Mangalore

ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17.‌ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 18 ಸೋಮವಾರದಂದು ರಾತ್ರಿ ಕರಾವಳಿಗೆ ಆಗಮಿಸಲಿದ್ದಾರೆ. ಸೋಮವಾರ ರಾತ್ರಿ 7.00 ಗಂಟೆಗೆ ವಿಶೇಷ ವಿಮಾನದ ಮೂಲಕ ಬಜಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ‌. ಡಿಸೆಂಬರ್ 19 ಮಂಗಳವಾರದಂದು ವಿಶೇಷ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ Read More »

ರಾಷ್ಟ್ರೀಯ ನ್ಯೂಸ್

?ಎಚ್‌ಐವಿ/ಏಡ್ಸ್ ಪ್ರಕರಣ ► ದಕ್ಷಿಣ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ,11. ಎಚ್‌ಐವಿ ಪೀಡಿತ ರೋಗಿಗಳ ಸಂಖ್ಯೆ ಈ ವರ್ಷ ಶೇ 50 ರಷ್ಟು ಕಡಿಮೆಯಾಗಿದ್ದು, ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದೆ ಎಂದು ಏಡ್ಸ್‌ ನಿಯಂತ್ರಣ ಅಧಿಕಾರಿ ಡಾ. ಬದ್ರುದ್ದೀನ್‌ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಾಗಲಕೋಟೆ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಎಂದರು. ವರ್ಷದಿಂದ ವರ್ಷಕ್ಕೆ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ವರ್ಷ ಜನವರಿಯಿಂದ ಅಕ್ಟೋಬರ್‌ವರೆಗೆ ಒಟ್ಟು 512 ಜನರಲ್ಲಿ ರೋಗ ಪತ್ತೆಯಾಗಿದೆ ಎಂದ

?ಎಚ್‌ಐವಿ/ಏಡ್ಸ್ ಪ್ರಕರಣ ► ದಕ್ಷಿಣ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ Read More »

ಕರಾವಳಿ

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.10. ಮರವೂರು ವೆಟೆಂಡ್ ಡ್ಯಾಂ ಬಳಿಯ ರಸ್ತೆಯಲ್ಲಿ ಮಹಿಳೆಯೋರ್ವರು ಅತೀ ವೇಗದಲ್ಲಿ ಚಲಾಯಿಸುತ್ತಿದ್ದ ಕಾರೊಂದು ನದಿಗೆ ಬಿದ್ದ ಘಟನೆ ಭಾನುವಾರದಂದು ನಡೆದಿದೆ. ಘಟನೆಯಲ್ಲಿ ಎಜೆ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ವಿದ್ಯಾರ್ಥಿನಿ ಪ್ರತೀಕ್ಷಾ ಮತ್ತು ಬಜಪೆ ಕೊಳಂಬೆ ನಿವಾಸಿ ನಿಶಾ ಆಚಾರ್ಯ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಉರುಳುವುದನ್ನು ಕಂಡ ಸ್ಥಳೀಯರು ನದಿಯಿಂದ ಯುವತಿಯರನ್ನು ಮೇಲಕ್ಕೆತ್ತಿ ಪಾರು ಮಾಡಿದ್ದಾರೆ.

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು Read More »

