Mangalore

ಜನರ ಸಹಕಾರದಿಂದ ಪ್ಲಾಸ್ಟಿಕ್ ನಿಷೇಧ ಸಾಧ್ಯ

(ನ್ಯೂಸ್ ಕಡಬ) newskadaba.com ನರೇಗಲ್ಲ, ಜೂನ್.29.ಪ್ಲಾಸ್ಟಿಕ್‌ ಬಳಕೆ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದ್ದು, ಆಧುನಿಕ ಜೀವನದಲ್ಲಿ ನಮ್ಮ ಜೀವನಾವಶ್ಯಕ ವಸ್ತುಗಳೇ ನಮಗೆ ಮೃತ್ಯುವಾಗಿ ಪರಿಣಮಿಸಿವೆ ಎಂದು ಗಜೇಂದ್ರಗಡ ತಹಶೀಲ್ದಾರ್‌ ಗುರುಸಿದ್ಧಯ್ಯ ಹಿರೇಮಠ ಹೇಳಿದರು. ಸ್ಥಳೀಯ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ವರ್ತಕರಿಗೆ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಪ್ಲಾಸ್ಟಿಕ್‌ ನಿಷೇಧ ಹಾಗೂ ಸ್ವಚ್ಛತೆ ಅರಿವು ಸಭೆಯಲ್ಲಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿ ಭೂಮಿ ಮಳೆ ನೀರು ಇಂಗಲು ಮತ್ತು ಬೆಳೆ ಬೆಳೆಯಲು ಪ್ಲಾಸ್ಟಿಕ್‌ ಚೀಲಗಳು ಅಡ್ಡಿಪಡಿಸುತ್ತಿವೆ. ಪಟ್ಟಣಗಳಲ್ಲಿ […]

ಜನರ ಸಹಕಾರದಿಂದ ಪ್ಲಾಸ್ಟಿಕ್ ನಿಷೇಧ ಸಾಧ್ಯ Read More »

ಕರಾವಳಿ

ಬಹುಗ್ರಾಮ ಕುಡಿಯುವ ನೀರಿನಯಾನೆ ಮನವಿಗೆ ಸರಕಾರದ ಸ್ಪಂದನೆ ➤ ಸೂಕ್ತ ಕ್ರಮಕ್ಕೆ ಗ್ರಾಮೀಣಾಬಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ಪತ್ರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.29.ಕಡಬ ತಾಲೂಕಿನ ಕಡಬ, ಕೋಡಿಂಬಾಳ, ಕುಟ್ರುಪ್ಪಾಡಿ, 102 ನೆಕ್ಕಿಲಾಡಿ, ಬಂಟ್ರ ಗ್ರಾಮಗಳಿಗೆ ಕಡಬ ಗ್ರಾಮದ ಪಾಲೋಳಿ ಎಂಬಲ್ಲಿಂದ ಕುಮಾರಧಾರ ನದಿಯಿಂದ ನೀರು ಒದಗಿಸುವ ಸಂಬಂಧ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಅನುದಾನ ಮಂಜೂರುಗೊಳಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆಯಲಾಗಿತ್ತು.   ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಲ್ಲಿಸಿರುವ ಮನವಿಯ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಗ್ರಾಮೀಣಾಭಿವೃದ್ಧಿ ಮತ್ತು

ಬಹುಗ್ರಾಮ ಕುಡಿಯುವ ನೀರಿನಯಾನೆ ಮನವಿಗೆ ಸರಕಾರದ ಸ್ಪಂದನೆ ➤ ಸೂಕ್ತ ಕ್ರಮಕ್ಕೆ ಗ್ರಾಮೀಣಾಬಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ಪತ್ರ Read More »

ಕರಾವಳಿ

ಉದ್ಯೋಗಾರ್ಥಿಗಳಿಗೆ ಬಾಳಿನ ಬೆಳಕಾಗುವ ವೃತ್ತಿಶಿಕ್ಷಣಕ್ಕಾಗಿ ➤ ಬೆಥನಿ ವಿದ್ಯಾಸಂಸ್ಥೆ ನೆಲ್ಯಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ವಿದ್ಯಾನಗರಿಯಾಗಿ ಶೋಭಿಸುತ್ತಿರುವ ಸುಂದರ ತಾಣವೇ ಬೆಥನಿ ವಿದ್ಯಾಸಂಸ್ಥೆಗಳು. ಕಳೆದ 24 ವರ್ಷಗಳಿಂದ ಇಲ್ಲಿ ಬೆಥನಿ ಐಟಿಐ ಕಾರ್ಯಾಚರಿಸುತ್ತಿದ್ದು ವಿವಿಧ ವೃತ್ತಿಗಳಲ್ಲಿ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದು ಅದೆಷ್ಟೋ ವಿದ್ಯಾರ್ಥಿಗಳು ಜೀವನವನ್ನು ಹಸನಾಗಿಸಿದೆ. ತಾಂತ್ರಿಕ ಕ್ಷೇತ್ರದಲ್ಲಿ ಶರವೇಗದಲ್ಲಿ ಮುಂದುವರಿಯುತ್ತಿರುವ ಜಗತ್ತಿನ ರಾಷ್ಟ್ರಗಳ ಜೊತೆ ಭಾರತವೂ ಗುರುತ್ತಿಸಲ್ಪಡುತ್ತಿರುವುದು ಬಹಳ ಸಂತಸದ ವಿಷಯ. ಇಲ್ಲಿ ತರಬೇತಿ ಹೊಂದಿರುವ ವಿದ್ಯಾರ್ಥಿಗಳು

