Mangalore

ಮನೆಯ ವಿದ್ಯುತ್ ಖರ್ಚನ್ನು ಆದಷ್ಟು ಕಡಿಮೆಗೊಳಿಸಲು ➤ ಇಲ್ಲಿದೆ ಸುಲಭ ಉಪಾಯ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.3.ಮನೆಯ ವಿದ್ಯುತ್‌ ಖರ್ಚನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಅಗತ್ಯ. ಮಾತ್ರವಲ್ಲ ದಿನೇ ದಿನೇ ವಿದ್ಯುತ್‌ ಬೇಡಿಕೆ ಹೆಚ್ಚುತ್ತಿರುವುದರಿಂದ ನಾವು ಕೂಡಾ ಒಂದಷ್ಟು ಉಳಿತಾಯ ಮಾಡುವತ್ತ ಗಮನಹರಿಸುವುದು ಉತ್ತಮ. ನಾವು ಮನಸ್ಸು ಮಾಡಿದರೆ ಈ ಕೆಲಸ ಕಷ್ಟವೇನಲ್ಲ. ಅದಕ್ಕಾಗಿ ಕೆಲವೊಂದು ಸುಲಭ ಹಾಗೂ ಸರಳ ವಿಧಾನಗಳನ್ನು ಅನುಸರಿಸಿದರೆ ಸಾಕು.ವಿದ್ಯುತ್‌ ಖರ್ಚನ್ನು ಉಳಿಸುವ ಅತ್ಯುತ್ತಮ ಮಾರ್ಗ ಎಂದರೆ ಮನೆಗೆ ಸೋಲಾರ್‌ ಅಳವಡಿಸುವುದು. ಆರಂಭದಲ್ಲಿ ಅಳವಡಿಕೆ ಖರ್ಚು ಬಿಟ್ಟರೆ ಮತ್ತೆ ಹೆಚ್ಚಿನ ವೆಚ್ಚ ಮಾಡಬೇಕಾಗಿಲ್ಲ ಎನ್ನುವುದೇ […]

ಮನೆಯ ವಿದ್ಯುತ್ ಖರ್ಚನ್ನು ಆದಷ್ಟು ಕಡಿಮೆಗೊಳಿಸಲು ➤ ಇಲ್ಲಿದೆ ಸುಲಭ ಉಪಾಯ Read More »

ಕರಾವಳಿ

ಬಲ್ಗೇರಿಯದ ಸೋಫಿಯಾ: ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ➤ಭಾರತದ ಕುಸ್ತಿ ಪಟು ಸೋನಂ ಮಲಿಕ್ ಗೆ ಚಿನ್ನ

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.3.ಹರ್ಯಾಣದ ಸೋನೆಪಟ್‌ನ ಪುಟ್ಟ ಗ್ರಾಮ ಮದಿನಾದಿಂದ ಬಂದಿರುವ ಭಾರತದ ಸೋನಂ ಮಲಿಕ್‌ ಅವರು ಬಲ್ಗೇರಿಯದ ಸೋಫಿಯಾದಲ್ಲಿ ಸಾಗುತ್ತಿರುವ ವಿಶ್ವ ಕೆಡೆಟ್‌ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು. ಪ್ರಚಂಡ ನಿರ್ವಹಣೆ ನೀಡಿ ಸತತ ಎರಡನೇ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.65 ಕೆ.ಜಿ. ವಿಭಾಗ ದಲ್ಲಿ ಚೀನದ ಬಿನ್‌ಬಿನ್‌ ಕ್ಸಿಯಾಂಗ್‌ ಅವರನ್ನು 7-1 ಅಂತರದಿಂದ ಸುಲಭವಾಗಿ ಮಣಿಸಿ ಚಿನ್ನ ಗೆದ್ದರು. ಸೋನಂ ಕಳೆದ ವರ್ಷವೂ ಈ ಕೂಟದಲ್ಲಿ ಚಿನ್ನ ಜಯಿಸಿದ್ದರು.  

