Mangalore

ನೂಜಿಬೈಲ್: ನಾಗರ ಪಂಚಮಿ, ನಾಗ ತಂಬಿಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನಾಗಬನದಲ್ಲಿ ಸೋಮವಾರ ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ನಡೆಯಿತು. ದೈವಸ್ಥಾನದ ಬಳಿಯಲ್ಲಿರುವ ನಾಗಬನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ, ಸೀಯಾಳಭಿಷೇಕ ನಡೆದು, ಬಳಿಕ ನಾಗತಂಬಿಲ ಸೇವೆ ನಡೆಯಿತು. ಬಳಿಕ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಅರ್ಚಕರಾದ ಕೃಷ್ಣ ಹೆಬ್ಬಾರ್ ಹಾಗೂ ರವಿ ಹೆಬ್ಬಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ […]

ನೂಜಿಬೈಲ್: ನಾಗರ ಪಂಚಮಿ, ನಾಗ ತಂಬಿಲ Read More »

ಕರಾವಳಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.2019-20ನೇ ಸಾಲಿನ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಕುರಿತು ಕೇಂದ್ರೀಯ ಸೈನಿಕ ಬೋರ್ಡಿನಿಂದ ಚಾಲನೆ ನೀಡಲಾಗಿದೆ. ಅರ್ಹ ಮಾಜಿ ಸೈನಿಕರ ಮಕ್ಕಳು ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ವಬ್‍ಸೈಟ್ www.ksb.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಂಟಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದಕ್ಷಿಣ ಕನ್ನಡ ಇವರ ವತಿಯಿಂದ ಭಾನುವಾರ ನಗರದ ವೆನ್ಲಾಕ್ ಆಸ್ಪತ್ರೆಯ ಡಾ. ವಿವೇಕಾನಂದ ಪ್ರಭು ಸಭಾಂಗಣದಲ್ಲಿ ಆಯುಷ್ ಪದವೀಧರ ನೋಂದಾಯಿತ ವೈದ್ಯರಿಗಾಗಿ ಡೆಂಗಿ ರೋಗ ನಿಯಂತ್ರಣ ಮತ್ತು ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಮಾತನಾಡಿ, ವೈದ್ಯರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ಡೆಂಗಿ ರೋಗಜನರಲ್ಲಿ ಹೆಚ್ಚಿನ ಆತಂಕ

ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಮಕ್ಕಳ ಸೇವೆ: ಪ್ರಶಸ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕರ್ನಾಟಕ ಸರ್ಕಾರವು ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡಲಾಗುತ್ತದೆ.ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು ಕನ್ನಡ ಭಾಷೆಯಲ್ಲಿ ದ್ವಿ-ಪ್ರತಿಯೊಂದಿಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಮಕ್ಕಳ ಸೇವೆ: ಪ್ರಶಸ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯ ಸರಕಾರಿ ನೌಕರರ ಸಂಘ ➤ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕರ್ನಾಟಕ ರಾಜ್ಯ ಸರಕಾರಿ ನೌಕರರ (ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಶನಿವಾರ ಸಂಘದ ಸಭಾಂಗಣದಲ್ಲಿ ಅಧ್ಯಕ್ಷ/ಖಜಾ0ಚಿ/ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ 2019-2024ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅವರು ಆಯ್ಕೆಯಾಗಿದ್ದಾರೆ.ಖಜಾ0ಚಿಯಾಗಿ ಪಶುಸ0ಗೋಪನಾ ಇಲಾಖೆಯ ಅಕ್ಷಯ್ ಭ0ಡಾರ್‍ಕಾರ್ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ಶಿಕ್ಷಣ ಇಲಾಖೆಯ ಶೆರ್ಲಿ ಸುಮಾಲಿನಿ ಅವರು ಆಯ್ಕೆಗೊ0ಡಿದ್ದಾರೆ .

ರಾಜ್ಯ ಸರಕಾರಿ ನೌಕರರ ಸಂಘ ➤ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆ Read More »

ಕರಾವಳಿ

ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಮಂಗಳೂರು ನಗರದಲ್ಲಿ ಹಲವಾರು ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳು ಕೆಲವು ಖಾಸಗೀ ಜಾಗದ ತಕರಾರಿನಿಂದ ಅಪೂರ್ಣಗೊಂಡಿದ್ದು, ಕೂಡಲೇ ಸಮಸ್ಯೆ ಬಗೆಹರಿಸಿ ಇಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ದೇಶಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅಂತರ್ ಇಲಾಖಾ ಕ್ರಿಯಾಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರದ ಭವಿಷ್ಯದ ದೃಷ್ಠಿಯಿಂದ ಪ್ರಮುಖ ರಸ್ತೆಗಳ ಅಗಲೀಕರಣವಾಗಬೇಕಾಗಿದೆ. ನಗರದಲ್ಲಿ ಹಲವು ಪ್ರಮುಖ ರಸ್ತೆಗಳ ಅಗಲೀಕರಣ, ಫುಟ್ ಪಾತ್

ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಭಾರತೀಯ ರೆಡ್ಕ್ರಾಸ್ ವತಿಯಿಂದ ➤ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ ಹಾಗೂ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಭಾರತೀಯ ರೆಡ್‍ಕ್ರಾಸ್ ವತಿಯಿಂದ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆ ಪ್ರಯುಕ್ತ ಇಂದು  ಅಪರಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣ, 2ನೇ ಮಹಡಿಯಲ್ಲಿ ಮಂಗಳೂರು ನಗರದ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಪತ್ರಕರ್ತರು ಆಗಮಿಸಲು ಕೋರಲಾಗಿದೆ.

ಭಾರತೀಯ ರೆಡ್ಕ್ರಾಸ್ ವತಿಯಿಂದ ➤ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ ಹಾಗೂ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಮರ್ದಾಳ ಐತ್ತೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ , ಆಗಸ್ಟ್.5.ಮರ್ದಾಳ, 102 ನೆಕ್ಕಿಲಾಡಿ, ಐತ್ತೂರು, ಕೊಣಾಜೆ, ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ಆ. 3ರಂದು ನಡೆಯಿತು. ಸುಳ್ಯ ಶಾಸಕ ಎಸ್ ಅಂಗಾರ ಅಭಿಯಾನಕ್ಕೆ ಚಾಲನೆ ನೀಡಿ ಬಿಜೆಪಿ ತತ್ವ ಸಿದ್ದಾಂತದ ಬಗ್ಗೆ ವಿವರಿಸಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದರು. ಜಿಲ್ಲಾ ಶಕ್ತಿ ಕೇಂದ್ರದ ಸದಸ್ಯರಾದ ಕೃಷ್ಣಶೆಟ್ಟಿ ಕಡಬ, ಕಡಬ ತಾಲೂಕು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ, ಮರ್ದಾಳ ಬಿಜೆಪಿ ವಲಯ ಪ್ರಮುಖ್ ಉಮೇಶ್‍ಶೆಟ್ಟಿ ಸಾಯಿರಾಂ, ಮರ್ದಾಳ

ಮರ್ದಾಳ ಐತ್ತೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ Read More »

ಕರಾವಳಿ

ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.5.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕಡ್ಯ ವಾಸುದೇವ ಭಟ್‍ರವರ ಮನೆಯಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ ಹಣ್ಣು-ಹಂಪಲುಗಳ ಮಾಹಿತಿ ಕಾರ್ಯಗಾರ ಇತ್ತೀಚೆಗೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್ ರವರ ನೇತೃತ್ವದಲ್ಲಿ ನಡೆದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ, ಕಡ್ಯ ವಾಸುದೇವ ಭಟ್‍ರವರು ತಮ್ಮ ತೋಟದಲ್ಲಿ ಬೆಳೆದಿರುವ ಹಲವು ಬಗೆಯ ಹಣ್ಣುಗಳನ್ನು ಬೆಳೆಸುವ ಹಾಗೂ ಅವುಗಳ ಬೆಳವಣಿಗೆಯ ಕುರಿತು ಹಾಗೂ ವೀಣಾ ಭಟ್‍ರವರು

ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಯಲ್ಲಿ ಡೆಂಗ್ಯು ರೋಗದ ಕುರಿತು ➤ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.5.ಇಲ್ಲಿನ ಪದವಿ ಹಾಗೂ ಬಿ.ಎಡ್. ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಜಾಗೃತಿ ಕಾರ್ಯಗಾರದಲ್ಲಿ ಇಲ್ಲಿನ ಬಿ.ಎಡ್. ಕಾಲೇಜಿನ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ರಾಜೇಶ್ ಉಪಧ್ಯಾಯ ಎಮ್. ಎನ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಡೆಂಗ್ಯು ರೋಗದ ಲಕ್ಷಣ, ಹರಡುವ ರೀತಿ, ಮತ್ತು ತಡೆಗಟ್ಟುವ ಸರಳ ವಿಧಾನಗಳನ್ನು ಕುರಿತಂತೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಉಷಾ ಎಂ.ಎಲ್ ಅವರು ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕುಂತೂರು: ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಯಲ್ಲಿ ಡೆಂಗ್ಯು ರೋಗದ ಕುರಿತು ➤ ಮಾಹಿತಿ ಕಾರ್ಯಗಾರ Read More »

ಕರಾವಳಿ
Scroll to Top