Mangalore

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.12: ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಸೊಮಣ್ಣ ವಿರಾಜ್ಪೇಟೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ನಲ್ಲಿ ಆಶ್ರಯ ಪಡೆದಿದ್ದ ಉಗ್ರರನ್ನು ಮಟ್ಟಹಾಕಲು ಆಪರೇಷನ್ ಬ್ಲೂ ಸ್ಟಾರ್ ನಡೆಸಿದ್ದ ವೇಳೆ 1984-85ರ ಅವಧಿಯಲ್ಲಿ ಸೋಮಣ್ಣ ಸೇನಾ ಸಿಬ್ಬಂದಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಅತ್ಯಂತ ಅನುಭವಿ ಸೇನಾಧಿಕಾರಿಗಳಲ್ಲಿ ಒಬ್ಬರಾಗಿದ್ದ ಸೋಮಣ್ಣ ಶೌರ್ಯಕ್ಕೆ ಹೆಸರಾಗಿದ್ದರು.ಮೃತರು ಪತ್ನಿ ರೇಣು ಸೋಮಣ್ಣ, […]

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್

ನ್ಯೂಸ್ ಕಡಬ) newskadaba.com.ಕಲಬುರ್ಗಿ,ಜೂ.14:ರಾಜ್ಯದಲ್ಲಿ ಮತ್ತೆ ಲಾಕ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಕಲಬುರ್ಗಿಯ ಜೆಮ್ಸ್ ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್‍ವೈ ಅವರೊಂದಿಗೆ ಮಾತನಾಡಲಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆಯಿಲ್ಲ. ಸರಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರವೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗದ ಲಕ್ಷಣ ಇಲ್ಲದಿದ್ದರೆ ಅವರಿಂದ ಸೋಂಕು ಹರಡುವುದು

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್ Read More »

ಕರ್ನಾಟಕ

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14: ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಇರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಬಂಧಿತ ಆರೋಪಿಗಳನ್ನ ಸಜೀಪನಡು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಮಸೂದ್ (20), ಮೊಹಮ್ಮದ್ ಅಜೀಮ್ (20), ಅಬ್ದುಲ್ ಲತೀಫ್ (20), ಮೊಹಮ್ಮದ್ ಅರ್ಫಾಜ್ (20) ಎಂದು ಗುರುತಿಸಲಾಗಿದೆ.  ಶನಿವಾರದಂದು ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿನ ಧಾರ್ಮಿಕ

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೂರ್ಯಗ್ರಹಣ ಪ್ರಯುಕ್ತ ಜೂನ್ 21ರಂದು ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com.ಧರ್ಮಸ್ಥಳ,ಜೂ.14:ಜೂ. 21 ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನದಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಈ ವರ್ಷದ ಮೊದಲ ಸೂರ್ಯಗ್ರಹಣ ಜೂ.21 ನಡೆಯುದರಿಂದಾಗಿ ಬೆಳಗ್ಗೆ 5.30ರಿಂದ 9ರ ವರೆಗೆ ದರ್ಶನ ಅವಕಾಶವಿದೆ. ಬೆಳಗ್ಗೆ 6ಕ್ಕೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9.30ಕ್ಕೆ ಮಹಾಪೂಜೆ ಜರುಗಲಿದೆ. ಆ ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನ ಬಾಗಿಲು ತೆರೆಯಲಿದ್ದು ರಾತ್ರಿ 8.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ

ಸೂರ್ಯಗ್ರಹಣ ಪ್ರಯುಕ್ತ ಜೂನ್ 21ರಂದು ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ Read More »

ಕರಾವಳಿ

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.14 : ಇಂದು ನಸುಕಿನ ಜಾವ ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಕಳೆದ ಕೆಲ ಸಮಯದಿಂದ ಸೈಲೆಂಟ್ ಆಗಿದ್ದ ಭಜರಂಗ ದಳ ಇದೀಗ ಮತ್ತೆ ಎಕ್ಟಿವ್ ಆಗಿದೆ.   ಕೊಟ್ಟಾರ ಬಳಿ ಮಿನಿ ಟೆಂಪೋ ತಡೆದು 4 ಕೋಣಗಳನ್ನು ರಕ್ಷಣೆ ಮಾಡಿ ಒಬ್ಬ ಆರೋಪಿಯನ್ನು ಹಿಡಿದು ಸಂಘಟನೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಉರ್ವ ಪೊಲೀಸ್ ಠಾಣೆಗೆ ಸಮೀಪದಲ್ಲೇ ಘಟನೆ ನಡೆದಿದೆ, ಉಡುಪಿ ಯಿಂದ

