Mangalore

  ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾವತಿಯಿಂದ ಕಾನೂನು ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು, ಇವರ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

  ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾವತಿಯಿಂದ ಕಾನೂನು ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಒಳಚರಂಡಿ ಯೋಜನೆಗಳ ಕುರಿತು ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28. ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಯೋಜನೆಗಳ ಕುರಿತು ಮೇ 30 ರಂದು ಪೂರ್ವಾಹ್ನ 10 ಗಂಟೆಗೆ ವಾರ್ಡ್ ನಂ 26 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಅಶೋಕನಗರ ದೈವಜ್ಞ ಕಲ್ಯಾಣ ಮಂಟಪದ ಹತ್ತಿರ ಆಯೋಜಿಸಲಾಗಿದೆ. ಅಪರಾಹ್ನ 4 ಗಂಟೆಗೆ ವಾರ್ಡ್ ನಂ 27 ಮತ್ತು 28 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಬೊಕ್ಕಪಟ್ಟಣದಲ್ಲಿ ಕೆಯುಐಡಿಎಫ್ ಸಿ ಹಾಗೂ ಮಂಗಳೂರು ಮಹಾನಗರ

ಒಳಚರಂಡಿ ಯೋಜನೆಗಳ ಕುರಿತು ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ Read More »

ಕರಾವಳಿ

ಜಿಲ್ಲಾ ಆರೋಗ್ಯ ವತಿಯಿಂದ, ಮೆದುಳು ಜ್ವರದ ಬಗ್ಗೆ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಜಿಲ್ಲಾ ಆರೋಗ್ಯ ವತಿಯಿಂದ, ಮೆದುಳು ಜ್ವರದ (ಜಪನೀಸ್ ಎನ್ಸಫಲೈಟೀಸ್) ಬಗ್ಗೆ ವೈದ್ಯಕೀಯ ಮಹಾವಿದ್ಯಾಲಯಗಳ ಖಾಸಗಿ ಆಸ್ವತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಮತ್ತು ಮಕ್ಕಳ ತಜ್ಞರಿಗೆ ಒಂದು ದಿನದ ಕಾರ್ಯಾಗಾರ. ಮೇ 29 ರಂದು ಪೂವಾಹ್ನ 9 ಗಂಟೆಯಿಂದ ಕಾನ್ಪರೆನ್ಸ್ ಹಾಲ್, ಎರಡನೇ ಮಹಡಿ, ಏನಪೋಯ ಆಸ್ವತ್ರೆ, ಕೊಡಿಯಲ್ ಬೈಲ್ ಮಂಗಳೂರಿನಲ್ಲಿ ನಡೆಯಲಿದೆ. ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳು/ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಪ್ರಕಟನೆ

ಜಿಲ್ಲಾ ಆರೋಗ್ಯ ವತಿಯಿಂದ, ಮೆದುಳು ಜ್ವರದ ಬಗ್ಗೆ ಮಾಹಿತಿ ಕಾರ್ಯಗಾರ Read More »

ಕರಾವಳಿ

ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಲು ಮಹಿಳಾ ಕಲಾ ತಂಡಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ತಂಡದಲ್ಲಿ ಪರಿಶಿಷ್ಟ ಜಾತಿ ಅಥವಾ

ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅತಿಸಾರ ಭೇದಿ ತಡೆ ➤ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ ಜಿಲ್ಲೆಯಲ್ಲಿ ಜೂನ್ 3 ರಿಂದ 17ರವರೆಗೆ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಆರ್. ವಂಕಟಾಚಲಪತಿ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅತಿಸಾರ ಭೇದಿ ನಿಯಂತ್ರಣ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿಸಾರ ಭೇದಿಯಿಂದ ಸಂಭವಿಸಿದ ದುರಂತಗಳ ಮಾಹಿತಿ ಪಡೆದರು. ಕಾರ್ಯಕ್ರಮಗಳ ಆಯೋಜನೆಯ ಉದ್ದೇಶ

ಅತಿಸಾರ ಭೇದಿ ತಡೆ ➤ ಪೂರ್ವಭಾವಿ ಸಭೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ➤ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು. ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ➤ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ Read More »