ಕರಾವಳಿ

ಮಂಗಳೂರು: ಅಂಬೇಡ್ಕರ್ ಪರಿ ನಿರ್ವಹಣಾ ದಿನಾಚರಣೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆ ► ಜಿ.ಪಂ. ಅಧ್ಯಕ್ಷರನ್ನೇ ಬಿಟ್ಟು ತುರ್ತಾಗಿ ಕಾರ್ಯಕ್ರಮ ಮುಗಿಸಿದ ಸಮಾಜ ಕಲ್ಯಾಣ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.07. ಸಮಾಜ ಕಲ್ಯಾಣ ಇಲಾಖೆಯ ವತಿಯಂದ ಡಿಸೆಂಬರ್ 06 ಬುಧವಾರದಂದು ನಡೆದ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ರವರ ಪರಿ ನಿರ್ವಹಣಾ ದಿನದ ಪ್ರಯುಕ್ತ ಮಂಗಳೂರಿನ ಪುರಭವನದ ಎದುರುಗಡೆ ಇರುವ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಆರೋಪಿಸಿದ್ದಾರೆ. ಕಾರ್ಯಕ್ರಮವು ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ಜರಗಲಿರುವುದಾಗಿ ಇಲಾಖೆಯ ಅಧಿಕಾರಿಯವರು ತಿಳಿಸಿದ್ದು, ಅದರಂತೆ ನಾನು 10.00 ಗಂಟೆಗೆ ಕಾರ್ಯಕ್ರಮಕ್ಕೆ

ಮಂಗಳೂರು: ಅಂಬೇಡ್ಕರ್ ಪರಿ ನಿರ್ವಹಣಾ ದಿನಾಚರಣೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆ ► ಜಿ.ಪಂ. ಅಧ್ಯಕ್ಷರನ್ನೇ ಬಿಟ್ಟು ತುರ್ತಾಗಿ ಕಾರ್ಯಕ್ರಮ ಮುಗಿಸಿದ ಸಮಾಜ ಕಲ್ಯಾಣ ಇಲಾಖೆ Read More »

ಕರಾವಳಿ

‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.02. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ‘ಓಖೀ’ ಚಂಡಮಾರುತದ ಎಫೆಕ್ಟ್ ಕರಾವಳಿ ಭಾಗದಲ್ಲಿ ಕಾಣತೊಡಗಿದ್ದು, ಸಮುದ್ರದ ಭೋರ್ಗರೆತ ಹೆಚ್ಚಾಗುತ್ತಿದೆ. ಉಳ್ಳಾಲ – ಸೋಮೇಶ್ವರದಲ್ಲಿ ರಸ್ತೆಗೆ ಅಪ್ಪಳಿಸಿದ ಸಮುದ್ರದ ಅಲೆಗಳಿಂದಾಗಿ ರೆಸಾರ್ಟ್ ನ ತಡೆಗೋಡೆ ಕುಸಿದಿದ್ದು, ಅಲೆಯ ಅಬ್ಬರಕ್ಕೆ ರೆಸಾರ್ಟ್ ನಲ್ಲಿದ್ದ ಜನ ದಿಕ್ಕುಪಾಲಾಗಿ ಓಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಪರಿಸರದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಘೋಷಿಸಿದ್ದಾರೆ. ಉಚ್ಚಿಲದಲ್ಲಿ ಮನೆಗೆ‌ ಸಮುದ್ರದ ನೀರು ಬಂದಿದೆ. ಇನ್ನುಳಿದಂತೆ ಪಣಂಬೂರು, ಪಡುಬಿದ್ರಿ, ಕಾಪು,

‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು Read More »

