Mangalore

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23, ವಿದ್ಯಾರ್ಥಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆಪ್ಟಂಬರ್ 24ರಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, […]

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ Read More »

ವಿಶೇಷ ಲೇಖನಗಳು

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.23. ಇತ್ತೀಚೆಗೆ ನಡೆದ ಮೂಡುಬಿದಿರೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾಳ ಆತ್ಯಹತ್ಯೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿಯ ವತಿಯಿಂದ ಶನಿವಾರ ಅರೆಬೆತ್ತಲೆ ಮೆರವಣಿಗೆಯ ನಡೆಯಿತು. ನಗರದ ಹಂಪನಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎ.ಬಿ.ಶೆಟ್ಟಿ ವೃತ್ತದ ಬಳಿ ಅರೆಬೆತ್ತಲೆ ಮೆರವಣಿಗೆಗೆ ಯತ್ನಿಸಿದ ಕೆಲವರ ಸಹಿತ ಕಾವ್ಯಾಳ ಪೋಷಕರಾದ ಲೋಕೇಶ್ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ರಮ್ಯಾ, ಕರವೇ ಜಿಲ್ಲಾಧ್ಯಕ್ಷ ಅನಿಲ್‌ರಾಜ್ ಸೇರಿದಂತೆ

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ Read More »

ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.23. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿಯಾಗಿ ತಯಾರಾಗಿದೆ. ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಉದ್ಧೇಶದಿಂದ ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ಶನಿವಾರ ನೀಡಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!! Read More »

ಕರಾವಳಿ

ಉಡುಪಿ: ಹೋರಿಯನ್ನು ತಲ್ವಾರಿನಿಂದ ಕಡಿದ ದುಷ್ಕರ್ಮಿಗಳು ► ಚಿಂತಾಜನಕ ಸ್ಥಿತಿಯಲ್ಲಿದ್ದ ಮೂಕ ಪ್ರಾಣಿ ಗೋಶಾಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ಅಕ್ರಮ ಕಸಾಯಿಖಾನೆಗೆ ಸಾಗಿಸಲೆಂದು ಹೋರಿಯೊಂದನ್ನು ಟೆಂಪೋದೊಳಗೆ ತುಂಬಿಸುವಾಗ ಒದ್ದಾಡಿದ ಕಾರಣಕ್ಕಾಗಿ ತಲವಾರಿನಿಂದ ಕಡಿದು ತೀವ್ರ ಗಾಯಗೊಳಿಸಿದ ನೀಚ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂ.ಐ.ಸಿ ಬಳಿ ಹೋರಿಯೊಂದು ಮಾರಕಾಯುಧಗಳಿಂದ ಕಡಿದ ರೀತಿಯಲ್ಲಿ ತೀವ್ರ ಸ್ವರೂಪದ ಗಾಯಗಳೊಂದಿಗೆ ಅಸ್ವಸ್ಥ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದನ್ನು ಕಂಡು ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಪರಿಸರದ ನಿವಾಸಿಗಳು ಹೋರಿಗೆ ಔಷಧೋಪಚಾರ ಮಾಡಿದ್ದಾರೆ. ಆದರೆ ಹೋರಿಯು ಚಿಂತಾಜನಕ ಸ್ಥಿತಿಗೆ ತಲುಪಿದಾಗ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ

ಉಡುಪಿ: ಹೋರಿಯನ್ನು ತಲ್ವಾರಿನಿಂದ ಕಡಿದ ದುಷ್ಕರ್ಮಿಗಳು ► ಚಿಂತಾಜನಕ ಸ್ಥಿತಿಯಲ್ಲಿದ್ದ ಮೂಕ ಪ್ರಾಣಿ ಗೋಶಾಲೆಗೆ Read More »

