Mangalore

ದಾಸವಾಳ ಒಂದು ಔಷಧಿ ಗಿಡ

(ನ್ಯೂಸ್ ಕಡಬ) newskadaba.com  ಆರೋಗ್ಯ ಮಾಹಿತಿ:ದಾಸವಾಳದ ಎಲೆಗಳು ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಅನುಕೂಲಕಾರಿ ಗುಣಗಳನ್ನು ಹೊಂದಿವೆ. ಬಾಹ್ಯ ಹಾಗೂ ಆಂತರ್ಯರೂಪದಲ್ಲಿ ದಾಸವಾಳದ ಎಲೆಯನ್ನು ಬಳಕೆ ಮಾಡಬಹುದಾಗಿದ್ದು, ಇದು ಅನೇಕ ವಿಟಮಿನ್ನುಗಳು ಹಾಗೂ ಮಿನರಲ್​ಗಳಿಂದ ಭರಿತವಾಗಿದೆ. ಇದರಲ್ಲಿ ಆಂಟಿ ಆಕ್ಸಿಡೆಂಟ್​ಗಳು ಹೆಚ್ಚಿನ ಪ್ರಮಾಣದಲ್ಲಿದೆ. ದೇಹಕ್ಕೆ ಹಾನಿ ಮಾಡಬಹುದಾದ ಪದಾರ್ಥಗಳನ್ನು ಹೊರಹಾಕಲು ಉಪಯುಕ್ತ.ದಾಸವಾಳದ ಎಲೆಯನ್ನು ಬಳಸಿ ಕಷಾಯ ಮಾಡಿ ಸೇವಿಸುವುದರಿಂದ ಈ ಉಪಯುಕ್ತತೆ ಸಿಗುತ್ತದೆ. ಇದರಲ್ಲಿನ ಆಂಟಿ ಆಕ್ಸಿಡೆಂಟ್​ಗಳು ಕ್ಯಾನ್ಸರ್ ವಿರುದ್ಧ ಹೋರಾಡಲು, ತೂಕ ಕಡಿಮೆ ಮಾಡಿಕೊಳ್ಳಲು, ಕೊಲೆಸ್ಟರಾಲ್​ನ ಪ್ರಮಾಣವನ್ನು […]

ದಾಸವಾಳ ಒಂದು ಔಷಧಿ ಗಿಡ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು➤ಪವಾಡಸದೃಶ ರೀತಿಯಲ್ಲಿ ಪಾರಾದ ಮೂವರು ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜೂನ್.4. ಮಂಗಳವಾರ ಮುಂಜಾನೆ ಮಂಗಳೂರು- ಉಡುಪಿ ಮಾರ್ಗವಾಗಿ ಬರುತ್ತಿದ್ದ ವೇಳೆ ಹಳೆಯಂಗಡಿಯಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಎಂದು ತಿಳಿದು ಬಂದಿದೆ. ಚಾಲಕನ ನಿದ್ರೆ ಮಂಪರಿನಿಂದ ಈ ಘಟನೆ ನಡೆದಿರಬಹುದು ಎಂದು ಸಂಚಾರಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.  

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು➤ಪವಾಡಸದೃಶ ರೀತಿಯಲ್ಲಿ ಪಾರಾದ ಮೂವರು ಪ್ರಯಾಣಿಕರು Read More »

ಕರಾವಳಿ

ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.4.ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ರಾಜ್ಯದಲ್ಲಿ ಮೊಬೈಲ್ ಟವರ್‌ಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ ಹೊಸ ಮೊಬೈಲ್‌ ಟವರ್‌ ನೀತಿಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಹೊಸ ಟವರ್‌ ಅಳವಡಿಕೆ ನೀತಿ ಬಗ್ಗೆ ಅಧಿಸೂಚನೆ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ, ಮೊಬೈಲ್‌ ಟವರ್‌ ಅಳವಡಿಕೆಗೆ ಹಲವು ಷರತ್ತುಗಳನ್ನು ಹೇರಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.   ಹೊಸ ನೀತಿ ಪ್ರಕಾರ ವಸತಿ ಪ್ರದೇಶಗಳಲ್ಲಿ ಟವರ್‌ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ವಸತಿ ಪ್ರದೇಶದಲ್ಲಿ ಟವರ್‌

ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ Read More »

ರಾಷ್ಟ್ರೀಯ ನ್ಯೂಸ್

ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.4.ನೂಜಿ ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ, ಪಠ್ಯ ಪುಸ್ತಕ ವಿತರಣೆ ಹಾಗೂ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯೆ ರಜಿತಾ ಪದ್ಮನಾಭ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರು ವಹಿಸಿದ್ದರು. ವಿಶೇಷ ದಾಖಲಾತಿ ಆಂದೋಲನದಲ್ಲಿ ಶಾಲೆಗೆ ದಾಖಲಾಗಲು ಅರ್ಹರಿರುವ ಮಗುವಿನ ಮನೆಗೆ ಗ್ರಾ.ಪಂ. ಸದಸ್ಯೆ, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳು ತೆರಳಿ ಮಗುವನ್ನು ಶಾಲೆಗೆ ದಾಖಲು ಮಾಡಿಕೊಳ್ಳಲಾಯಿತು. ಶಾಲಾ

ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ Read More »

ಕರಾವಳಿ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 200 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. 2019ರ ಮುಂಗಾರು ಹಂಗಾಮಿನಲ್ಲಿ ಬೆಳೆಸಾಲ ಪಡೆಯುವ ಮತ್ತು ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ದಿನಾಂಕವನ್ನು ದಿ:14-8-2019ಕ್ಕೆ ನಿಗದಿಪಡಿಸಲಾಗಿದೆ. ಈ ಯೋಜನೆಯು ಬೆಳೆಸಾಲ ಪಡೆದ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ತೋಕೂರು ಕಂಬಳಬೆಟ್ಟು, ಹಳೆಯಂಗಡಿ ಪೋಸ್ಟ್ ನಲ್ಲಿ ವಾಸವಿದ್ದ ಅವಿವಾಹಿತೆ ಕುಮಾರಿ ಉಮಾವತಿ ಎಂಬಾಕೆ ಹಲ್ಲಿನ ಡಾಕ್ಟರ್ ಹತ್ತಿರ ಹೋಗುತ್ತೇನೆ ಎಂದು ಹೋದಾಕೆ ವಾಪಾಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದವರ ಚಹರೆ ಇಂತಿವೆ: ಹೆಸರು – ಉಮಾವತಿ, ಪ್ರಾಯ-34 ವರ್ಷ, ಎತ್ತರ-5.4 ಅಡಿ, ಕೋಲು ಮುಖ, ಧರಿಸಿದ ಬಟ್ಟೆ-ನೀಲಿ ಕಪ್ಪು ಹಳದಿ ಚೌಕುಳಿಯ ಚೂಡಿದಾರ್ ಟಾಪ್ ಮತ್ತು ನೀಲಿ ಬಣ್ಣದ ಲೆಗ್ಗಿನ್ಸ್ ಪ್ಯಾಂಟ್, ಗೊತ್ತಿರುವ

ಯುವತಿ ಕಾಣೆಯಾಗಿದ್ದಾರೆ. Read More »

ಕರಾವಳಿ

ಅಲ್ಪಾವಧಿ ಟೆಂಡರ್ ಆಹ್ವಾನ ➤ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು ಇವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗ ಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ 7 ಸಂಖ್ಯೆ ಕಂಪ್ಯೂಟರ್ ಆಪರೇಟರ್ ಹಾಗೂ 7 ಸಂಖ್ಯೆ ಗ್ರೂಪ್-ಡಿ ಸಿಬ್ಬಂದಿಯನ್ನು 2019-20 ನೇ ಸಾಲಿಗೆ 12 ತಿಂಗಳ ಅವಧಿಗೆ ಹೊರಗುತ್ತಿಗೆ ಪಡೆಯುವ ಸಲುವಾಗಿ ಸೂಕ್ತ ಸೇವಾ ಸರಬರಾಜುದಾರರು (ಮ್ಯಾನ್ ಪವರ್ ಏಜೆನ್ಸಿ) ಯವರಿಂದ ಇ-ಪ್ರೊಕ್ಯೂರ್‍ಮೆಂಟ್