ಕರಾವಳಿ

‘ಓಖೀ’ ಚಂಡಮಾರುತಕ್ಕೆ ತುತ್ತಾದ ಹಲವರು ಸಂಕಷ್ಟದಲ್ಲಿ ► ಮಂಗಳೂರಿನಿಂದ ಹೊರಟಿದ್ದ ಎರಡು ಹಡಗುಗಳು ಮುಳುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಮಂಗಳೂರಿನಿಂದ ಲಕ್ಷ ದ್ವೀಪಕ್ಕೆ ಹೊರಟಿದ್ದ ಸರಕು ಸಾಗಾಟದ ಎರಡು ಹಡಗುಗಳ ಪೈಕಿ ಒಂದು ಸಣ್ಣ ಹಡಗು ಅರಬ್ಬಿ ಸಮುದ್ರದಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು, ಇನ್ನೊಂದು ಭಾಗಶಃ ಮುಳುಗಡೆಯಾಗಿದ ಘಟನೆ ಶುಕ್ರವಾರದಂದು ನಡೆದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಓಖೀ ಚಂಡಮಾರುತದಿಂದಾಗಿ ಇದೀಗ ಕರವತ್ತಿ ದ್ವೀಪದಲ್ಲಿ ಸಂಚರಿಸುತ್ತಿದ್ದ ಸರಕು ಸಾಗಾಟದ ಹಡಗುಗಳು ಮುಳುಗಡೆಯಾಗಿವೆ‌. ಘಟನೆಯಲ್ಲಿ ಎರಡೂ ಹಡಗುಗಳಲ್ಲಿರುವ ಸುಮಾರು 15 ಮಂದಿ ಅಪಾಯದಲ್ಲಿದ್ದು, ಐವರನ್ನು ರಕ್ಷಿಸಲಾಗಿದೆ. ಮುಳುಗಡೆಗೊಂಡಿರುವ ಹಡಗಿನಲ್ಲಿದ್ದ ಸಿಬ್ಬಂದಿಗಳ ಪೈಕಿ

‘ಓಖೀ’ ಚಂಡಮಾರುತಕ್ಕೆ ತುತ್ತಾದ ಹಲವರು ಸಂಕಷ್ಟದಲ್ಲಿ ► ಮಂಗಳೂರಿನಿಂದ ಹೊರಟಿದ್ದ ಎರಡು ಹಡಗುಗಳು ಮುಳುಗಡೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಪೊಲೀಸ್ ಬಸ್ – ಲಾರಿ‌ ಢಿಕ್ಕಿ ► ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಪೊಲೀಸ್ ಬಸ್ ಹಾಗೂ ಮೀನು ಸಾಗಾಟ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಗರದ ಪಂಪುವೆಲ್ ಬಳಿ ನಡೆದಿದೆ. ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಬರುತ್ತಿದ್ದ ಪೊಲೀಸ್ ಬಸ್ ಹಾಗೂ ಮಂಗಳೂರಿನಿಂದ ಕೇರಳ ಕಡೆ ತೆರಳುತ್ತಿದ್ದ ಮೀನಿನ ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಪೊಲೀಸ್ ಬಸ್ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ

ಮಂಗಳೂರು: ಪೊಲೀಸ್ ಬಸ್ – ಲಾರಿ‌ ಢಿಕ್ಕಿ ► ನಾಲ್ವರು ಗಂಭೀರ Read More »

ಕರಾವಳಿ

ಮಂಗಳೂರು: ಅಕ್ರಮವಾಗಿ ಮಾದಕ ಔಷಧ ಮಾರುತ್ತಿದ್ದ ಮೆಡಿಕಲ್ ಸೆಂಟರ್ ► ಕೇಂದ್ರ ರೌಡಿ ನಿಗ್ರಹ ದಳದಿಂದ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ.25. ಅಕ್ರಮವಾಗಿ ಮಾದಕ ಔಷಧವನ್ನು ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ನಗರದ ಕೇಂದ್ರ ರೌಡಿ ನಿಗ್ರಹ ದಳದ ಪೊಲೀಸರು ಮಾಧಕ ಔಷಧಿಯನ್ನು ವಶಪಡಿಸಿಕೊಂಡ ಘಟನೆ ಶನಿವಾರದಂದು ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಯೆಯ್ಯಾಡಿ ಜಂಕ್ಷನ್ ನಲ್ಲಿರುವ ಪ್ರಜ್ವಲ್ ಮೆಡಿಕಲ್ಸ್ ನಲ್ಲಿ ‌ಯಾವುದೇ ಪರವಾನಿಗೆ ಇಲ್ಲದೆ ಮತ್ತು ಕಾನೂನು ಬಾಹಿರವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ NITROSUN ಎಂಬ ಮಾಧಕ ಔಷಧವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರದ ಕೇಂದ್ರ ರೌಡಿ