ಕರಾವಳಿ

ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ”ಕಿಸ್ಸಿಂಗ್” ಸೀನ್..!!! ► ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.22. ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನ ಕಾರ್ಯಕ್ರಮ ಒಂದರಲ್ಲಿ ಇಬ್ಬರು ಕಲಾವಿದರು ಚುಂಬಿಸಿದ ದೃಶ್ಯ ಈಗ ವಿವಾದಕ್ಕೆ ಕಾರಣವಾಗಿದೆ. ಬಂಟ್ವಾಳ ತಾಲೂಕಿನ ವಗೆನಾಡು ಸುಬ್ರಾಯ ದೇವಸ್ಥಾನದಲ್ಲಿ ಕಳೆದ ಸೆ.16 ರಂದು ಯಕ್ಷಗಾನ ವೈಭವ ನಡೆದಿತ್ತು. ತೆಂಕುತಿಟ್ಟಿನ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಈ ಯಕ್ಷಗಾನ ನಾಟ್ಯ ವೈಭವಕ್ಕೆ ಭಾಗವತರಾಗಿದ್ದರು. ಈಗ ಶೃಂಗಾರ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ಕರಾವಳಿಯ ಹೆಮ್ಮೆಯ  ಸಂಸ್ಕೃತಿ  ಅಂತಾನೆ  ಕರೆಯಲ್ಪಡುವ

ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ”ಕಿಸ್ಸಿಂಗ್” ಸೀನ್..!!! ► ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!!! Read More »

ಕರಾವಳಿ

ಆಧಾರ್ ಜೋಡಣೆ ► ಡೆಡ್ ಲೈನ್ ಯಾವಾಗ ಗೊತ್ತೆ…???

(ನ್ಯೂಸ್ ಕಡಬ) newskadaba.com ಕಡಬ, ಸೆ.20, ಕೇಂದ್ರ ಸರ್ಕಾರ ಈಗಾಗಲೆ ಬ್ಯಾಂಕ್, ಪಾನ್ ಕಾರ್ಡ್, ಮೊಬೈಲ್ ಸಂಖ್ಯೆ, ಸಾಮಾಜಿಕ ಭದ್ರತಾ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಹೀಗಾಗಿ ಇಲ್ಲಿ ಯಾವೆಲ್ಲ ಯೋಜನೆಗಳಿಗೆ ಕಡ್ಡಾಯ ಮಾಡಿದೆ ಮತ್ತು ಆಧಾರ್ ನಂಬರ್ ಜೋಡಿಸಲು ನೀಡಿರುವ ಕೊನೆಯ ದಿನಾಂಕ ಯಾವುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪಾನ್ ಲಿಂಕ್: ಕೇಂದ್ರಿಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಈ ಹಿಂದೆ ಪಾನ್ ಗೆ ಆಧಾರ್ ಲಿಂಕ್ ಮಾಡಲು ಆಗಸ್ಟ್ 31 ರಂದು ಕೊನೆಯ ದಿನಾಂಕವನ್ನು ನೀಡಿತ್ತು.

ಆಧಾರ್ ಜೋಡಣೆ ► ಡೆಡ್ ಲೈನ್ ಯಾವಾಗ ಗೊತ್ತೆ…??? Read More »

ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೊಬೈಲ್ ಬಾಂಬ್…! ► ಟಿವಿ ಚಾನೆಲ್‌ಗಳಲ್ಲಿ ಸಿಡಿದ ಸುಳ್ಳು ಸುದ್ದಿಯ ಬಾಂಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ‘ಮೊಬೈಲ್ ಬಾಂಬ್’ ಹೊಂದಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂಬ ಸುಳ್ಳು ವದಂತಿ ವಾಟ್ಸ್ಆ್ಯಪ್ ಹಾಗು ಕೆಲವು ಸುದ್ದಿ ವಾಹಿನಿಗಳಲ್ಲಿ ಹರಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲು ಬಂದಿದ್ದ ವ್ಯಕ್ತಿಯ ಬಳಿ ಇದ್ದ ಪವರ್ ಬ್ಯಾಂಕ್ ಬಗ್ಗೆ ಗೊಂದಲ ಮೂಡಿತ್ತು. ಆದರೆ ವಿಷಯ ಏನೆಂದು ಸ್ಪಷ್ಟವಾಗುವ ಮೊದಲೇ ತೀರ್ಮಾನಕ್ಕೆ ಬಂದಿದ್ದ ಕೆಲವು ದೃಶ್ಯ ಮಾಧ್ಯಮಗಳು “ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ”