ಉದ್ಯೋಗಾರ್ಥಿಗಳಿಗೆ ಬಾಳಿನ ಬೆಳಕಾಗುವ ವೃತ್ತಿಶಿಕ್ಷಣಕ್ಕಾಗಿ ➤ ಬೆಥನಿ ವಿದ್ಯಾಸಂಸ್ಥೆ ನೆಲ್ಯಾಡಿ Read More »

ಕರಾವಳಿ

ಉಪ ಕಸುಬಾಗಿ ಲಾಭ ತರುವ ತಳಿ ಸ್ವರ್ಣಧಾರ ಕೋಳಿ ➤ ರಾಮಚಂದ್ರ ನಾಯ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ನಾಟಿ ಕೋಳಿಗೆ ಹೋಲುವ ವಿಶೇಷ ತಳಿಯಾದ ಸ್ವರ್ಣಧಾರ ಕೋಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈ ತಳಿಯನ್ನು ಬೀದರ್‍ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಬಿವೃದ್ಧಿ ಪಡಿಸಿದೆ. ಸ್ವದೇಶಿ ತಳಿಗಳೊಂದಾದ ಸ್ವರ್ಣಧಾರ ಕೋಳಿಯು ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಲಭ್ಯವಿದ್ದು ಆಸಕ್ತರಿಗೆ ಇತ್ತೀಚೆಗೆ ತರಬೇತಿಯ ಮೂಲಕ ವೈಜ್ಞಾನಿಕ ಕೋಳಿ ಸಾಕಣೆ ವಿಧಾನವನ್ನು ತಿಳಿಸಲಾಯಿತು.ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಎ.ಟಿ. ರಾಮಚಂದ್ರ ನಾಯ್ಕರವರು

ಉಪ ಕಸುಬಾಗಿ ಲಾಭ ತರುವ ತಳಿ ಸ್ವರ್ಣಧಾರ ಕೋಳಿ ➤ ರಾಮಚಂದ್ರ ನಾಯ್ಕ Read More »

ಕರಾವಳಿ

ಬಿ.ಆರ್ ಶ್ರೀನಿವಾಸ ಆಚಾರ್ ಸೇವೆ ಸ್ಮರಣೀಯ ➤ ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಜೂನ್ 28 ರಂದು ವಾರದ ಕವಾಯತಿನ ಸಂದರ್ಭದಲ್ಲಿ ಬಂಟ್ವಾಳ ಘಟಕದಿಂದ ಇತ್ತೀಚಿಗೆ ನಿವೃತ್ತರಾದ ಬಿ.ಆರ್ ಶ್ರೀನಿವಾಸ್ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಸುಮಾರು 37 ವರ್ಷಗಳಿಂದ ಬಂಟ್ವಾಳ ಘಟಕದ ಗೃಹರಕ್ಷಕರಾಗಿ ತನ್ನನ್ನು ತಾನು ತೊಡಗಿಸಿಕೊಂಡು ನಿಷ್ಕಾಮ ಸೇವೆ ಸಲ್ಲಿಸಿರುತ್ತಾರೆ.ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಸನ್ಮಾನಿಸಿದ ಬಳಿಕ ಮಾತನಾಡಿ ಈ ಇಲಾಖೆಗೆ 1982 ರಲ್ಲಿ ಸೇರ್ಪಡೆಕೊಂಡು 2016 ರಿಂದ ಬಂಟ್ವಾಳ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿ ಚುನಾವಣಾ

ಬಿ.ಆರ್ ಶ್ರೀನಿವಾಸ ಆಚಾರ್ ಸೇವೆ ಸ್ಮರಣೀಯ ➤ ಡಾ|| ಮುರಲೀ ಮೋಹನ್ ಚೂಂತಾರು Read More »