ಮಂಗಳೂರು: ಅಕ್ರಮವಾಗಿ ಮಾದಕ ಔಷಧ ಮಾರುತ್ತಿದ್ದ ಮೆಡಿಕಲ್ ಸೆಂಟರ್ ► ಕೇಂದ್ರ ರೌಡಿ ನಿಗ್ರಹ ದಳದಿಂದ ದಿಢೀರ್ ದಾಳಿ Read More »

ಕರಾವಳಿ

ಕ್ರೀಂ ಪಾರ್ಲರ್ ನಲ್ಲಿ ನಡೆಯಿತು ಪ್ರೇಮಿಗಳ ಲವ್ವಿಡವ್ವಿ ► ವೈರಲಾಯ್ತು ಮಂಗಳೂರು ಜೋಡಿಯ ಕಿಸ್ಸಿಂಗ್ ಸೀನ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.21. ನಗರದ ಕ್ರೀಂ ಪಾರ್ಲರ್ ಒಂದರಲ್ಲಿ ಯುವಕನೊಬ್ಬ ಕಾಲೇಜು ಯುವತಿಗೆ ಮುತ್ತಿಟ್ಟ ದೃಶ್ಯದ ವಿಡಿಯೋವೊಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಕೂತಿದ್ದು, ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಮುತ್ತಿಡುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಮೇಲ್ನೋಟಕ್ಕೆ ಇವರಿಬ್ಬರು ಪ್ರೇಮಿಗಳಂತೆ ಕಂಡುಬರುತ್ತಿದ್ದು, ಯುವತಿ ಕಾಲೇಜಿನ ಸಮವಸ್ತ್ರ ಧರಿಸಿದ್ದು, ಯಾವ ಕಾಲೇಜಿನ ವಿದ್ಯಾರ್ಥಿನಿ ಎನ್ನುವುದು ಬಹಿರಂಗವಾಗಿಲ್ಲ. ವೀಡಿಯೋದಲ್ಲಿ ವಿದ್ಯಾರ್ಥಿನಿಯ ಮುಖಚಹರೆ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಮಂಗಳೂರಿನ ಯಾವುದೋ ಕ್ರೀಂ ಪಾರ್ಲರ್

ಕ್ರೀಂ ಪಾರ್ಲರ್ ನಲ್ಲಿ ನಡೆಯಿತು ಪ್ರೇಮಿಗಳ ಲವ್ವಿಡವ್ವಿ ► ವೈರಲಾಯ್ತು ಮಂಗಳೂರು ಜೋಡಿಯ ಕಿಸ್ಸಿಂಗ್ ಸೀನ್ Read More »

ಕರಾವಳಿ

ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ ► ಭಾರತದ ವಿಜ್ಞಾನಿಗಳಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ‌ನ.20. ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ. ಮಂಗಳೂರು ಸುರಕ್ಷಿತವಾಗಿದ್ದು, ಮಂಗಳೂರಿಗೆ ನೈಸರ್ಗಿಕವಾಗಿ ಯಾವುದೇ ಅಪಾಯವಿರುವುದಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ. ಸಿ.ಎನ್. ಪ್ರಭು ಹಾಗೂ ಭಾರತೀಯ ಹವಾಮಾನ ಇಲಾಖೆಯ ಮಾಜಿ ನಿರ್ದೇಶಕ, ವಿಜ್ಞಾನಿ ಬಿ.ಪುಟ್ಟಣ್ಣ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾದುದರಿಂದ ಮಂಗಳೂರು ಮುಳುಗಡೆಯಾಗುತ್ತದೆ‌ ಎಂಬ ವದಂತಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆ ವಿಜಯ ಕರ್ನಾಟಕ

ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ ► ಭಾರತದ ವಿಜ್ಞಾನಿಗಳಿಂದ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್
Scroll to Top