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೊಬೈಲ್ ಬಾಂಬ್…! ► ಟಿವಿ ಚಾನೆಲ್‌ಗಳಲ್ಲಿ ಸಿಡಿದ ಸುಳ್ಳು ಸುದ್ದಿಯ ಬಾಂಬ್ Read More »

ಕರಾವಳಿ

ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19, ‘ಮುಂದಿನ ನವರಾತ್ರಿ, ಉತ್ಸವವನ್ನು ನಾನು ನೋಡುತ್ತೇನೋ ಇಲ್ಲವೊ ಗೊತ್ತಿಲ್ಲ. ಬಹುಶಃ ಈ ಬಾರಿಯ ದಸರಾ ನನ್ನ ಕೊನೆಯ ಆಚರಣೆ ಆದರೂ ಅಚ್ಚರಿ ಇಲ್ಲ. ಇದು ನನ್ನ ಕೊನೇ ಸುದ್ದಿಗೋಷ್ಠಿ ಇದ್ದರೂ ಇರಬಹುದು’ ಎಂದು ವಿಷಾದಭರಿತ ಮಾತುಗಳನ್ನಾಡಿದವರು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ. ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ದಸರಾ ಆಚರಣೆ ಕುರಿತು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿ ವಿಷಾದದ ಮಾತನ್ನು ನುಡಿದು ಕೊನೆಗೆ ಮೌನಕ್ಕೆ ಜಾರಿದರು.

ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ Read More »

ಕರಾವಳಿ

ಮಂಗಳೂರು ಜೈಲಿಗೆ ಡಿಸಿಪಿ ನೇತೃತ್ವದಲ್ಲಿ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿರುವ ಡಿಸಿಪಿ ಹನುಮಂತರಾಯ ಹಾಗೂ ಸಿಬ್ಬಂದಿಗಳ ತಂಡ 2 ಮೊಬೈಲ್ ಗಳು, ಗಾಂಜಾ ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲ್ ನಿಂದ ತಯಾರಿಸಿದ ಹುಕ್ಕಾ ರೀತಿಯ ವಸ್ತು, ಪಂಚ್, ರಾಡ್ ವಶಪಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಸುಮಾರು 6.30 ರಿಂದ 7.30 ರ ನಡುವೆ ಡಿಸಿಪಿ ಹನುಮಂತರಾಯರ ನೇತೃತ್ವದಲ್ಲಿ ದ.ಕ. ಜಿಲ್ಲೆಯ 50 ಮಂದಿ ಅಧಿಕಾರಿಗಳು, 129 ಮಂದಿ ಸಿಬ್ಬಂದಿಯೊಂದಿಗೆ ಈ ದಾಳಿ ನಡೆಸಲಾಗಿತ್ತು. ಜೈಲಿಗೆ

ಮಂಗಳೂರು ಜೈಲಿಗೆ ಡಿಸಿಪಿ ನೇತೃತ್ವದಲ್ಲಿ ದಾಳಿ Read More »

ಕರಾವಳಿ

ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18, ಮಾಜಿ ಸಚಿವ ಖಮರುಲ್‌ ಇಸ್ಲಾಂ(69) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. 1974ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ ಇವರು ಕಲುಬುರಗಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, 3 ಬಾರಿ ಮುಸ್ಲಿಂ ಲೀಗ್‌ನಿಂದ ಹಾಗೂ 3 ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು.  ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ ಅವರನ್ನು ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಡಲಾಗಿತ್ತು.

ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ Read More »

ಕರ್ನಾಟಕ
Scroll to Top