Mangalore

ಮಳೆಗೆ ಧ್ವಂಸಗೊಂಡ ಮನೆ – ಅದೃಷ್ಟವಶಾತ್ ಯಜಮಾನಿ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com  ಬೆಟ್ಟಂಪಾಡಿ, ಜು.25. ನಿರಂತರ ಸುರಿಯುತ್ತಿರುವ ಮಳೆಗೆ ಇಲ್ಲಿನ ಇರ್ದೆ ಅರಂಬ್ಯ ಸುಶೀಲ ಎಂಬವರ ಮನೆ ಬಿದ್ದು ಸಂಪೂರ್ಣ ಧ್ವಂಸಗೊಂಡಿರುವ ಘಟನೆ ಸಂಭವಿಸಿದೆ. ಹಂಚಿನ ಛಾವಣಿ ಸಂಪೂರ್ಣ ಕುಸಿದು, ಇಟ್ಟಿಗೆ ಗೋಡೆ ಹಾನಿಗೊಳಗಾಗಿದೆ. ಮನೆ ಬೀಳುವ ವೇಳೆಗೆ ಸುಶೀಲರವರು ಮಗಳ ಹೋಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಟ್ಟಂಪಾಡಿ ಪಂಚಾಯತ್ ಪಿಡಿಒ ಸೌಮ್ಯ, ಸಿಬ್ಬಂದಿ ಸಂದೀಪ್. ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.  

ಮಳೆಗೆ ಧ್ವಂಸಗೊಂಡ ಮನೆ – ಅದೃಷ್ಟವಶಾತ್ ಯಜಮಾನಿ ಅಪಾಯದಿಂದ ಪಾರು Read More »

ಕರಾವಳಿ

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ.

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ Read More »

ಕರಾವಳಿ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿದೆ ಎನ್ನಲಾಗಿದೆ. ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿ ತಿಳಿಸಿದೆ.

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ Read More »

ಕರಾವಳಿ

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಜು.25. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿ, ತಪ್ಪಿತಸ್ಥ ಬಸ್ ಚಾಲಕನ ವಿರುದ್ಧ ದಕ್ಷಿಣ ಟ್ರಾಫಿಕ್ ಠಾಣೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಅಲ್ಲದೆ ಚಾಲಕನ ಡಿಎಲ್ ಅನ್ನು ರದ್ದುಗೊಳಿಸುವಂತೆ ಆರ್ ಟಿಒಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ

(ನ್ಯೂಸ್ ಕಡಬ)newskadaba.com ಕಡಬ, ಜು.25. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ಯಾರಂಟಿ ಯೋಜನೆಗೆ ಉಚಿತವಾಗಿ ನೋಂದಣಿಗೆ ಸರಕಾರ ಆದೇಶ ನೀಡಿರುವುದರಿಂದ ಗ್ರಾಮ ಒನ್ ಕೇಂದ್ರಗಳು ಸಂಕಷ್ಟಕ್ಕೆ ಒಳಗಾಗಿದೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕಡಬ ತಾಲೂಕಿನ ಗ್ರಾಮ ಒನ್ ಫ್ರಾಂಚೈಸಿನ ನಿರ್ವಾಹಕರು ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಡಬ ತಾಲೂಕಿನ ಸುಮಾರು 20 ಗ್ರಾಮ ಒನ್ ಫ್ರಾಂಚೈಸಿ ನಿರ್ವಾಹಕರು ಮನವಿ ನೀಡಿದ್ದು, ನಾವು ಒಂದು ವರುಷದ ಹಿಂದೆ ಗ್ರಾಮ ಒನ್ ಕೇಂದ್ರಗಳನ್ನು ಬಂಡವಾಳ ಹೂಡಿಕೆ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ Read More »

ಕರಾವಳಿ

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ ಗೆ ಕರೆ ಮಾಡಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆಗ ಅಪರಿಚಿತ ವ್ಯಕ್ತಿಯೋರ್ವ ಬಂದು 10 ರೂ. ನೋಟನ್ನು ಅವರ ಕಾರಿನ ಎಡಭಾಗದಲ್ಲಿ ಹಾಕಿ ನಿಮ್ಮ ಹಣ ಬಿದ್ದಿದೆ ಎಂದು ಹೇಳಿದ್ದು, ಮಹಿಳೆ ಅದನ್ನು ಹೆಕ್ಕುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಕಾರಿನ ಬಲಬದಿಯಲ್ಲಿಯೂ ನೋಟು

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

‘ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌‌ಗಳಿಗೆ ಡಿಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಕಡಬ, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.  

‘ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌‌ಗಳಿಗೆ ಡಿಸಿ ಆದೇಶ Read More »

ಕರಾವಳಿ

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ)newskadaba.com ಕಡಬ, ಜು.24. ಕಳೆದ ಎರಡು ದಿನಗಳಿಂದ ಎಲ್ಲೆಡೆ ವಿಪರೀತ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಳವಾಗುತ್ತಲೇ ಇದ್ದು, ನೇತ್ರಾವತಿ ಸೇರಿದಂತೆ ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಆತಂಕದ ಸ್ಥಿತಿ ವ್ಯಕ್ತವಾಗಿದೆ. ಇನ್ನೂ ಅತೀ ಹೆಚ್ಚಿನ ಮಳೆ ಆದರೆ, ತೊಂದರೆ ಆಗುವ ಸಾಧ್ಯತೆಗಳ ಪ್ರಮಾಣ ಹೆಚ್ಚಿದೆ ಎನ್ನಲಾಗಿದೆ.

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ
Scroll to Top