Mangalore

ಪುತ್ತೂರು ;ಅಡಿಕೆ ಧಾರಣೆ ನಾಗಾಲೋಟ

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.24:  ಅಡಿಕೆ ಧಾರಣೆ ಪ್ರತಿ ದಿನ ಏರುತ್ತಿರುವ ಕಾರಣ ತಮ್ಮ ನಿರೀಕ್ಷಿತ ಧಾರಣೆ ಬರುವವರೆಗೆ ಅಡಕೆ ಮಾರುಕಟ್ಟೆಗೆ ತಾರದಿರಲು ಬೆಳೆಗಾರರು ಅಘೋಷಿತ ನಿರ್ಣಯ ಕೈಗೊಂಡ ಸೂಚನೆ ಸಿಗುತ್ತಿದೆ. ಪರಿಣಾಮವೋ ಎಂಬಂತೆ ಧಾರಣೆ ಹೆಚ್ಚುತ್ತಿದ್ದರೂ ಕಳೆದ ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ಲವ ಲವಿಕೆ ಕಂಡು ಬರುತ್ತಿಲ್ಲ. ಕ್ಯಾಂಪ್ಕೋ ಮತ್ತು ಖಾಸಗಿ ಮಾರುಕಟ್ಟೆ ಅಡಿಕೆಗಾಗಿ ಕಾಯುತ್ತಿದ್ದರೂ, ಬೆಳೆಗಾರರು ಮಾತ್ರ ಬೆಳೆಯ ಬೆಲೆಯನ್ನು ರಿಮೋಟ್‌ ಕಂಟ್ರೋಲ್‌ ಮಾಡುವ ರೀತಿಯಲ್ಲಿ ಚಾಣಾಕ್ಷ ತಂತ್ರ ಅನುಸರಿಸುತ್ತಿದ್ದಾರೆ. ಮಂಗಳವಾರ ಕ್ಯಾಂಪ್ಕೋದಲ್ಲಿ […]

ಪುತ್ತೂರು ;ಅಡಿಕೆ ಧಾರಣೆ ನಾಗಾಲೋಟ Read More »

ಕರಾವಳಿ, ಕರ್ನಾಟಕ

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‌ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್‌ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್‌ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್‌

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »

ಕರಾವಳಿ

ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.24:   ಗಂಟಲು ದ್ರವ ಪರೀಕ್ಷೆಗಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಲ್ಯಾಬ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿಯಲ್ಲಿ ನಾಲ್ಕೈದು ದಿನಗಳಲ್ಲಿ ಲ್ಯಾಬ್ ಕಾರ್ಯಾರಂಭಿಸಲಿದೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಪುರಸಭೆ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹಾಗೂ ಪರಿಣಿತರು ಸೋಂಕು ಪ್ರಮಾಣ ಹೆಚ್ಚಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡುತ್ತಿದ್ದು, ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೌಲಭ್ಯಗಳನ್ನು

ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ಕೊರೊನಾ ಶಂಕೆ ಹಿನ್ನೆಲೆ ➤ ಮಂಗಳೂರಿನ ಬಂದರು ‘ಬಂದ್’

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಮಂಗಳವಾರದಂದು, ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮೀಗಾರರೇ ಸೇರಿಕೊಂಡು ದಕ್ಕೆ ಬಂದ್ ಮಾಡಿದ್ದಾರೆ.  ಮಂಗಳೂರು ನಗರದಲ್ಲಿ ದಿನ ಬೆಳಗಾಗುವ ಮುನ್ನವೇ ವ್ಯಾಪಾರ ವಹಿವಾಟು ಪೂರ್ಣಗೊಳಿಸುತ್ತಿದ್ದ ಬಂದರು ಇದೀಗ ಬಂದ್ ಆಗಿದ್ದು, ಹೊರಗಿನಿಂದ ಯಾರಿಗೂ ಬಂದರು ಪ್ರವೇಶಕ್ಕೆ ಅವಕಾಶವಿಲ್ಲ.   ಸೂರ್ಯೋದಯದ ಮುನ್ನವೇ ನಗರದಲ್ಲಿರುವ ಬಂದರಿನಿಂದ ಜಿಲ್ಲೆಯ ವಿವಿಧ ಭಾಗಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ಮೀನು ರವಾನೆಯಾಗುತ್ತಿತ್ತು. ಹೊರ ರಾಜ್ಯದಿಂದಲೂ ಮೀನಿನ ವಾಹನಗಳು ದಕ್ಕೆಗೆ ಆಗಮಿಸಿ ಮೀನಿನೊಂದಿಗೆ