ಬಲ್ಗೇರಿಯದ ಸೋಫಿಯಾ: ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ➤ಭಾರತದ ಕುಸ್ತಿ ಪಟು ಸೋನಂ ಮಲಿಕ್ ಗೆ ಚಿನ್ನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಲಶೇಖರದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೂಡುಪೆರಾರಿನ ಅರಿಕೆಪದವು ನಿವಾಸಿ (47) ಮಹಾಬಲ ಗೌಡ ಎಂಬವರು ಕುಲಶೇಖರ ಡೈರಿ ಸಮೀಪ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ವೇಳೆ ಕಟ್ಟಡದ 2ನೇ ಮಹಡಿಯಲ್ಲಿ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ 1ನೇ ಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳದಲ್ಲಿದ್ದ ಕಾರ್ಮಿಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು

ಕುಲಶೇಖರದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »

ಕರಾವಳಿ

ಮರ್ದಾಳ: ಜೆ.ಸಿ.ಐ ವೃತ್ತಕ್ಕೆ ರಿಪ್ಲೆಕ್ಟರ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.3. ಮರ್ದಾಳ ಆ.02. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಜಂಕ್ಷನ್‍ನಲ್ಲಿ ಜೆ.ಸಿ.ಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಮರ್ದಾಳ ಗ್ರಾ.ಪಂ. ಸಹಕಾರದೊಂದಿಗೆ ನಿರ್ಮಿಸಲಾಗಿದ್ದ ಜೇಸಿ ವೃತ್ತಕ್ಕೆ ಆ.2 ರಂದು ಪಿಡಬ್ಲೂಡಿ ಇಲಾಖೆಯಿಂದ ರಿಫ್ಲೆಕ್ಟರ್ ಅಳವಡಿಸಲಾಯಿತು. ಧರ್ಮಸ್ಥಳದಿಂದ ಹಾಗೂ ಉಪ್ಪಿನಂಗಡಿ, ಕಡಬ ಕಡೆಯಿಂದ ಬರುತ್ತಿರುವ ವಾಹನಗಳಿಗೆ ರಾತ್ರಿ ಹೊತ್ತಲ್ಲಿ ಸರ್ಕಲ್ (ವೃತ್ತ) ಗಮನಕ್ಕೆ ಬಾರದೆ ಅಪಘಾತಗಳು ಸಂಭವಿಸುವ ಬಗ್ಗೆ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ನಾಗರಾಜ್

ಮರ್ದಾಳ: ಜೆ.ಸಿ.ಐ ವೃತ್ತಕ್ಕೆ ರಿಪ್ಲೆಕ್ಟರ್ ಅಳವಡಿಕೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು➤ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಸದ್ಭಳಕೆ -ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.3.ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಸದ್ಭಳಕೆ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ಇಂದು ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾದ ಕಾರ್ಯದರ್ಶಿ ರಾಧಕೃಷ್ಣ ಕುವೆಚ್ಚಾರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಪೊಲೀಸ್ ಉಪಅಧಿಕ್ಷಕ ದಿನಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಶ್ವನಾಥ ಪೆರ್ಲ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು➤ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಸದ್ಭಳಕೆ -ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲಿ ➤ ಸರಸ್ವತೀ ವಿದ್ಯಾಲಯದ ತಂಡ ಪ್ರಾಂತ ಮಟ್ಟಕ್ಕೆ ಆಯ್ಕೆ..

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಸ್ವತೀ ವಿದ್ಯಾಲಯ ಕಡಬ ಇದರ 17ರ ವಯೋಮಾನದ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಾಂತ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮುಂಡಾಜೆ ಪದವಿಪೂರ್ವ ಕಾಲೇಜು, ಮುಂಡಾಜೆಯಲ್ಲಿ ನಡೆಯಲಿರುವ ಪ್ರಾಂತ ಮಟ್ಟಕ್ಕೆ ಆಯ್ಕೆಗೊಂಡಿತು. ದೈಹಿಕ ಶಿಕ್ಷಕರಾದ ಲಕ್ಷ್ಮೀಶ ಗೌಡ, ಸ್ಥಳೀಯ ಕಬಡ್ಡಿ ತರಬೇತುದಾರ ಶೇಖರ ಪೂಜಾರಿ, ಶಿಕ್ಷಕರಾದ ಶಿವಪ್ರಸಾದ್ ಮತ್ತು ನಾಗೇಶ್ ಕ್ರೀಡಾಪಟುಗಳಿಗೆ ತರಬೇತಿ ನೀಡಿರುತ್ತಾರೆ. ಸಂಸ್ಥೆಯ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲಿ ➤ ಸರಸ್ವತೀ ವಿದ್ಯಾಲಯದ ತಂಡ ಪ್ರಾಂತ ಮಟ್ಟಕ್ಕೆ ಆಯ್ಕೆ.. Read More »

