Mangalore

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ.ಬೇಸಿಗೆಯಲ್ಲಿ ದೊರೆಯುವ ಈ  ಲೀಚಿ ಹಣ್ಣು ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳಿಂದ ಭರಿತವಾಗಿದೆ. ಹೊರಗಡೆಯಿಂದ ಒರಟಾದ ಪದರವನ್ನು ಹೊಂದಿರುತ್ತದೆ. ಒಳಗಡೆ ಹಣ್ಣಿನ ಮೃದುವಾದ ಭಾಗ ಇರುತ್ತದೆ. ಚೀನಾದಲ್ಲಿ ಔಷಧೀಯ ಪದಾರ್ಥವಾಗಿಯೂ ಲೀಚಿಯನ್ನು ಉಪಯೋಗಿಸಲಾಗುತ್ತದೆ.ಲೀಚಿಯು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ ಸಂಯುಕ್ತಗಳನ್ನು ಹೊಂದಿದೆ. ರಕ್ತದ ಉತ್ಪಾದನೆಗೆ ಬೇಕಾದಂತಹ ಅನೇಕ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ದೇಹದಲ್ಲಿ ಸೋಡಿಯಂನ ಪ್ರಮಾಣವನ್ನು ನಿರ್ವಹಣೆ ಮಾಡಲು, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು, ರಕ್ತನಾಳಗಳ ಆರೋಗ್ಯಕ್ಕೆ, ಹೃದಯಸ ಸ್ವಾಸ್ಥ್ಯ್ಕೆ […]

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ Read More »

ಆರೋಗ್ಯ ಮಾಹಿತಿ, ಕರಾವಳಿ

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆರಂಭವಾಗಲಿದೆ ಎಲ್ಕೆಜಿ, ಯುಕೆಜಿ ➤ಅಂಗನವಾಡಿಗಳಿಗೆ ಈಗ ಅಳಿವು ಉಳಿವಿನ ಪ್ರಶ್ನೆ!

  (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿಗಳಿಗೆ ಅಳಿವು ಉಳಿವಿನ ಪ್ರಶ್ನೆಯನ್ನೇ ಹುಟ್ಟು ಹಾಕಿದೆ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಮತ್ತು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ಬೆಳೆಸಲು ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು (ಎಲ್ಕೆಜಿ, ಯುಕೆಜಿ) ಆರಂಭಿಸುತ್ತಿರುವುದರಿಂದ ರಾಜ್ಯದಲ್ಲಿನ 1,500ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ.2019-20ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆರಂಭವಾಗಲಿದೆ ಎಲ್ಕೆಜಿ, ಯುಕೆಜಿ ➤ಅಂಗನವಾಡಿಗಳಿಗೆ ಈಗ ಅಳಿವು ಉಳಿವಿನ ಪ್ರಶ್ನೆ! Read More »

ರಾಷ್ಟ್ರೀಯ ನ್ಯೂಸ್

ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್ ಪಂದ್ಯ ➤ಭಾರತ “ಎ’ ಇನ್ನಿಂಗ್ಸ್ ಜಯಭೇರಿ

(ನ್ಯೂಸ್ ಕಡಬ) newskadaba.com ,ಬೆಳಗಾವಿ ಮೇ.29. ಸೋಮವಾರ ಆಟೋ ನಗರದ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್‌ ಪಂದ್ಯ ಮೂರೇ ದಿನಕ್ಕೆ ಮುಗಿದಿದೆ. ಭಾರತ “ಎ’ ಇನ್ನಿಂಗ್ಸ್‌ ಹಾಗೂ 205 ರನ್ನುಗಳ ಭರ್ಜರಿ ಜಯ ಸಾಧಿಸಿದೆ. ಭಾರತದ ಮಾರಕ ಬೌಲಿಂಗ್‌ಗೆ ತತ್ತರಿಸಿದ ಶ್ರೀಲಂಕಾ “ಎ’ ತಂಡದ ಆಟಗಾರರು ಪೆವಿಲಿಯನ್‌ ಹಾದಿ ಹಿಡಿದರು. ಮೂರನೇ ದಿನದಾಟದಲ್ಲಿ ಭಾರತ ಒಟ್ಟು 17 ವಿಕೆಟ್‌ಗಳನ್ನು ಕಬಳಿಸಿ ವಿಜಯದ ನಗೆ ಬೀರಿತು. ಮೊದಲ ಇನ್ನಿಂಗ್ಸ್‌ನಲ್ಲಿ