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.14: ಉತ್ತರ ಪ್ರದೇಶದ ಮಥುರಾದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಉಪ್ಪಿನಂಗಡಿಯ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ ರಜೆಯಲ್ಲಿ ಊರಿಗೆ ಬಂದವರು ಕಳೆದ ಸೋಮವಾರವಷ್ಟೇ ಮರಳಿ ಕರ್ತವ್ಯಕ್ಕೆ ಹಿಂತಿರುಗಿದ್ದರು. ಸಂದೇಶ್ ಅವರು ಮಥುರಾದಲ್ಲಿನ ಕ್ವಾರೆಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು ಅಲ್ಲಿಯೇ ಹೃದಯಾಘಾತಕ್ಕೀಡಾಗಿರುವುದಾಗಿ ತಿಳಿದು ಬಂದಿದೆ. ಇವರು ಕಳೆದ 14 ವರ್ಷಗಳಿಂದ ಯೋಧರಾಗಿ ತಾಯಿ ಭಾರತಾಂಭೆಯ ಸೇವೆ ಸಲ್ಲಿಸುತ್ತಿದ್ದರು. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.  

ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ತವ್ಯದಲ್ಲಿದ್ದ ಹಾಸನ ಜಿಲ್ಲೆಯ ಸಿಆರ್‌ಪಿಎಫ್ ಯೋಧ ನಿಧನ

(ನ್ಯೂಸ್ ಕಡಬ) newskadaba.com ಛತ್ತಿಸಗಡ, ಜೂ.12:  ಹಾಸನ ತಾಲ್ಲೂಕಿನ ಈಚಲಹಳ್ಳಿ ಗ್ರಾಮದ 42 ವರ್ಷದ ಯೋಧ ಹೇಮಂತ್‌ಕುಮಾರ್ ಛತ್ತಿಸಗಡದ ಸುಕ್ಮಾದಲ್ಲಿ 150ನೇ ಸಿಆರ್‌ಪಿಎಫ್‌ ಬೆಟಾಲಿಯನ್‌ನಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಛತ್ತೀಸ್​ಗಡದ ಸುಕ್ಮಾ ಕ್ಯಾಂಪ್​​ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಯೋಧ ಹೇಮಂತ್‌ಕುಮಾರ್ 19 ವರ್ಷಗಳ ಕಾಲ ಸಿಆರ್​ಪಿಎಫ್​ ನಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತಿ ಹೊಂದಲು ಕೇವಲ ಹತ್ತು ತಿಂಗಳು ಬಾಕಿ ಇರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ‌. ಮೃತರು ದಾಸೇಗೌಡ ಎಂಬುವವರ ಮಗನಾಗಿದ್ದು, ಪತ್ನಿ ಹಾಗೂ ಓರ್ವ ಗಂಡು

ಕರ್ತವ್ಯದಲ್ಲಿದ್ದ ಹಾಸನ ಜಿಲ್ಲೆಯ ಸಿಆರ್‌ಪಿಎಫ್ ಯೋಧ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ 13: ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಕೃಷ್ಣಾಪುರ ಎಂಬಲ್ಲಿನ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್(20) ಎಂದು ಗುರುತಿಸಲಾಗಿದೆ. ಸಂತೋಷ್ ಸ್ನೇಹಿತರ ಜೊತೆ ಇಂದು ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.13:ಕೊರೊನಾ ಆರ್ಭಟದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಇಡೀ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಸಂಸ್ಥೆಯೊಂದು 1 ವರ್ಷ ಶಾಲೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು. ಧರ್ಮಸ್ಥಳದ ಸಮೀಪ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. 350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರಾಗಿದ್ದಾರೆ. ಹೀಗಾಗಿ

ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್ Read More »

ಕರಾವಳಿ

ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಿಹಾರ,ಜೂ.12:  ನೇಪಾಳಿ ಸೇನೆ ಬಿಹಾರದ ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತದ ಓರ್ವ ಪ್ರಜೆ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸೋನೆವಾರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಿಪ್ರಾ ಪರ್ಸೈನ್ ಪಂಚಾಯತ್ನ ಲಾಲ್ಬಂದಿ-ಜಾಂಕಿ ನಗರ್ ಬಾರ್ಡರ್ನಲ್ಲಿ ಗುಂಡಿನ ಹಾರಾಟ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಗಾಯಾಳು ವ್ಯಕ್ತಿಯೊಬ್ಬನನ್ನು ನೇಪಾಳ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಜಿತೇಂದ್ರ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ

ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ Read More »

ಕರಾವಳಿ
Scroll to Top