ಕೊರೊನಾ ಶಂಕೆ ಹಿನ್ನೆಲೆ ➤ ಮಂಗಳೂರಿನ ಬಂದರು ‘ಬಂದ್’ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಕೊರೋನಾ ಕೇಸ್‌ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ‌ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುರ್ತು ಸೇವೆಗೆ ಸನ್ನದ್ಧರಾಗಿ ➤ ಡಾ. ವೀರೇಂದ್ರ ಹೆಗ್ಗಡೆಯವರಿಂದ ಕಿವಿಮಾತು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.23:  ಸರಕಾರ ವಿಪತ್ತು ನಿರ್ವಹಣೆಗೆ ಎಂದೂ ಸನ್ನದ್ಧವಾಗಿದೆ. ಆದರೆ ಪ್ರಜೆಗಳಲ್ಲಿ ಸೇವಾ ಮನೋಭಾವ ಬೆಳೆಯಬೇಕಿರುವುದು ಮುಖ್ಯ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ)ಯು ಸ್ವಯಂ ಸೇವಕರ ತಂಡವನ್ನು ರಚಿಸಿ ವಿಪತ್ತು ನಿರ್ವಹಣೆಯ ಹೊಣೆಗಾರಿಕೆ ವಹಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.     ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ

ತುರ್ತು ಸೇವೆಗೆ ಸನ್ನದ್ಧರಾಗಿ ➤ ಡಾ. ವೀರೇಂದ್ರ ಹೆಗ್ಗಡೆಯವರಿಂದ ಕಿವಿಮಾತು Read More »

ಕರಾವಳಿ, ಕರ್ನಾಟಕ

ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಮಡಿಕೇರಿ, ಜೂ. 23: ಸಹಾಯಕ ಸಬ್‌ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಎಂ.ಎಸ್‌ ಈರಪ್ಪ ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸಿ ಕಳೆದ ಮೇ 30 ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದರು.ಇಂದು ಬೆಳಿಗ್ಗೆ ತಮ್ಮ

ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.23:  ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಸೋಮವಾರ ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.   ಮಂಗಳೂರು ಕಡೆಯಿಂದ ಬೆಂಗಳುರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ. ಚತುಷ್ಟಥ ಕಾಮಗಾರಿ ಹಿನ್ನಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಘಟನ ಸ್ಥಳಕ್ಕೆ ವಿಟ್ಲ

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.23: ದ.ಕ.ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಸೇತು ಆ್ಯಪ್ ಮೂಲಕ ಕರೊನಾ ರೋಗಪೀಡಿತನನ್ನು ಗುರುತಿಸಲಾಗಿದೆ. ಮಂಗಳೂರಿನ ಎಕ್ಕೂರಿನ ಮೀನು ಮಾರಾಟ ಮಾಡುವ ಯುವಕನ ಬಗ್ಗೆ ಮೊದಲು ಶಂಕೆ ವ್ಯಕ್ತವಾಗಿ, ನಂತರ ಪರೀಕ್ಷೆಯಲ್ಲಿ ಆತ ರೋಗಿ ಎಂದು ಸಾಬೀತಾಗಿದೆ. ವಿಶೇಷವೆಂದರೆ, ಈ ಯುವಕನಿಗೆ ಕೋವಿಡ್ ತಗುಲಿರುವ ವಿಚಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗಿಂತ ಮೊದಲು ತಿಳಿದದ್ದು ನೆರಮನೆಯವರಿಗೆ. ಆರೋಗ್ಯ ಸೇತು ಆ್ಯಪ್ ಮೂಲಕ ಅವರಿಗೆ ಈ ಮಾಹಿತಿ ಗೊತ್ತಾಯಿತು. ಆ್ಯಪ್ ಕೋವಿಡ್ ಲಕ್ಷಣವಿರುವ ವ್ಯಕ್ತಿ

ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಳೆಗಾಲದಲ್ಲಿ ಸಂಭವಿಸಿದ ತೀವ್ರ ಹಾನಿಯನ್ನು ಮನಗಂಡು ಜಿಲ್ಲಾಡಳಿತವು ಪ್ರಸಕ್ತ ವರ್ಷದಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸರ್ವ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಂಆರ್‌ಪಿಎಲ್‌ ನೆರವಿನೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರವು ಖರೀದಿಸಿದ ರಕ್ಷಣಾ ಸಾಮಗ್ರಿ ಗಳನ್ನು ವಿವಿಧ ಇಲಾಖೆಗಳಿಗೆ ಸೋಮವಾರ ಹಸ್ತಾಂತರಿಸಿ ಅವರು ಮಾತನಾಡಿದರು.ವಿಪತ್ತುಗಳ ಸಂದರ್ಭದಲ್ಲಿ

ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ Read More »

ಕರಾವಳಿ, ಕರ್ನಾಟಕ
Scroll to Top