Mangalore

ಸಾವಿನಲ್ಲೂ ಒಂದಾದ ದಂಪತಿಗಳು

(ನ್ಯೂಸ್ ಕಡಬ) newskadaba.com.ಬಾಗಲಕೋಟೆ,ಜೂ.17:ಮನೆಯಲ್ಲಿ ನಡೆದ ವಿದ್ಯುತ್ ಅವಘಡದಿಂದಾಗಿ ದಂಪತಿ ಸಾವನಪ್ಪಿರುವ ಘಟನೆ ಬಾಗಲಕೋಟೆಯ ನಗರದಲ್ಲಿ ನಡೆದಿದೆ. ಶ್ಯಾಮರಾವ್(70). ಸರೋಜಾ(60) ಸಾವಿಗೀಡಾದ ದಂಪತಿ. ಪತ್ನಿ ಸರೋಜಾ ಅವರು ಮನೆ ಆವರಣದ ಪಂಪ್ ಸೆಟ್ ಚಾಲನೆ ಮಾಡಲು ತೆರಳಿದ ಸಂದರ್ಭ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಸರೋಜಾ ಅವರಿಗೆ ವಿದ್ಯುತ್ ತಗುಲಿದೆ. ಈ ಹಿನ್ನೆಲೆ ಸರೋಜಾ ಜೋರಾಗಿ ಚೀರಿಕೊಂಡಿದ್ದಾರೆ. ತಕ್ಷಣ ಅವರ ಶಬ್ದ ಕೇಳಿದ ಪತಿ ಶ್ಯಾಮರಾವ್. ತಕ್ಷಣ ರಕ್ಷಿಸಲು ಧಾವಿಸಿದಾಗ ಅವರಿಗೂ ವಿದ್ಯುತ್ ಸ್ವರ್ಶವಾಗಿದ್ದು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರದ […]

ಸಾವಿನಲ್ಲೂ ಒಂದಾದ ದಂಪತಿಗಳು Read More »

ಕರ್ನಾಟಕ

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

(ನ್ಯೂಸ್ ಕಡಬ) newskadaba.com ಜೂ.16:  ಭಾರತ – ಚೀನಾ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಜತೆಗೆ , ಭಾರತೀಯ ಸೈನಿಕರು ಚೀನಾದ ಸೈನಿಕರಿಗೆ ಪ್ರತ್ಯುತ್ತರ ನೀಡಿದ್ದು, ಚೀನಾದ 43 ಸೈನಿಕರು ಹತರಾಗಿದ್ದಾರೆ.   ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಮಹಿಳೆಯರ ನೆರವಿಗೆ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.17 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳನ್ನು ವಿಡೀಯೊ ಚಿತ್ರಿಕರಣದ ಮೂಲಕ ಮಾಹಿತಿ ನೀಡುವ ಸಲುವಾಗಿ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್‍ನ್ನು ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ದಾ ಅಮಿತ್ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಪ್ರಾರಂಭಿಸಲಾದ ಜ್ಞಾನ ವಿಕಾಸ ಯೂ ಟ್ಯೂಬ್ ಚಾನಲ್‍ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಲೋಕಾರ್ಪಣೆಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸುತ್ತಿರುವ ಅನೇಕ

ಧರ್ಮಸ್ಥಳ ಮಹಿಳೆಯರ ನೆರವಿಗೆ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್ Read More »

ಕರ್ನಾಟಕ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.16:ಮೌಂಟ್ ಎವರೆಸ್ಟ್ ಏರಿದ್ದ ಪರ್ವತಾರೋಹಿ ಪ್ರೇಮಲತಾ ಅಗರ್ ವಾಲ್ ಅವರ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ ಈ ಬಗ್ಗೆ ಅವರ ಪತಿ ವಿಮಲ್ ಅಗರ್ವಾಲ್ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.   ಕಳ್ಳರು 20 ಸಾವಿರ ರೂ., 15 ಬೆಳ್ಳಿ ನಾಣ್ಯಗಳು , ಎರಡು ಕಂಪ್ಯೂಟರ್ ಗಳು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ನನ್ನ ಮನೆಗೆ ನುಗ್ಗಿದ ಕಳ್ಳರು ನನ್ನ ಪತ್ನಿಯ ಪದ್ಮಶ್ರೀ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಯುಷ್‌ನಿಂದ ರೋಗನಿರೋಧಕ ಔಷಧ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಪತ್ರಕರ್ತರಿಗೆ ರೋಗ ನಿರೋಧಕ ಔಷಧ ವಿತರಣೆ, ಗ್ರಾಮೀಣ ಕೂಟ ಸಂಸ್ಥೆ ವತಿಯಿಂದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಸಮಾರಂಭ ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆಯಿತು. ಪತ್ರಕರ್ತರಿಗೆ ಔಷಧ, ಮಾಸ್ಕ್, ಸ್ಯಾನಿಟೈಜರ್ ವಿತರಿಸಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, ಕೊರೋನಾ ವಾರಿಯರ್ಸ್‌ಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ವಿತರಣೆ ಮಾಡುವ ಮೂಲಕ ಆಯುಷ್ ಇಲಾಖೆ ಉತ್ತಮ ಕಾರ್ಯ ನಡೆಸಿದೆ.  