ಭಾರತ “ಎ’ ಮತ್ತು ಶ್ರೀಲಂಕಾ “ಎ’ ತಂಡಗಳ ನಡುವಿನ ಚತುರ್ದಿನ ಟೆಸ್ಟ್ ಪಂದ್ಯ ➤ಭಾರತ “ಎ’ ಇನ್ನಿಂಗ್ಸ್ ಜಯಭೇರಿ Read More »

ಕ್ರೀಡಾ ನ್ಯೂಸ್

ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬ0ಧ ಸ್ಪರ್ಧೆ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ- 2019 ರ ಪ್ರಯುಕ್ತ ಪ್ರಬ0ಧ ಸ್ಪರ್ಧೆ ಜೂನ್ 5 ರ0ದು ನಡೆಯಲಿದೆ ಕಾರ್ಯಕ್ರಮದ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿದ್ಯಾರ್ಥಿಗಳಿಗಾಗಿ ವಾಯು ಮಾಲಿನ್ಯ ವಿಷಯದ ಬಗ್ಗೆ ಪ್ರಬ0ಧ ಮತ್ತು ಕೊಲಾಜ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯು ಕಾಲೇಜು, ಪ್ರೌಢಶಾಲಾ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯಲಿವೆ. ವಿಜೇತರಿಗೆ ಬಹುಮಾನವನ್ನು ಹಾಗೂ ಒಂದು ವರ್ಷ ಜೈವಿಕ ಉದ್ಯಾನವನಕ್ಕೆ ಉಚಿತ ಪ್ರವೇಶ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ: ದೂರವಾಣಿ-0824-2263300, 919980187057

ಪಿಲಿಕುಳದಲ್ಲಿ ಜೈವಿಕ ಉದ್ಯಾನವನದಲ್ಲಿ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬ0ಧ ಸ್ಪರ್ಧೆ Read More »

ಕರಾವಳಿ

ವಿಶ್ವ ತಂಬಾಕು ರಹಿತ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ವತ್ರೆ, ಮಂಗಳೂರು, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ದಂತ ಆರೋಗ್ಯ ವಿಭಾಗ (ಎಮ್.ಸಿ.ಒ.ಎಸ್) ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ-2019

ವಿಶ್ವ ತಂಬಾಕು ರಹಿತ ದಿನಾಚರಣೆ Read More »

ಕರಾವಳಿ

2019ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29. 2019ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನದಲ್ಲಿ ಶೇ.60% – 74.99% ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.7,000/- ಗಳನ್ನು ಮತ್ತು ಶೇ.75% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15,000/- ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರ

2019ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಶಾಲೆ ಕಡೆ ನನ್ನ ನಡೆ ವಿಶೇಷ ದಾಖಲಾತಿ ಆಂದೋಲನ ಹೊಸ ಯೋಜನೆ ಜಾರಿ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಉಪನಿರ್ದೇಶಕರು(ಆಡಳಿತ), ಸಮಗ್ರ ಶಿಕ್ಷಣ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರವಲಯ ಪಡಿ ವೆಲೊರೆಡ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಹೊಸ ಯೋಜನೆ ಅರಂಭಗೊಂಡಿದೆ. ಶಾಲೆ ಕಡೆ ನನ್ನ ನಡೆ ಶಾಲೆಗೆ ಮರಳಲು ನನಗೊಂದು ಅವಕಾಶ ಎಂಬ ಘೋಷವಾಕ್ಯದಡಿ ವಿಶೇಷ ದಾಖಲಾತಿ ಆಂದೋಲನ 2019-20 ಇದರ ಜಿಲ್ಲಾ ಹಂತದ ಕಾರ್ಯಕ್ರಮವು

ಶಾಲೆ ಕಡೆ ನನ್ನ ನಡೆ ವಿಶೇಷ ದಾಖಲಾತಿ ಆಂದೋಲನ ಹೊಸ ಯೋಜನೆ ಜಾರಿ Read More »

