Mangalore

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16. 2018 ರ ಜನವರಿ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್ ಗಳನ್ನು ತೆಗೆಯಲಾಗುವುದು ಎಂದು ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ.ಜಿಲ್ಲೆಯಲ್ಲಿ 10 ಹೊಸ ಕ್ಯಾಂಟೀನ್ ಗಳು ಆರಂಭವಾಗಲಿದ್ದು, ಅದರಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ತಲಾ […]

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..? Read More »

ಕರಾವಳಿ

ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15. ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳು ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವಷ್ಟೇ ಅಪರಾಧ ಅವರಿಗೆ ವಾಹನ ಕೊಡುವ ಪೋಷಕರದ್ದಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಬಿ ಸಿ ರೋಡಿನ ರೋಟರಿ ಭವನದಲ್ಲಿ ಶನಿವಾರ ಸಂಜೆ ಕಾಲೇಜು ಮುಖ್ಯಸ್ಥರಿಗೆ ನಡೆದ ಸಭೆಯಲ್ಲಿ ಮಾತನಾಡಿ, ಕೆಲವು ಅಪ್ರಾಪ್ತ ಬಾಲಕರು ಎಲ್ಲೆಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿ

ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಮಹಾಮಳೆಯಿಂದಾಗಿ ಸಾವು-ನೋವು ಸಂಭವಿಸಿದ ಬೆಂಗಳೂರಿನ ಕೆಲವು ಸ್ಥಳಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಭೇಟಿ ನೀಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡಿದರು. ಇನ್ನು ಪ್ರತ್ಯೇಕವಾಗಿ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಸದಾನಂದಗೌಡರು ಲಗ್ಗೆರೆಯಲ್ಲಿ ಕೊಚ್ಚಿ ಹೋದ ಮೃತ ದಂಪತಿ ಮತ್ತು ಅರ್ಚಕ ವಾಸುದೇವ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ Read More »

ಕರ್ನಾಟಕ

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕಡಬ,ಅ12. ಅಪರಿಚಿತ ವ್ಯಕ್ತಿಯೊರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಉಳ್ಳಾಲ ಸಮೀಪ  ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿ ತನ್ನ ವಾಚು, ಚಪ್ಪಲಿ, ಕನ್ನಡಕ, ನೇತ್ರಾವತಿ ಸೇತುವೆಯ ಮೇಲಿಟ್ಟು ನದಿಗೆ ಹಾರಿದ್ದಾನೆ. ದಾರಿಯಲ್ಲಿ ಸಾಗುವ ವಾಹನ ಚಾಲಕರು ವ್ಯಕ್ತಿಯನ್ನು ತಡೆಯಲು ಮುಂದಾಗುತ್ತಿದ್ದಂತೆ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಠಾಣೆಗೆ ಮಾಹಿತಿ ನೀಡಲಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ► ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ರದ್ದು.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. 2014ರ ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಹಾಕಲಾಗಿದ್ದ ಎಫ್ಐಆರ್ ಅನ್ನು  ಹೈಕೋರ್ಟ್ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ರದ್ದುಗೊಳಿಸಿದೆ. ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ  ಜೆಎಂಎಫ್ ಸಿ ನ್ಯಾಯಾಲಯದಲ್ಲಿ  ಸದಾನಂದ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಚುನಾವಣೆ ಪ್ರಚಾರ ಅವಧಿ ಮುಗಿದ ಮೇಲೂ ಪ್ರಚಾರ ಮಾಡಿದರು ಎಂದು ಆರೋಪಿಸಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್

ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ► ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ರದ್ದು.!! Read More »

ಕರಾವಳಿ

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.12. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ  ಉಚಿತ ವೈದ್ಯಕೀಯ ಶಿಬಿರವು ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ  ಇತ್ತೀಚೆಗೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯವನ್ನು ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ Read More »

ಕರಾವಳಿ
Scroll to Top