Mangalore

ವಿಶ್ವ ಚಿತ್ತವಿಕಲತೆ ದಿನ-2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 6 ರಂದು ಪೂರ್ವಾಹ್ನ 11 ಗಂಟೆಗೆ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೋರಿಯಂ ಇಲ್ಲಿ ವಿಶ್ವ ಚಿತ್ತವಿಕಲತೆ ದಿನ – 2019 ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್ […]

ವಿಶ್ವ ಚಿತ್ತವಿಕಲತೆ ದಿನ-2019 Read More »

ಕರಾವಳಿ

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಮಂಗಳೂರಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜೂನ್ 8 ಮತ್ತು 9 ರಂದು (ಶನಿವಾರ ಮತ್ತು ಆದಿತ್ಯವಾರ) ರಂದು ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ತೋಟಗಾರಿಕಾ ಇಲಾಖಾ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ಇತರೆ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ವಿವಿಧ ಹಣ್ಣುಗಳು, ಔಷದೀಯ ಸಸಿಗಳು, ಕಸಿ ಗಿಡಗಳು, ಬೀಜಗಳು,

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ Read More »

ಕರಾವಳಿ

ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಮಳೆಗಾಲದಲ್ಲಿ ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಪ್ರದೇಶಗಳಲ್ಲಿ ಸಮುದ್ರ ಕೊರೆತ ತೀವ್ರವಾಗಿ ಕಾಡಲಿದ್ದು, ಈ ಪ್ರದೇಶ ವ್ಯಾಪ್ತಿಯಲ್ಲಿ ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ನಿರ್ದೇಶನ ನೀಡಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸಲಿದ್ದು, ಮುನ್ನೆಚ್ಚರಿಕೆ

ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್ Read More »

ಕರಾವಳಿ

ಕೇಂದ್ರ ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕಾರಿಸಿದ ಕಿರಣ್ ರಿಜಿಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ನವದೆಹಲಿ: ಅರುಣಾಚಲಪ್ರದೇಶದ ಕಿರಣ್‌ ರಿಜಿಜು ಹೊಸದಾಗಿ ಕೇಂದ್ರ ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕರಿಸಿ ಕಾರ್ಯಾರಂಭಿಸಿದ್ದಾರೆ. ಇದನ್ನು ಭಾರತೀಯ ಕ್ರೀಡಾಲೋಕ ಸ್ವಾಗತಿಸಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ರಿಜಿಜು, ‘ನಾವೊಂದು ತಂಡವಾಗಿ ಕೆಲಸ ಮಾಡುತ್ತೇವೆ. ನಾನು ಹಿಂದಿನ ಕ್ರೀಡಾಮಂತ್ರಿ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಅವರನ್ನು ಭೇಟಿ ಮಾಡುತ್ತೇನೆ. ಅವರು ಹಿಂದೇನು ಮಾಡಿದ್ದಾರೋ ಅದನ್ನು ಮುಂದುವರಿಸುತ್ತೇನೆ. ಹೊಸತನ್ನು ಅದಕ್ಕೆ ಸೇರಿಸುತ್ತೇನೆ’ ಎಂದು ಹೇಳಿದ್ದಾರೆ. ಇವರಿಗೂ ಮುನ್ನ ರಾಜ್ಯವರ್ಧನ್‌ ಸಿಂಗ್‌ ಕ್ರೀಡಾಮಂತ್ರಿಯಾಗಿ ಧಾರಾಳ ಯಶಸ್ಸು ಕಂಡಿದ್ದರು. ಈ

ಕೇಂದ್ರ ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕಾರಿಸಿದ ಕಿರಣ್ ರಿಜಿಜು Read More »

ರಾಷ್ಟ್ರೀಯ ನ್ಯೂಸ್

ಸೋಮವಾರಪೇಟೆ ಬಳಿಯ ಕೋವರ್ ಕೊಲ್ಲಿ ಬಳಿ ತೊಫಾನ್ ಪಲ್ಟಿ ➤ ಬಾಲಕನ ದುರ್ಮರಣ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂನ್.3.ಕುಶಾಲನಗರ ಮಾರ್ಗದಿಂದ ಸೋಮವಾರಪೇಟೆಯ ಮೂಲಕ ಸುಬ್ರಹ್ಮಣ್ಯ ದೇವಾಲಯಕ್ಕೆ ತೂಫಾನ್​ ಗಾಡಿಯಲ್ಲಿ ತೆರಳುತ್ತಿದ್ದ ವೇಳೆ ಸೋಮವಾರಪೇಟೆ ಸಮೀಪದ ಕೋವರ್​ ಕೊಲ್ಲಿ ಬಳಿ ತೂಫಾನ್ ಗಾಡಿಯು ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಇದರ ಪರಿಣಾಮ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿವೆ.ವಾಹನ್​ ಕೋವರ್ ಕೊಲ್ಲಿ ಬಳಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಇವರು ಬೆಳಗಾವಿ ಮೂಲದವರು ಎಂದು ಪ್ರಕಟಣೆ ತಿಳಿಸಿದೆ.