ಕರಾವಳಿ

ಪಣಂಬೂರ್ ಬೀಚ್ ಕಿಕ್ಕಿರಿದ ಪ್ರವಾಸಿಗರು ➤ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಮಂದಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ರವಿವಾರ ಪಣಂಬೂರ್‌ ಬೀಚ್‌ಗೆ ಸುಮಾರು 20,000ಕ್ಕೂ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದಾರೆ.ಶಾಲಾ ವಿದ್ಯಾರ್ಥಿಗಳಿಗೆ ಇನ್ನೇನು ರಜೆ ಕೊನೆಗೊಳ್ಳುತ್ತಿದ್ದು, ವಿವಿಧ ಜಿಲ್ಲೆ, ರಾಜ್ಯಗಳಿಂದ ಬೀಚ್‌ಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆ ಬಂದರೂ, ಬೇಸಗೆಯ ಸೆಕೆ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ನಗರದ ಬೀಚ್‌ಗಳಿಗೆ ಆಗಮಿಸುವ ಮಂದಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ.ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಮಳೆ ಬಾರದ ಕಾರಣಕ್ಕೆ ಸಮುದ್ರ ಕೂಡ ಶಾಂತವಾಗಿದೆ. ಇದರಿಂದಾಗಿ ಹೆಚ್ಚಿನ ಮಂದಿ ಪ್ರವಾಸಿಗರು ನೀರಿನಲ್ಲಿಆಡಲು ಇಷ್ಟಪಡುತ್ತಿದ್ದಾರೆ.

ಪಣಂಬೂರ್ ಬೀಚ್ ಕಿಕ್ಕಿರಿದ ಪ್ರವಾಸಿಗರು ➤ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಮಂದಿ..! Read More »

ಕರಾವಳಿ

ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿತ ➤ಮೂವರು ಕಾರ್ಮಿಕರ ದುರ್ಮರಣ

  (ನ್ಯೂಸ್ ಕಡಬ) newskadaba.com ಬೆಳಗಾವಿ, ಮೇ.27. ಸೋಮವಾರ ತಾಲೂಕಿನ ದೇಸೂರು ಬಳಿ  ರಸ್ತೆ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಖಾನಾಪುರ-ಬೆಳಗಾವಿ ರಸ್ತೆ ಕಾಮಗಾರಿ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕರಾದ ದುರ್ಗೆಶ್ ಕುಮಾರ್(22ವರ್ಷ), ಅರ್ಜುನ್ ಸಿಂಗ್ (21ವರ್ಷ), ಸುಖಾನ್ ಎಂದು ಗುರುತಿಸಲಾಗಿದೆ.ಸುಖಾನ್ ಎಂಬ ಕಾರ್ಮಿಕನನ್ನು ಜೆಸಿಬಿ ಮೂಲಕ ಮಣ್ಣು ಅಗೆದು ಶವವನ್ನು ಹೊರತೆಗೆಯಲಾಯಿತು ಎಂದು ವರದಿ ತಿಳಿಸಿದೆ.

ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿತ ➤ಮೂವರು ಕಾರ್ಮಿಕರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.27. ಪಾಶ್ಚಾತ್ಯ ಆಹಾರಗಳಿಗೆ ಮಾರುಹೊಗಿ ಭಾರತೀಯ ಆಹಾರ ಸಂಸ್ಕೃತಿಯನ್ನು ಜನ ಮರೆತಿರುವುದು ವಿಷಾದ‌ನೀಯ.ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ವತಿಯಿಂದ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ರವಿವಾರ ಸಿರಿಧಾನ್ಯ ಕೆಫೆ ಉದ್ಘಾಟಿಸಿ ಈ ಭಾರತೀಯ ಅಹಾರ ಪದ್ದತಿಯನ್ನು ಉಳಿಸುವ ಸಲುವಾಗಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಮರೆಯಾದ ನಮ್ಮ ಪಾರಂಪರಿಕ ಆಹಾರ ಪದ್ಧತಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಟ್ರಸ್ಟಿ ಶ್ರದ್ಧಾ

ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ Read More »

ಕರಾವಳಿ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ

  (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.27.  ಜೂ.1ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.ಈ ಮಧ್ಯೆ, ಲೋಕಸಭಾ ಚುನಾವಣೆ ಫ‌ಲಿತಾಂಶದ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಿಲುವು ಆಧರಿಸಿ ಮುಂದಿನ ಹೆಜ್ಜೆ ಇಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದರೂ ಕಾಂಗ್ರೆಸ್‌ ಶಾಸಕರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂ ಹಲ ಮೂಡಿಸಿದೆ. ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸಮಾರಂಭ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು, ಪ್ರಸಕ್ತ ವಿದ್ಯಮಾನಗಳ ಬಗ್ಗೆ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ Read More »

ರಾಷ್ಟ್ರೀಯ ನ್ಯೂಸ್
Scroll to Top