Mangalore

ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಪ್ಟೆಂಬರ್ 5 ರೊಳಗೆ ಅರ್ಜಿಯನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು 575002 ಇವರಿಗೆ ತಲುಪುವಂತೆ ಕಳುಹಿಸಬೇಕು. 60% ಗಿಂತ ಅಧಿಕ ಅಂಕಗಳನ್ನು (2018-19) ಗಳಿಸಿದ್ದ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ […]

ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಜುಲೈ 2 ರಂದು ನಡೆದ ಸಭೆಯ ನಡವಳಿಯಲ್ಲಿ ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶವಿದೆ. ಹಾಗೂ  2019 ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದ್ದು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ

ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ Read More »

ಕರಾವಳಿ

ಕೊಣಾಜೆ: ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರಿಯಾಂಕ ( ಪ್ರಾಯ 28 ವರ್ಷ) ಎಂಬವರು ಜುಲೈ 5 ರಂದು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಹೆಂಗಸಿನ ಚಹರೆ ಇಂತಿವೆ : ಎತ್ತರ 5.1 ಅಡಿ, ಗಂಡ ಬಾಬು, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಕೆಂಪು ಬಣ್ಣದ ಟಾಪ್ ಮತ್ತು ಪ್ಯಾಂಟ್ ಹಾಗೂ ಶಾಲ್, ತಿಳಿದಿರುವ ಭಾಷೆ ಹಿಂದಿ, ಒರಿಸ್ಸಾ.ಈ ಚಹರೆಯುಳ್ಳ ಹೆಂಗಸಿನ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರು ಮಂಗಳೂರು

ಕೊಣಾಜೆ: ಮಹಿಳೆ ನಾಪತ್ತೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಮಂಗಳೂರು ನಗರದ ಬಿಜೈ ನಿವಾಸಿ ಸಂದೀಪ್ ಪೌಲ್ (ಪ್ರಾಯ 38 ವರ್ಷ) ಎಂಬವರು ಏಪ್ರಿಲ್ 18 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ : ಎತ್ತರ 5 ಅಡಿ, ಜಾತಿ ಕ್ರಿಶ್ಚಿಯನ್, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಪ್ಯಾಂಟ್ ಮತ್ತು ಟೀ ಶರ್ಟ್, ತಿಳಿದಿರುವ ಭಾಷೆ ಮಲೆಯಾಳಿ, ಇಂಗ್ಲೀಷ್, ಕನ್ನಡ. ಈ ಚಹರೆಯುಳ್ಳ ವ್ಯಕ್ತಿಯ ಪತ್ತೆಯಾದಲ್ಲಿ ಪೊಲೀಸ್

ಕಾಣೆಯಾಗಿದ್ದಾರೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಆಶಿಕಾ (ಪ್ರಾಯ 22 ವರ್ಷ) ಎಂಬವರು ಜುಲೈ 16 ರಂದು ಕಂಕನಾಡಿ ಬಳಿಯಲ್ಲಿರುವ ಬ್ರಿಲ್ಲಿಯಂಟ್ ಲಾಡ್ಜಿಂಗ್ ಹೌಸ್ ಎಂಬ ಪಿ.ಜಿಯಿಂದ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ : ಎಣ್ಣೆ ಕಪ್ಪು ಮೈ ಬಣ್ಣ, ಎತ್ತರ 4.5 ಅಡಿ, ತೆಳ್ಳನೆ ಶರೀರ, ತಿಳಿದಿರುವ ಭಾಷೆ ಕನ್ನಡ, ಇಂಗ್ಲಿಷ್, ತುಳು, ಬ್ಯಾರಿ, ಮಲಯಾಳಂ ಮಾತಾನಾಡುತ್ತಾರೆ. ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ. ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ 8 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ ಕುಳಾಯಿ ಮಹಿಳಾ ಮಂಡಳಿಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ.ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು

ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ಕತಾರ್ : ಕಂಪ್ರೆಶರ್ ಸಿಡಿದು ಮೃತಪಟ್ಟ ದ.ಕ ಮೂಲದ ಸಂದೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಮೂಲದ ಯುವಕ ಸಂದೇಶ್ ಶೆಟ್ಟಿ (30) ಕಂಪ್ರೆಶರ್ ಸಿಡಿದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಪುಂಜಾಲಕಟ್ಟೆ ಸಮೀಪದ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಪುರಿಯ ನಿವಾಸಿ ಗಣೇಶ್ ಶೆಟ್ಟಿ – ವಾರಿಜಾ ಶೆಟ್ಟಿ ದಂಪತಿ ಕೊನೆಯ ಪುತ್ರ ಸಂದೇಶ್ ಉದ್ಯೋಗ ನಿಮಿತ್ತ ಕತಾರ್ ನಲ್ಲಿದ್ದರು. ಸಂದೇಶ್ ಅವರ ಅಜ್ಜಿ ಮನೆ (ತಾಯಿಯ ಮನೆ) ಪುರಿಯಲ್ಲಿದ್ದು, ಪುಂಜಾಲಕಟ್ಟೆಯಲ್ಲಿ ಶಿಕ್ಷಣ ಪಡೆದಿದ್ದರು. ಸಂದೇಶ್

ಕತಾರ್ : ಕಂಪ್ರೆಶರ್ ಸಿಡಿದು ಮೃತಪಟ್ಟ ದ.ಕ ಮೂಲದ ಸಂದೇಶ್ Read More »

ಕರಾವಳಿ

ಕಡಿಮೆ ವೇತನವನ್ನು ವಿರೋಧಿಸಿ ಗಾರ್ಮೆಂಟ್ಸ್ ನೌಕರರ ಮುಷ್ಕರ

(ನ್ಯೂಸ್ ಕಡಬ) newskadaba.com ಹಾಸನ, ಜು.24.ಹಾಸನದ ಹಿಮತ್ ಸಿಂಕಾ ಗಾರ್ಮೆಂಟ್ಸ್ ನೌಕರರು ಕಡಿಮೆ ವೇತನ ನೀಡುತ್ತಿರುವುದಾಗಿ ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಘಟನೆ ಹಾಸನದಲ್ಲಿ  ನಡೆದಿದೆ. ತಮಗೆ ಕೊಡಬೇಕಾಗಿರುವ ಬಾಕಿ ಹಣ ಪಾವತಿ ಮಾಡುವಂತೆ ನೌಕರರು ಒತ್ತಾಯಿಸಿದ್ದು, ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಎಲ್ಲಾ ಬೇರೆ ರಾಜ್ಯಗಳ ಜನರೇ ತುಂಬಿಕೊಂಡಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಪ್ರತಿಭಟನಾ ನಿರತ ನೌಕರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ ಪರಿಣಾಮ ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿಚಾರ್ಜ್ ನಡೆಸಿದ್ದು, ಇದರಿಂದ

ಕಡಿಮೆ ವೇತನವನ್ನು ವಿರೋಧಿಸಿ ಗಾರ್ಮೆಂಟ್ಸ್ ನೌಕರರ ಮುಷ್ಕರ Read More »

ಕರ್ನಾಟಕ

ಜಿಲ್ಲಾ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ರೈತರಿಗೆ ಸಲಹೆ ಹಾಗೂ ➤ ಶ್ರೇಷ್ಟ ಕೃಷಿಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.2019-20ನೇ ಸಾಲಿನಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಬಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೇಕ್ ತಂತ್ರಜ್ಞಾನ ಅಳವಡಿಕೆ(ಹಸಿರು ಮನೆ, ಅಬಿವೃದ್ಧಿ,

ಜಿಲ್ಲಾ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ರೈತರಿಗೆ ಸಲಹೆ ಹಾಗೂ ➤ ಶ್ರೇಷ್ಟ ಕೃಷಿಕ ಪ್ರಶಸ್ತಿ Read More »

ಕರಾವಳಿ

ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಜಿಲ್ಲೆಯಲ್ಲಿ ಕಂಡು ಬಂದಿರುವ ಡೆಂಗ್ಯು ರೋಗ ನಿಯಂತ್ರಣಕ್ಕೆ ಅಗತ್ಯ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಈಗಾಗಲೇ ನಡೆಸುತ್ತಿರುವ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಇದರಲ್ಲಿ ಯಾವುದೇ ಲೋಪವನ್ನು ಸಹಿಸಲಾಗದು. ಆರೋಗ್ಯ ಇಲಾಖೆಯು

ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್ Read More »

ಕರಾವಳಿ
Scroll to Top