ಆಯುಷ್‌ನಿಂದ ರೋಗನಿರೋಧಕ ಔಷಧ ವಿತರಣೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ಕರಾವಳಿಗೆ ಮುಂಗಾರು ಕಾಲಿಟ್ಟ ಪರಿಣಾಮ, ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಹಾನಿ ಹೆಚ್ಚಾಗುತ್ತಿದೆ. ಕರವಾಳಿಯಲ್ಲಿ ಎಂದಿನಂತೆ ಮಂಗಳವಾರವೂ ಭಾರಿ ಗಾಳಿ ಮಳೆ ಅಬ್ಬರಿಸಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.   ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಬಿಟ್ಟು, ಬಿಟ್ಟು ಮಳೆಯಾಗಿತ್ತು.ಉಳಿದಂತೆ ಮೋಡ ಕವಿದ ವಾತವಾರಣವಿತ್ತು. ಬೆಳಗ್ಗೆ ಸುರಿದ ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳಲ್ಲಿ ನಿರು ನಿಂತಿತ್ತು. ಕಡಬ, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ಬಂಟ್ವಾಳ, ಧರ್ಮರ್ಸಥಳ, ಉಳ್ಳಾಲ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ. Read More »

ಕರಾವಳಿ, ಕರ್ನಾಟಕ

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com.ಮೂಡಬಿದಿರೆ,ಜೂ.17:ಮೂಡಬಿದಿರೆಯ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ಕಾಡುಕೋಣವೊಂದು ಮಂಗಳವಾರ ರಾತ್ರಿ ಕಾಣಿಸಿಕೊಂಡಿದೆ. ಪುರಸಭಾ ವ್ಯಾಪ್ತಿಯಲ್ಲಿ ಕರಿಂಜೆ ಗ್ರಾಮದ ಕರಿಂಜೆಗುತ್ತು ಪರಿಸರದಲ್ಲಿ ಮಂಗಳವಾರ ಬೆಳಗ್ಗೆ ಕಾಣಿಸಿಕೊಂಡಿತ್ತು ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದರು.ಸ್ಥಳಕ್ಕೆ ಭೇಟಿನೀಡಿದ ಅರಣ್ಯ ಇಲಾಖಾ ಅಧಿಕಾರಿಗಳು ದಿನವಿಡೀ ಹುಡುಕಾಟ ನಡೆಸಿದರು.ಆದರೆ ಎಲ್ಲೂ ಪತ್ತೆ ಯಾಗಿರಳಿಲ್ಲ. ರಾತ್ರಿ 9.30 ಸುಮಾ ರಿಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ರೀತಿಯಲ್ಲಿ ಪತ್ತೆಯಾಯಿತು. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆ ಕಾಡುಕೋಣವನ್ನು ಹಿಡಿಯುವಲ್ಲಿ. ಸಫಲಾರಾಗಿದ್ದಾರೆ. ನಂತರ

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.16: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು. ಅದರ ಜೊತೆಗೆ, ಕೊನೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸಿದ್ದತೆಯನ್ನು ನಡೆಸಿದ್ದರು.   ಆದರೆ, ಲಾಕ್ ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ಇಂಗ್ಲೀಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗಾ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು,

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ Read More »

ಕರಾವಳಿ, ಕರ್ನಾಟಕ

ಕೊರೊನಾಗೆ ಬಲಿಯಾದ ಪೋಲಿಸ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.16: ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಸಂಚಾರ ಠಾಣೆ ಎಎಸ್‍ಐ ಒಬ್ಬರು ಮೃತಪಟ್ಟಿರು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದರೊಂದಿಗೆ ಕೊರೊನಾ ಕರ್ನಾಟಕದಲ್ಲಿ ಮೊದಲ ಪೋಲಿಸ್ ಬಲಿ ಪಡೆದುಕೊಂಡಿದೆ. ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್‍ಐ ಇನ್ನೂ 15 ದಿನಗಳಲ್ಲಿ ನಿವೃತ್ತರಾಗಲಿದ್ದರು. ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿಷಯ ತಿಳಿದ ಪೋಲಿಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅದೇ ಠಾಣೆಯ

ಕೊರೊನಾಗೆ ಬಲಿಯಾದ ಪೋಲಿಸ್ Read More »

ಕರ್ನಾಟಕ

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.16:ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ಸತ್ಯೇಂದರ್ ಜೈನ್ ಅವರಿಗೆ ತೀವ್ರ ಜ್ವರ. ಉಸಿರಾಟ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ದಿಲ್ಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದರ್ ಜೈನ್ ಅವರ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿದ್ದು. ವರದಿಗಾಗಿ ಕಾಯಲಾಗುತ್ತಿದೆ ಎಂದು ಸ್ವತಃ ಸತ್ಯೇಂದರ್ ಜೈನ್ ಅವರು ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್
Scroll to Top