ಸೋಮವಾರಪೇಟೆ ಬಳಿಯ ಕೋವರ್ ಕೊಲ್ಲಿ ಬಳಿ ತೊಫಾನ್ ಪಲ್ಟಿ ➤ ಬಾಲಕನ ದುರ್ಮರಣ Read More »

ಕರಾವಳಿ

ಚುನಾವಣೆಯಲ್ಲಿ ಆಯ್ಕೆಯಾದ ವಿಜಯಿ ಅಭ್ಯರ್ಥಿಗಳಿಗೆ ಸಚಿವರಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ರಾಜ್ಯದಾದ್ಯಂತ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ವಿಜಯಿ ಅಭ್ಯರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಅಭಿನಂದಿಸಿದ್ದಾರೆ. ಜಿಲ್ಲೆಯ ಅಭಿವೃದ್ದಿಗೆ ಪೂರಕವಾಗಿ ಅಗತ್ಯ ಸಂಪನ್ಮೂಲಗಳನ್ನು ಸೃಷ್ಠಿಸಲು ಹಾಗೂ ಬಳಸಿಕೊಳ್ಳಲು ರಾಜ್ಯ ಸರಕಾರದಿಂದ ಎಲ್ಲಾ ನೇರವನ್ನು ಒದಗಿಸುವುದಾಗಿ ಸಚಿವರು ಹೇಳಿದರು.ಚುನಾವಣೆಯಲ್ಲಿ ವಿಜಯಿಗಳಾದ ಅಭ್ಯರ್ಥಿಗಳಿಗೆ ಹಾಗೂ ಮತದಾನ ಮಾಡಿದ ಮತದಾರರಿಗೆ ಉಸ್ತುವಾರಿ ಸಚಿವರು ಅಭಿನಂದನೆ ಮತ್ತು ಧನ್ಯವಾದಗಳನ್ನು ಸಲ್ಲಿಸಿದರು. ಜನರನ್ನು ಆರಿಸಿ ಕಳುಹಿಸಿದ ಜನಪ್ರತಿನಿಧಿಗಳು ಜನರ ವಿಶ್ವಾಸಕ್ಕೆ ಕುಂದು ಉಂಟಾಗದಂತೆ ಕೆಲಸ

ಚುನಾವಣೆಯಲ್ಲಿ ಆಯ್ಕೆಯಾದ ವಿಜಯಿ ಅಭ್ಯರ್ಥಿಗಳಿಗೆ ಸಚಿವರಿಂದ ಅಭಿನಂದನೆ Read More »

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಹಮ್ಮಿಕೊಂಡ ತುಳು ಲೇಖನ ಸ್ಪರ್ಧಾ ವಿಜೇತರ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ನಾಲ್ಕು ವಿಭಾಗಗಳಲ್ಲಿ ಹಮ್ಮಿಕೊಂಡ ತುಳು ಲೇಖನ ಸ್ಪರ್ಧೆಯಲ್ಲಿ ಬಹುಮಾನ ಪಡೆದವರ ವಿವರ ಇಂತಿದೆ. ತುಳುನಾಡಿನ ಅಪೂರ್ವ ಕ್ಷೇತ್ರ ಪರಿಚಯ ವಿಭಾಗದಲ್ಲಿ ಪ್ರಥಮ ನವೀನ್‍ಕುಮಾರ್ ಪೆರಾರ, ದ್ವಿತೀಯ ಸದಾನಂದ ನಾರಾವಿತುಳುನಾಡಿನ ಅಪೂರ್ವ ಸಾಧಕರು ವಿಭಾಗದಲ್ಲಿ ಪ್ರಥಮ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು, ದ್ವಿತೀಯ ಡಾ. ಕರುಣಾಕರ್ ಎನ್ ಶೆಟ್ಟಿ ತುಳುನಾಡಿನ ಅಪೂರ್ವ ನಂಬಿಕೆ ವಿಭಾಗದಲ್ಲಿ ಪ್ರಥಮ ಸುನಿತಾ ಶೆಣೈ, ದ್ವಿತೀಯ ಭರತೇಶ ಅಲಸಂಡೆಮಜಲು ತುಳುನಾಡಿನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಹಮ್ಮಿಕೊಂಡ ತುಳು ಲೇಖನ ಸ್ಪರ್ಧಾ ವಿಜೇತರ ಆಯ್ಕೆ Read More »

ಕರಾವಳಿ

2019-20ನೇ ಸಾಲಿನ ಪ್ರಥಮ ವರ್ಷದ ಸಂಜೆ ಡಿಪ್ಲೋಮಾ ಪ್ರವೇಶಾತಿ ➤ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.2019-20ನೇ ಸಾಲಿನ ಪ್ರಥಮ ವರ್ಷದ ಸಂಜೆ ಡಿಪ್ಲೋಮಾ ಡಿಪ್ಲೋಮಾ ಬಯಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ನೀಡುವ ಹಾಗೂ ಸ್ವೀಕರಿಸುವ ದಿನಾಂಕವನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್  www.dte.kar.nic.in ಮತ್ತು ಕರ್ನಾಟಕ ಸಂಜೆ ಪಾಲಿಟೆಕ್ನಿಕ್‍ನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಎಂದು ಸ್ಪೆಷಲ್ ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

2019-20ನೇ ಸಾಲಿನ ಪ್ರಥಮ ವರ್ಷದ ಸಂಜೆ ಡಿಪ್ಲೋಮಾ ಪ್ರವೇಶಾತಿ ➤ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳಿಗೆ ದಾಖಲಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಬೋಳಾರ ಮಂಗಳೂರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಚಿಲಿಂಬಿ, ದೇರಳಕಟ್ಟೆ, ಗುರುಕಂಬ್ಲ, ಬೆಂಜನಪದವು ಹಾಗೂ ಕಡಬ ಇಲ್ಲಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಮತ್ತು

ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳಿಗೆ ದಾಖಲಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಇಂದು  ಅಪರಾಹ್ನ 4 ಗಂಟೆಗೆ ವಾರ್ಡ್ ನಂ. 18 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕಾವೂರು ಮಾರ್ಕೆಟ್ ಬಳಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ
Scroll to Top