ಕರಾವಳಿ

ತೆಂಗು ಫಸಲು ಬಹಿರಂಗ ಹರಾಜು ಮೂಲಕ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2019-20 ನೇ ಸಾಲಿನ 01-04-2019 ರಿಂದ 31-03-2020ರ ಅವಧಿಯ ತೆಂಗು ಫಸಲನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.ಎಂದು ಪ್ರಕಟನೆ ತಿಳಿಸಿದೆ. ಜುಲೈ 16 ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿ ನರ್ಸರಿ, ಬಂಟ್ವಾಳ, ಅಪರಾಹ್ನ 4 ಗಂಟೆಗೆ ವಿಟ್ಲ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ, ಜುಲೈ 17 ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿ ನರ್ಸರಿ, ಬೆಳ್ತಂಗಡಿ, ಅಪರಾಹ್ನ 3.30 ಗಂಟೆಗೆ ಚಾರ್ಮಾಡಿ ತೋಟಗಾರಿಕೆ ಕ್ಷೇತ್ರ,

ತೆಂಗು ಫಸಲು ಬಹಿರಂಗ ಹರಾಜು ಮೂಲಕ ವಿಲೇವಾರಿ Read More »

ಕರಾವಳಿ

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಅರ್ಜಿ ಆಹ್ವಾನ Read More »

ಕರಾವಳಿ

ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ➤ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ -2019 ಕಾರ್ಯಕ್ರಮ ಜುಲೈ 2 ರಂದು ಬೆಳಿಗ್ಗೆ 9.30 ಗಂಟೆಗೆ ರೊಜಾರಿಯೋ ಕಲ್ಚರಲ್ ಹಾಲ್, ಮಂಗಳೂರು ಇಲ್ಲಿ ನಡೆಯಲಿದೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ಆರೋಗ್ಯ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ರೊಜಾರಿಯೊ ಪದವಿ ಪೂರ್ವಕಾಲೇಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ➤ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ Read More »

ಕರಾವಳಿ

ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಪಂಚಾಯತ್ ವಲಯದ ಕ್ರಿಯಾ ಯೋಜನೆಯಡಿ 50ವರ್ಷ ಮೇಲ್ಪಟ ಹಾಗೂ ಆರ್ಥಿಕವಾಗಿ ಕಷ್ಟ ಪರಿಸ್ಥಿತಿಯಲ್ಲಿರುವ ಅಂದರೆ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 20,000/- ಮಿತಿಯೊಳಗಿರುವ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕುಸ್ತಿ ಹಾಗೂ ಇತರ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಸುಮಾರು 30-40 ವರ್ಷಗಳ ಹಿಂದೆ (ಯುವ ವಯಸ್ಸಿನಲ್ಲಿ) ಕುಸ್ತಿ ಪಂದ್ಯದಲ್ಲಿ ಭಾಗವಹಿಸಿದ

ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನ Read More »

ಕರಾವಳಿ

ಅಘನಾಶಿನಿ ಒಡಲಿಗೆ ಮತ್ತೆ ಕುತ್ತು

(ನ್ಯೂಸ್ ಕಡಬ) newskadaba.com ಶಿರಸಿ, ಜೂನ್.28.ಅಘನಾಶಿನಿ ನದಿ ತನ್ನ ಸುತ್ತಲೂ ಯಾರೂ ಕಾಣದ ಅಪರೂಪದ ಕ್ಷಣ ಭಂಗುರ ನಿಧಿಗಳನ್ನು ತೋರ್ಪಡಿಸುತ್ತ ತನ್ನ ಪಾಡಿಗೆ ಹರಿಯುತ್ತಿತ್ತು. ಪಶ್ಚಿಮ ಘಟ್ಟದಲ್ಲಿನ ಅಳಿವನಂಚಿನ ಅನೇಕ ವನಸ್ಪತಿಗಳಿಗೂ ಆಶ್ರಯ ತಾಣವಾಗಿತ್ತು ಆದರೆ ಇದೀಗ ಅಘನಾಶಿನಿಗೆ ಅಪಾಯ ಎದುರಾಗಿದೆ. ಇಲ್ಲಿನ ನದಿಯ ನೀರನ್ನು ತಿರುಗಿಸಿ ಮಹಾ ನಗರದ ಕುಡಿಯುವ ನೀರಿನ ಯೋಜನೆಗೆ ಸೇರ್ಪಡೆಗೊಳಿಸಲು ತಯಾರಿನಡೆಸಲಾಗಿದೆ ಎಂಬ ಸಚಿವರ ಹೇಳಿಕೆಯು ಆತಂಕವನ್ನು ಉಂಟುಮಾಡಿದೆ.ಶಿರಸಿಯ ಶಂಕರ ಹೊಂಡದಲ್ಲಿ ಜನಿಸಿದ ಅಘನಾಶಿನಿ ನದಿ ಕರಾವಳಿಯಲ್ಲಿ ಸಮುದ್ರ ಸೇರುತ್ತದೆ. ಕುಮಟಾದಲ್ಲಿ

ಅಘನಾಶಿನಿ ಒಡಲಿಗೆ ಮತ್ತೆ ಕುತ್ತು Read More »

ಕರ್ನಾಟಕ
Scroll to Top