Mangalore

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛಮೇಮ ಜಯತೇ ಆಂದೋಲನ➤ಬೆಳ್ತಂಗಡಿ ತಾ| ವ್ಯಾಪ್ತಿಯಲ್ಲಿ 66 ಸಾವಿರ ಗಿಡ ವಿತರಣೆ ಗುರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.17.ಬೆಳ್ತಂಗಡಿ ತಾ| ಸಾಮಾಜಿಕ ಅರಣ್ಯ ಇಲಾಖೆಯು ಗ್ರಾ.ಪಂ., ಶಾಲೆ, ರಸ್ತೆ ಬದಿ ಸಹಿತ ಖಾಲಿ ಸ್ಥಳಗಳಲ್ಲಿ 66 ಸಾವಿರ ಸಸಿ ಗಿಡ ನೆಡುವ ಗುರಿ ಇರಿಸಿದೆ. ವಿಶ್ವ ಪರಿಸರ ದಿನದಂದು ಉಜಿರೆ ಗ್ರಾ.ಪಂ.ನಲ್ಲಿ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದ್ದು, ಪ್ರತಿ ಗ್ರಾ.ಪಂ.ಗೆ 500 ಗಿಡಗಳಂತೆ ತಾ.ನ 48 ಗ್ರಾ.ಪಂ.ಗಳಿಗೆ ಗಿಡ ನೆಡುವ ಜವಾಬ್ದಾರಿ ನೀಡಿದೆ. ಸದ್ಯ 23 ಗ್ರಾ.ಪಂ.ಗಳಿಗೆ 11,500 ಗಿಡ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಸಿ ನೆಡುವ ಜತೆಗೆ […]

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛಮೇಮ ಜಯತೇ ಆಂದೋಲನ➤ಬೆಳ್ತಂಗಡಿ ತಾ| ವ್ಯಾಪ್ತಿಯಲ್ಲಿ 66 ಸಾವಿರ ಗಿಡ ವಿತರಣೆ ಗುರಿ Read More »

ಕರಾವಳಿ

ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ, ಶಕ್ತಿನಗರ ಇದರ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಶ್ರೀ ನರೇಂದ್ರ ಮೋದಿಯವರು ಪೂರ್ಣ ಬಹುಮತದೊಂದಿಗೆ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಪ್ರಯುಕ್ತ ಶಕ್ತಿನಗರದ ಕುವೆಂಪು ದಶಮಾನೋತ್ಸವ ಮಾದರಿ ಶಾಲೆ ನಾಲ್ಯಪದವು ಶಕ್ತಿನಗರದಲ್ಲಿ  ಒಟ್ಟು 105 ದಾನಿಗಳಿಂದ ರಕ್ತದಾನವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರದ ವೇದವ್ಯಾಸ್ ಕಾಮತ್  ರವರು ವಹಿಸಿದ್ದರು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಜಿಲ್ಲಾ ಕಾರ್ಯದರ್ಶಿಗಳಾದ

ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ Read More »

ಕರಾವಳಿ

ಕಂದಾಯ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ:ಜೂನ್ 17 ರಂದು ರಾತ್ರಿ 9.25 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ವಾಸ್ತವ್ಯ, ಜೂ. 18ರಂದು ಬೆಳಿಗ್ಗೆ 8 ಗಂಟೆಗೆ ಉಡುಪಿಗೆ ತೆರಳಿ, ಉಡುಪಿ ಜಿಲ್ಲೆಯಲ್ಲಿ ಪ್ರವಾಹ/ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಂಡ ಪರಿಹಾರ ಕ್ರಮಗಳ ವೀಕ್ಷಣೆ ನಡೆಸಿ, ಬಳಿಕ ಸಭೆ ನಡೆಸಲಿದ್ದಾರೆ. ಅಪರಾಹ್ನ 1.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ/ಬರಪೀಡಿತ ಪ್ರದೇಶಗಳಿಗೆ ಭೇಟಿ

ಕಂದಾಯ ಸಚಿವರ ಪ್ರವಾಸ Read More »

ಕರಾವಳಿ

ಬಂಟ್ವಾಳ ತಾಲೂಕು ಸಾಮಾನ್ಯ ಸಭೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಜೂನ್ 26 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕೆ. ಚಂದ್ರಹಾಸ ಕರ್ಕೇರಾ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾಲೂಕು ಸಾಮಾನ್ಯ ಸಭೆ Read More »

ಕರಾವಳಿ

ವ್ಯಕ್ತಿ ನಾಪತ್ತೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ತೋಕೂರು ಗ್ರಾಮದ ಕಂಬಳಬೆಟ್ಟು ಮನೆಯ ಚಂದ್ರಹಾಸ ಎಂಬಾತನು ಮೇ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಗಂಡಸಿನ ಚಹರೆ ಇಂತಿವೆ: ಚಂದ್ರಹಾಸ ಪ್ರಾಯ 40 ವರ್ಷ, 5.6 ಅಡಿ ಎತ್ತರ, ಗೋದಿ ಮೈಬಣ್ಣ. ಈ ಚಹರೆಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಮುಲ್ಕಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2290533, 9480805359, 9480805332 ನಂಬ್ರಕ್ಕೆ ಅಧವಾ ಮಂಗಳೂರು ನಗರ

ವ್ಯಕ್ತಿ ನಾಪತ್ತೆ Read More »

ಕರಾವಳಿ

ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಜಿಲ್ಲಾ ಗೃಹರಕ್ಷಕ ದಳದ ಇವರ ಸಹಯೋಗದಲ್ಲಿ ಜೂನ್ 21ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಜೂನ್ 15 ರಂದು ಪೂರ್ವಾಹ್ನ 7 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು

ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ Read More »

ಕರಾವಳಿ

ಮಳವೂರು ಗ್ರಾಮಸಭೆ ಹಾಗೂ ವಾರ್ಡು ಸಭೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಮಂಗಳೂರು ತಾಲೂಕು ಮಳವೂರು ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 5 ರಂದು ಪೂರ್ವಾಹ್ನ 10.30 ಗಂಟೆಗೆ ಕಾನ ಆಮಂತ್ರಣ ಹಾಲ್ ಕೆಂಜಾರು ಗ್ರಾಮದಲ್ಲಿ ನಡೆಯಲಿದೆ. ಮಳವೂರು ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; ಜೂನ್ 19 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನ ಮಳವೂರು ಕರಂಬಾರು, ಜೂನ್ 20 ರಂದು ಪೂರ್ವಾಹ್ನ 10.30 ಗಂಟೆಗೆ ಸಮುದಾಯ ಭವನ,

ಮಳವೂರು ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲು ಯೋಜನೆ ಹಮ್ಮಿಕೊಂಡಿದೆ. ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮ ನಡೆಸಲು ಪ್ರಾಧಿಕಾರವು ರೂ 5000/ ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ

ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ Read More »

ಕರಾವಳಿ

ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018 ನೇ ಸಾಲಿನ ಯುವಬರಹಗಾರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. ಸ್ವ-ವಿವರದೊಂದಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ, ಜನ್ಮದಾಖಲಾತಿ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ದೃಢೀಕರಣ ಪತ್ರ ನೀಡಬೇಕು. ಅರ್ಜಿಯನ್ನು ಜುಲೈ 6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ

ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ Read More »

ಕರಾವಳಿ

ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018ರಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವಯಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು/ಲೇಖಕರು/ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು 2018 (ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಪುದ್ರಣ ಸೊಗಸು, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರ ಕಲೆಯ ದ್ವಿತೀಯ) ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಯಂ ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ

ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top