ಕರಾವಳಿ

ಆ.೪ರಿಂದ ಆ.೧೪ : ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ

(ನ್ಯೂಸ್ ಕಡಬ) newskadaba.com ಪುತ್ತೂರು, ಆಗಸ್ಟ್.3.ರಾಜ್ಯ ಪ್ರಶಸ್ತಿ ಪುರಸ್ಕೃತ  ಸವಣೂರು ಯುವಕ ಮಂಡಲದ ವತಿಯಿಂದ  ಲಯನ್ಸ್ ಕ್ಲಬ್ ಪುತ್ತೂರು,ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಸಹಯೋಗದೊಂದಿಗೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತವೃಂದದ ಸಹಕಾರದಲ್ಲಿ  ಶ್ರವಣರಂಗ ಪ್ರತಿಷ್ಠಾನ ಸವಣೂರು ಪ್ರಸ್ತುತ ಪಡಿಸುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ಆ.೪ ರಿಂದ ಆ.೧೦ರವರೆಗೆ ನಡೆಯಲಿದೆ. ಧರ್ಮ ಜಾಗೃತಿಯನ್ನು ಮಾಡುವ ಮೂಲ ಉದ್ದೇಶ ಮತ್ತು ಯುವ ಪಿಳಿಗೆಗೆ ಧಾರ್ಮಿಕವಾದ ಚಿಂತನೆ, ಪುರಾಣಗಳ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಯಕ್ಷಗಾನ

ಆ.೪ರಿಂದ ಆ.೧೪ : ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ Read More »

ಕರಾವಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ➤ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3. ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಆಗಸ್ಟ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಆಗಸ್ಟ್ 9 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಆಗಸ್ಟ್ 13 ರಂದು ಪೂರ್ವಾಹ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಆಗಸ್ಟ್ 16 ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ತಾಲೂಕು ಆಸ್ಪತ್ರೆ ಬಂಟ್ವಾಳ, ಆಗಸ್ಟ್ 17 ಸರಕಾರಿ ಆಸ್ಪತ್ರೆ ಪುತ್ತೂರು, ಆಗಸ್ಟ್ 20 ತಾಲೂಕು ಆರೋಗ್ಯ ಕೇಂದ್ರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ➤ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ತುಳು ಭಾಷೆಯನ್ನು ಭಾಷಾ ಪಠ್ಯವಾಗಿ ಈಗಾಗಲೇ ಕಲಿಸಲಾಗುತ್ತಿದ್ದು, ಈ ವರ್ಷದಿಂದ ಪದವಿಯಲ್ಲಿಯೂ ತುಳುವನ್ನು ಭಾಷೆಯಾಗಿ ಕಲಿಸಲು ಆರಂಭಿಸಲಾಗಿದೆ. ಮಂಗಳೂರು ವಿ.ವಿ.ಯ ಈ ಪ್ರಯತ್ನ ಸ್ವಾಗತಾರ್ಹ ವಿಚಾರ ಎಂದು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಎ.ಸಿ.ಭಂಡಾರಿ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರುಭವನದಲ್ಲಿ ನಡೆದ ರಥಬೀದಿಯ ಡಾ.ಪಿ.ದಯಾನಂದ ಪೈ.ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತುಳು ಭಾಷಾ ತರಗತಿಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ Read More »

ಕರಾವಳಿ

50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಆಗಸ್ಟ್ ಮಾಹೆಯ ಆಗಸ್ಟ್ 1 ರಿಂದ 31 ರವರೆಗೆ ಶೇಕಡ 50% ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಆನ್ ಲೈನ್ ಮೂಲಕವೂ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ವೆಬ್‍ಸೈಟ್(www.kuvempubhashabharati.org) ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ರಾಜೇಶ್.ಜಿ. ಇವರು ಪ್ರಕಟಣೆ ತಿಳಿಸಿದೆ.

50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ Read More »

ಕರಾವಳಿ
Scroll to Top