ಅಲ್ಪಾವಧಿ ಟೆಂಡರ್ ಆಹ್ವಾನ ➤ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು Read More »

ಕರಾವಳಿ

ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆ➤ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಸಾರ್ವಜನಿಕರಿಗೆ ಮಾಹಿತಿ ನೀಡಲು ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಇಂದು  ಅಪರಾಹ್ನ 4 ಗಂಟೆಗೆ ವಾರ್ಡ್ ನಂ. 48 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಗರೋಡಿ ಸರ್ವಮಂಗಳ ಹಾಲ್‍ನಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ

ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆ➤ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ರುಡ್‍ಸೆಟ್‍ನ ವಿದ್ಯಾರ್ಥಿಗಳಿಂದ ಉಜಿರೆಯ ಮೊಬೈಲ್ ಫೋನ್ ಗ್ರಾಹಕರಿಗೆ ಉಚಿತ ಸೇವೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ರುಡ್‍ಸೆಟ್ ಸಂಸ್ಥೆಯಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿದ್ದ ಮೊಬೈಲ್ ರಿಪೇರಿ ಶಿಬಿರಾರ್ಥಿಗಳಿಂದ ಮೊಬೈಲ್ ಫೋನ್ ಗ್ರಾಹಕರಿಗೆ ಉಜಿರೆಯ ಸುಪ್ರೀಮ್ ಸೆಂಟರ್ ನ ಎದುರು ಒಂದು ದಿನದ ಉಚಿತ ಮೊಬೈಲ್ ಸರ್ವಿಸ್ ಕ್ಯಾಂಪ್ ನಡೆಸಲಾಯಿತು. ರುಡ್‍ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಎಮ್. ಜನಾರ್ಧನ್‍ರವರು ಈ ಕಾರ್ಯಕ್ರಮವನ್ನು ಉಧ್ಘಾಟಿಸಿ ಶುಭ ಹಾರೈಸಿದರು. ನಿರ್ದೇಶಕರಾದ ವಿನಯ್ ಕುಮಾರ್ ಮತ್ತು ಹಿರಿಯ ಉಪನ್ಯಾಸಕರಾದ ಅಬ್ರಹಂ ಜೇಮ್ಸ್, ಅನಸೂಯ ಉಪಸ್ಥಿತರಿದ್ದರು. ಈ ಮೊಬೈಲ್ ಕ್ಯಾಂಪ್‍ನಲ್ಲಿ ಉಜಿರೆಯ ಸುಮಾರು 50

ರುಡ್‍ಸೆಟ್‍ನ ವಿದ್ಯಾರ್ಥಿಗಳಿಂದ ಉಜಿರೆಯ ಮೊಬೈಲ್ ಫೋನ್ ಗ್ರಾಹಕರಿಗೆ ಉಚಿತ ಸೇವೆ. Read More »

ಕರಾವಳಿ

ಜೂನ್ 6 ರಂದು ಜನಸ್ಪಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಪ್ರಾದೇಶಿಕ ಸಾರಿಗೆ ಕಚೇರಿ, ಮಂಗಳೂರು ಇಲ್ಲಿ ಜೂನ್ 6 ರಂದು ಅಪರಾಹ್ನ 3 ರಿಂದ 4 ಗಂಟೆಯವರೆಗೆ ಜನ ಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದುದರಿಂದ ಸಾರ್ವಜನಿಕರು ಕಚೇರಿಗೆ ಹಾಜರಾಗಿ ಸಾರಿಗೆ ಕಚೇರಿಗೆ ಸಂಬಂಧಿಸಿದ ತಮ್ಮ ದೂರು ಹಾಗೂ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಲು ಪ್ರಾದೇಶಿಕ ಸಾರಿಗೆ ಅಧಿಕಾರಿ(ಪ್ರಭಾರ),ಗಳ ಪ್ರಕಟಣೆ ತಿಳಿಸಿದೆ.

ಜೂನ್ 6 ರಂದು ಜನಸ್ಪಂದನಾ ಕಾರ್ಯಕ್ರಮ Read More »

ಕರಾವಳಿ
Scroll to Top