ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕಾರ್ಖಾನೆಗಳಿದ್ದು, ಬಹಳ ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ವ್ಯವಸ್ಥಾಪಕರು ವಾಹನ ವ್ಯವಸ್ಥೆ ಮಾಡಿದ್ದಾರೆಯೇ? ಅಥವಾ ಇವರಿಗೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ, ಇಲ್ಲದಿದ್ದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಯೋಜಿಸುವಂತೆ ಬೆಂಗಳೂರು, ಕಾರ್ಮಿಕ ಇಲಾಖೆಯ ಆಯುಕ್ತ ಪಾಲಯ್ಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸರಕು ಸಾಗಾಣಿಕೆ ವಾಹನಗಳಲ್ಲಿ ಮಾನವ ಸಾಗಾಣಿಕೆ ತಡೆ ಕುರಿತ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. […]




