Mangalore

3 ವಿದ್ಯುತ್ ತಂತಿಗಳ ಕಳ್ಳತನ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.29. ಪಿಕಪ್ ವಾಹನದಲ್ಲಿ ತುಂಬಿಸಿದ್ದ 5 ಬಂಡಲ್ ವಿದ್ಯುತ್ ತಂತಿಗಳ ಪೈಕಿ 3 ಬಂಡಲ್ ವಿದ್ಯುತ್ ತಂತಿ ಕಳವುಗೈದಿರುವ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಿವಾಸಿ ರಾಘವೇಂದ್ರ ನಾಯ್ಕ್ ಎಂಬವರು ರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಈಗಲ್ ಸಂಸ್ಥೆಗೆ ಸೇರಿದ ಗೋದಾಮಿನಿಂದ 5 ಬಂಡಲ್ ವಿದ್ಯುತ್ ತಂತಿಗಳನ್ನು ಪಡೆದುಕೊಂಡು ಅವರ ಬೊಲೆರೋ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದು ರಾತ್ರಿ 10.30ರ ವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿರುವ […]

3 ವಿದ್ಯುತ್ ತಂತಿಗಳ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಯ ಗರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. “ನನ್ನ ಜೀವನ-ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿರುವ ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿ ಲಭಿಸಿದೆ.  ] ಜು.27ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ (ಆಡಳಿತ) ರವಿಕುಮಾರ್ ಅವರಿಗೆ ಪ್ರಶಸ್ತಿ ನೀಡಿದರು. ಕೇಂದ್ರ ಸರ್ಕಾರದ ಮೇರಿ ಲೈಫ್ ಮೇರಾ ಸ್ಪಚ್ಛಾ ಶೆಹರ್ (Meri Life Mera Swachha Shehar) ಅಭಿಯಾನದಡಿ “ನನ್ನ ಜೀವನ, ನನ್ನ ಸ್ವಚ್ಚ

ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಯ ಗರಿ Read More »

ಕರಾವಳಿ

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !!

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಮನೆಯ ಮೇಲೆ ಮರ ಬಿದ್ದು ಮನೆ ಭಾಗಶಃ ಹಾನಿಯಾಗಿರುವ ಘಟನೆ ಸರ್ವೆ ಗ್ರಾಮದ ರೆಂಜಿಲಾಡಿಯಲ್ಲಿ ರಾತ್ರಿ ಸಂಭವಿಸಿದೆ ಎನ್ನಲಾಗಿದೆ. ರೆಂಜಿಲಾಡಿ ನಿವಾಸಿ ಸರಕಾರಿ ಪ್ರೌಢ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿರುವ ಮೋಹಿನಿ ಎಂಬವರ ಮನೆಗೆ ರಾತ್ರಿ ವೇಳೆ ಮರ ಮುರಿದು ಬಿದ್ದಿದ್ದು, ಮನೆಯ ಹಿಂಭಾಗದ ಗೋಡೆ, ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ ಎನ್ನಲಾಗಿದೆ. ಮನೆಯಲ್ಲಿ ಮೋಹಿಣಿ ಮಾತ್ರ ವಾಸವಾಗಿದ್ದು, ತನ್ನ ತಾಯಿಯ ಮನೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.  

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !! Read More »

ಕರಾವಳಿ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !!

(ನ್ಯೂಸ್ ಕಡಬ)newskadaba.com ಉಡುಪಿ, ಜು.28. ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಲದ ಮುರ್ಷಿದಾಬಾದ್‌ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್‌ ಶೇಖ್‌ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್‌ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !! Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.28. ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ನವೀನ್ ಬಂಗೇರಾ (57) ಎಂದು ಗುರುತಿಸಲಾಗಿದೆ. ಶಾಲೆಯಿಂದ ನೂರು ಮೀಟರ್ ದೂರದ ಯಶೋಧ ಎಂಬವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪಡುಬಿದ್ರಿ ಪೊಲೀಸರು ಹುಡುಕಾಡಿದಾಗ ನವೀನ್‌ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ. ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಹೊರಟ ಮುಸ್ಲಿಂ ದಂಪತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.28. ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್‌ ಪ್ರಯಾಣದ ಮೂಲಕ ಕಾರ್ಗಿಲ್‌ ಗೆ ತೆರಳಲಿದ್ದು, ಮಂಗಳೂರಿನ ಸೈಫ್ ಸುಲ್ತಾನ್ ಮತ್ತು ಪತ್ನಿ ಅದೀಲಾ ಫರ್ಹಾನ್‌ ಜೊತೆಯಾಗಿ ಬೈಕ್‌ ಮೂಲಕ ತಮ್ಮ ಯಾತ್ರೆಯನ್ನು ಜು. 29ರಂದು ಮಂಗಳೂರಿನಿಂದ ಶುರು ಮಾಡಿ ಆ. 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಗಿಲ್‌ ನಲ್ಲಿ ಸಮಾಪನ ಮಾಡಲಿದ್ದಾರೆ. ಈ ವೇಳೆ ಅವರು ದೇಶದಾದ್ಯಂತ ರಕ್ತದಾನ, ದೇಶಭಕ್ತಿ, ದೇಶಪ್ರೇಮ, ಹಿಜಾಬ್‌ ಕುರಿತ ಮಹತ್ವ ಸೇರಿದಂತೆ

ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಹೊರಟ ಮುಸ್ಲಿಂ ದಂಪತಿ Read More »

ಕರಾವಳಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.28ರಂದು ನಿಧನ ಹೊಂದಿದರು ಎಂದು ವರದಿಯಾಗಿದೆ. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.28. ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದ್ದು, ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಟ್ವಿಟ್ಟರ್’ನಲ್ಲಿ ‘ಫೇಕ್ ವೀಡಿಯೋ’ ಹಂಚಿಕೆ ಆರೋಪ – ವ್ಯಕ್ತಿ ವಿರುದ್ಧ ‘FIR ದಾಖಲು’

(ನ್ಯೂಸ್ ಕಡಬ)newskadaba.com ಮಲ್ಪೆ, ಜು.27. ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟ ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ವ್ಯಾಪಕ ಪ್ರತಿಭಟನೆಯ ಮೂಲಕ, ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್ ನಲ್ಲಿ ಫೇಕ್ ವೀಡಿಯೋ ಒಂದನ್ನು ಹಾಕಿ, ಕೋಮು ಸೌಹಾರ್ಧತೆಗೆ ಧಕ್ಕೆ ತಂದ ವ್ಯಕ್ತಿಯೊಬ್ಬರ ವಿರುದ್ಧ ಮಲ್ಪೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾ ಬಳಕೆ ಜಾಸ್ತಿಯಾದಂತೆ ಯಾವುದು ಅಸಲಿಯೋ, ಯಾವುದು ನಕಲಿಯೋ ಎಂಬುದನ್ನು ಪತ್ತೆ ಹಚ್ಚೋದೇ ಕಷ್ಟವಾಗಿ ಬಿಟ್ಟಿದೆ. ನಕಲಿಯಾದಂತ ವೀಡಿಯೋ ಒಂದನ್ನು

‘ಟ್ವಿಟ್ಟರ್’ನಲ್ಲಿ ‘ಫೇಕ್ ವೀಡಿಯೋ’ ಹಂಚಿಕೆ ಆರೋಪ – ವ್ಯಕ್ತಿ ವಿರುದ್ಧ ‘FIR ದಾಖಲು’ Read More »

ಕರಾವಳಿ

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ. ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ಸಹಕಾರದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.  

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top