Mangalore

ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ದ.ಕ ಜಿಲ್ಲೆಯಲ್ಲಿ ಎಡೆ ಬಿಡದೆ ಬೀಳುತ್ತಿರುವ ಭಾರೀ ಗಾಳಿ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರವಾಗಿ ಶಾಲೆ ರಜೆ ನೀಡುತ್ತಿದ್ದು, ಇದೀಗ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿದ್ಯಾರ್ಥಿಯೋರ್ವ ತನ್ನ ಕಚೇರಿಯೊಂದರಲ್ಲಿ ದ.ಕ ಜಿಲ್ಲಾಧಿಕಾರಿಯ ಫೋಟೋಗಳನ್ನು ಅಂಟಿಸಿ ಕೂತಿದ್ದು, ಆತನ ಬಳಿ ಇನ್ನೋರ್ವ ಬಂದು ಇದು ಯಾರ ಫೋಟೋ ಇಷ್ಟೋಂದು ಅಂಟಿಸಿದ್ದೀಯಾ ಎಂದು […]

ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ – ವಿಡಿಯೋ ವೈರಲ್ Read More »

ಕರಾವಳಿ

ಚಾಕು ತೋರಿಸಿ ಸುಲಿಗೆ ಪ್ರಕರಣ – 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಸುಲಿಗೆ ಪ್ರಕರಣಕ್ಕೆ ಸಂಬಂದಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉಳ್ಳಾಲ ನಿವಾಸಿ ಆರೋಪಿ ಬಶೀರ್ ಎಂದು ಗುರುತಿಸಲಾಗಿದೆ. 2000ರಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹುಸೇನ್ @ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ

ಚಾಕು ತೋರಿಸಿ ಸುಲಿಗೆ ಪ್ರಕರಣ – 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಹಾಕಿದ ವ್ಯಕ್ತಿ – ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಪೂರ್ವ ದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿ ಡಾಬರ್ ಮ್ಯಾನ್ ಸಾಕುವ ನಾಯಿಯನ್ನು ವಿಷ ಹಾಕಿ ಕೊಂದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತಾಗಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ ಕ್ರಾಸ್ನಲ್ಲಿದ್ದ ವ್ಯಕ್ತಿಯೊಬ್ಬರ 2ವರ್ಷದ ಡಾಬರ್ ನಾಯಿ ಸಾಕುತ್ತಿದ್ದರು. ನೆರೆಯನೆಯ ಭೀಮಯ್ಯ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಪದಾರ್ಥ ಹಾಕಿದ್ದಾರೆ ಎಂದು ತಿಳಿಸಲಾಗಿದೆ.

ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಹಾಕಿದ ವ್ಯಕ್ತಿ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.27. ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿದ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಈ ಹಳ್ಳಕ್ಕೆ ಪ್ರತಿ ದಿನ ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಕಡಬ, ಜು.27. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಪ್ರತಿಷ್ಠಿತ ಕರ್ನಾಟಕ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿಗೆ ಕಡಬದ ಶ್ರೇಯಾ ಸಿ. ಪಿ ಯವರು ಭಾಜರಾಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ 6ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಟ್ರಸ್ಟಿನ ವತಿಯಿಂದ ಬೆಂಗಳೂರಿನ ಬಾಗಲಗುಂಟೆಯಲ್ಲಿ ಜು.23 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಕಡಬದ ವಿದ್ಯಾನಗರದ ದಿ. ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ ಪುತ್ರಿಯಾದ ಶ್ರೇಯಾ ಸಿ. ಪಿ ಯವರು

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ Read More »

ಕರಾವಳಿ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದ್ದು, ಕುಳಾಯಿಯ ಪೃಥ್ವಿರಾಜ್‌ (33) ಶಿಕ್ಷೆಗೊಳಗಾದವ ಎಂದು ತಿಳಿದುಬಂದಿದೆ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದ್ದು, ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಗಣೇಶ್ ಪುತ್ತೂರು

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದುಬಂದಿದೆ. ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ಕುಕ್ಕುಂಜೆಯಿಂದ ಅಳಂಬ, ಬರೆಂಬಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಕುಸಿದಿದೆ ಎನ್ನಲಾಗಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚಾರ ಮಾಡುತ್ತಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು Read More »

ಕರಾವಳಿ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು

(ನ್ಯೂಸ್ ಕಡಬ)newskadaba.com ಪುತ್ತೂರು,ಜು.26. ಉಪ್ಪಿನಂಗಡಿ ಭಾಗದ ವಿದ್ಯುತ್ ಸುಧಾರಣೆಗೆ ರೂಪಿಸಿರುವ 34 ನೆಕ್ಕಿಲಾಡಿ ಗ್ರಾಮದ ಕರುವೇಲುವಿನಲ್ಲಿ 110 ಕೆ.ವಿ ಉಪಕೇಂದ್ರ ಸ್ಥಾಪನೆಗೆ ಯೋಜನೆ ರೂಪಿಸಿದೆ. ಇದರ ಅನುಮೋದನೆ ನೀಡುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಜಮೀನಿಗೆ ಹಣ ಪಾವತಿಯಾಗಿ ಜಿಲ್ಲಾಧಿಕಾರಿಯಿಂದ ಮಂಜೂರಾತಿ ಕ್ರಮವು ದೊರಕಿದೆ ಎನ್ನಲಾಗಿದೆ. 40 ವರ್ಷಗಳ ಬಳಿಕ ಪುತ್ತೂರು ತಾಲೂಕಿಗೆ 2ನೇ 110 ಕೆವಿ ಉಪಕೇಂದ್ರ ಮಂಜೂರು ಆಗಿದ್ದು, ಕಳೆದ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು Read More »

ಕರಾವಳಿ
Scroll to Top