ಕರಾವಳಿ

ಕರ್ನಾಟಕ ಕರಾವಳಿ ಮೀನುಗಾರಿಕಾ ಇಲಾಖೆಯಿಂದ ಮೀನುಗಾರಿಕೆ ಮಾಡದಂತೆ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 1986 ಅನ್ವಯ ಕರ್ನಾಟಕ ಸರ್ಕಾರವು ಅಧಿಸೂಚನೆ ಸಂಖ್ಯೆ: ಪಸಂಮೀ 63 ಮೀಇಯೋ 2014, ದಿನಾಂಕ: 13-05-2015 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ

ಕರ್ನಾಟಕ ಕರಾವಳಿ ಮೀನುಗಾರಿಕಾ ಇಲಾಖೆಯಿಂದ ಮೀನುಗಾರಿಕೆ ಮಾಡದಂತೆ ನಿಷೇಧಾಜ್ಞೆ ಜಾರಿ Read More »

ಕರಾವಳಿ

ದ.ಕ ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ➤ ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದಸಾರ್ವತ್ರಿಕ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಕರ್ನಾಟಕ ರಾಜ್ಯ ಚುನಾವಣಾ ಆಯೋಗವು 63 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಜಿಲ್ಲೆಯ ಮುಲ್ಕಿ, ಮೂಡಬಿದ್ರೆ, ಹಾಗೂ ಸುಳ್ಯ ಪ್ರದೇಶ ವ್ಯಾಪ್ತಿಯಲ್ಲಿ ಹಾಗೂ ಪುತ್ತೂರು ಹಾಗೂ ಮಂಗಳೂರು ತಾಲೂಕು ವ್ಯಾಪ್ತಿಯ ಗ್ರಾಮಪಂಚಾಯತಿಗಳಲ್ಲಿ ಚುನಾವಣೆ ದಿನಾಂಕ 29ರಂದು ನಡೆಯುತ್ತಿದ್ದು, ಈ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ

ದ.ಕ ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ➤ ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದಸಾರ್ವತ್ರಿಕ ರಜೆ ಘೋಷಣೆ Read More »

ಕರಾವಳಿ

ನರೇಂದ್ರ ಮೋದಿ ಪ್ರಭಾವಿ ನಾಯಕ ➤ ಹಾಡಿ ಹೊಗಳಿದ ಸೂಪರ್ಸ್ಟಾರ್ ರಜನಿಕಾಂತ್

(ನ್ಯೂಸ್ ಕಡಬ) newskadaba.com ಚೆನ್ನೈ , ಮೇ.28.ಸುದ್ದಿಗಾರರೊಂದಿಗೆ ಮಾತನಾಡಿದ ಸೂಪರ್‌ಸ್ಟಾರ್‌ ರಜನಿಕಾಂತ್‌, ಬಿಜೆಪಿ ನೇತೃತ್ವದ ಎನ್‌ಡಿಎಯ ಭರ್ಜರಿ ಗೆಲುವು ನಿಜವಾಗಿಯೂ ನರೇಂದ್ರ ಮೋದಿ ಅವರ ಗೆಲುವು. ಜವಹರ್ ಲಾಲ್ ನೆಹರು,ರಾಜೀವ್ ಗಾಂಧಿ ಬಳಿಕ ನರೇಂದ್ರ ಮೋದಿ ಭಾರತದ ಓರ್ವ ಪ್ರಭಾವಿ ನಾಯಕ ಎಂದು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಪ್ರಧಾನಿಯನ್ನುಹಾಡಿ ಹೊಗಳಿದ್ದಾರೆ. 2017 ರಲ್ಲಿ ರಜನಿಕಾಂತ್‌ ಅವರು ರಾಜಕೀಯ ಪ್ರವೇಶದ ಕುರಿತಾಗಿ ಘೋಷಿಸಿದ್ದರು. ಆದರೆ ಪ್ರಸಕ್ತ ಲೋಕಸಭಾ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಲು ಉತ್ಸಾಹ ತೋರಿರಲಿಲ್ಲ. ಯಾವೊಬ್ಬ ಅಭ್ಯರ್ಥಿಯು ತನ್ನ

ನರೇಂದ್ರ ಮೋದಿ ಪ್ರಭಾವಿ ನಾಯಕ ➤ ಹಾಡಿ ಹೊಗಳಿದ ಸೂಪರ್ಸ್ಟಾರ್ ರಜನಿಕಾಂತ್ Read More »

ರಾಷ್ಟ್ರೀಯ ನ್ಯೂಸ್
Scroll to Top