಾರು ಕನಸುಗಳನ್ನ ಕಟ್ಟಿಕೊಂಡು ಪೈಲೆಟ್ ತರಬೇತಿ ಪಡೆದಿದ್ದ ಯುವಕನೋರ್ವ ಬುಧವಾರದಂದು ನೇಣು ಬಿಗಿದುಕೊಂಡಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ಮೃತ ಯುವಕ 32 ವರುಷದ ಅದ್ವೈತ ಶೆಟ್ಟಿನಗರದ ಮರೋಳಿ ನಿವಾಸಿಯಾಗಿದ್ದು ಪೈಲೆಟ್‌ ತರಬೇತಿ ಮುಗಿಸಿ ಕೆಲಸ ಹುಡುಕುತ್ತಿದ್ದರು. ಮೂರು ದಿನಗಳ ಹಿಂದೆ ಊರಿಗೆ ಮರಳಿದ್ದು ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top