Mangalore

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.18,  ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದೆ. ಮುಂದಿನ ದಿನಗಳಲ್ಲಿ ಬೇಕಾದಷ್ಟು ಪೆಟ್ರೋಲ್ ಸಿಗುತ್ತದೆ ಎಂಬ ನಂಬಿಕೆ ಇಲ್ಲ. ಎಲ್ಲದಕ್ಕೂ ಪರ್ಯಾಯ ಹುಡುಕುವ ಕಾಲ ಬಂದಿದೆ. ಹೀಗಿರುವಾಗ ಉಚಿತವಾಗಿ ಸಿಗುವ ಸೂರ್ಯ ಶಕ್ತಿಯತ್ತ ಎಲ್ಲರೂ ಮುಖ ಮಾಡುತ್ತಿದ್ದು, ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಲಾರ್ ಕಾರನ್ನು ತಯಾರು ಮಾಡಿದ್ದಾರೆ. ನಾಲ್ಕು ಮಂದಿ ಆರಾಮವಾಗಿ ಓಡಾಡಬಹುದಾದ ಈ ಕಾರು ಸಂಪೂರ್ಣವಾಗಿ ಸೌರಶಕ್ತಿಯಿಂದಲೇ ಓಡುತ್ತೆದೆ. ಕಾರಿನ ಮೇಲೆ, ಮುಂದೆ-ಹಿಂಭಾಗ ಸೋಲಾರ್ ಪ್ಯಾನಲ್ ಜೋಡಿಸಿದ್ದಾರೆ. ಕಾರಿನ ಒಳಗೆ […]

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!! Read More »

ಕರಾವಳಿ

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ವಿಪರೀತ ಮಳೆಯಿಂದಾಗಿ ರಾಜ್ಯ ರಾಜಧಾನಿಯು ತತ್ತರಗೊಂಡು ಇದೀಗ ಸಹಜ ಸ್ಥಿತಿಗೆ ಮರಳುತ್ತಿರುವುದರ ಮಧ್ಯೆ ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ದಕ್ಷಿಣ ಕನ್ನಡ ಜಿಯೋ ಪುತ್ತೂರು, ಬೆಳ್ತಂಗಡಿ, ಸುಳ್ಯ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡುವಂತಾಗಿದೆ. ಕೆಲವು ಅಂಗಡಿಯೊಳಗಡೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು Read More »

ಕರಾವಳಿ

ಪ್ರೀತಿಸುವ ನಾಟಕವಾಡಿ ಕೊಲೆ ಸಾಬೀತು ► ಸಯನೈಡ್ ಕಿಲ್ಲರ್ ಮೋಹನ್ ಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.15. ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಯುವತಿಯರನ್ನು ಪ್ರೀತಿಸುವುದಾಗಿ ನಂಬಿಸಿ, ಅತ್ಯಾಚಾರಗೈದು ಕೊಲೆ ಮಾಡುತ್ತಿದ್ದ ಸರಣಿ ಹಂತಕ ಸಯನೈಡ್ ಕಿಲ್ಲರ್ ಮೋಹನ್ ಕುಮಾರ್(54) ಮೇಲಿನ ನಾಲ್ಕನೆ ಪ್ರಕರಣವೂ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಗರದ 6 ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿದೆ. 2004 ರಿಂದ 2009 ರ ಅವಧಿಯಲ್ಲಿ ಒಟ್ಟು 20 ಸ್ತ್ರೀಯರ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪ ಮೋಹನ್ ಕುಮಾರ್

ಪ್ರೀತಿಸುವ ನಾಟಕವಾಡಿ ಕೊಲೆ ಸಾಬೀತು ► ಸಯನೈಡ್ ಕಿಲ್ಲರ್ ಮೋಹನ್ ಗೆ ಜೀವಾವಧಿ ಶಿಕ್ಷೆ Read More »

ಕರಾವಳಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ

ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ…!!!

(ನ್ಯೂಸ್ ಕಡಬ) newskadaba.com ಕಡಬ,ಸೆ.15, ನವೆಂಬರ್ ತಿಂಗಳ ಅಂತ್ಯಕ್ಕೆ ರಾಜ್ಯದ ಸುಮಾರು 6092 ಗ್ರಾಮ ಪಂಚಾಯ್ತಿಗಳಿಗೆ ಇಂಟರ್‍ನೆಟ್ ಸೌಲಭ್ಯ ಕಲ್ಪಿಸಲು ಈಗಾಗಲೇ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೆ 643 ಗ್ರಾಪಂಗಳಿಗೆ ವೈಫೈ ಸೌಲಭ್ಯ ನೀಡಲಾಗಿದೆ. ಉಳಿದಿರುವ ಗ್ರಾಮ ಪಂಚಾಯ್ತಿಗಳಿಗೆ ನವೆಂಬರ್ ಅಂತ್ಯದೊಳಗೆ ಇಂಟರ್‍ನೆಟ್ ಸೇವೆ ನೀಡಲಾಗುವುದು ಎಂದು ಕೇಂದ್ರ ದೂರ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್ ಹೇಳಿದ್ದಾರೆ. ಒಂದು ವೇಳೆ ಎಲ್ಲ ಗ್ರಾಮ ಪಂಚಾಯ್ತಿಗಳಿಗೂ ಇಂಟರ್‍ನೆಟ್ ಸೌಲಭ್ಯ ಲಭ್ಯವಾದರೆ ದೇಶದಲ್ಲೇ ಈ ಸೌಲಭ್ಯ ಪಡೆದ ಮೊಟ್ಟ ಮೊದಲ

ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ…!!! Read More »

ಕರಾವಳಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!!

(ನ್ಯೂಸ್ ಕಡಬ) newskadaba.com ಆಗ್ರಾ,ಸೆ.14. ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿಕೊಟ್ಟಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!! Read More »

ಕರಾವಳಿ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ

(ನ್ಯೂಸ್ ಕಡಬ) newskadaba.com ಪೊಳಲಿ,ಸೆ.11, ಇಲ್ಲಿನ ಇತಿಹಾಸ ಪ್ರಸಿದ್ದ ಶ್ರಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು , ಹಲವಾರು ಸಂಘ ಸಂಸ್ಥೆಗಳು ಕರಸೇವೆಯ ಮೂಲಕ ದೇವಾಲಯದ ಕಾರ್ಯಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿರುತ್ತಾರೆ. ಬೆಂಜನಪದವು ಕೆನರಾ ಇಂಜಿನೀಯರಿಂಗ್ ಕಾಲೇಜಿನ ಸುಮಾರು ನೂರು ಮಂದಿ ವಿದ್ಯಾರ್ಥಿಗಳು  ಪೊಳಲಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿ, ನಾವೂ ಬಿಸಿಲಲ್ಲಿ ದುಡಿಯಬಲ್ಲೆವು ಎಂದು ತೋರಿಸಿಕೊಟ್ಟಿದ್ದಾರೆ. ಲವಲವಿಕೆಯಿಂದ ಕೆಲಸಗಾರರೊಂದಿಗೆ ಕೂಡಿ ಎಲ್ಲಾ ಕೆಲಸಗಳನ್ನು ಮಾಡುತ್ತಾ ನುರಿತ ಕೆಲಸಗಾರರಿಗೂ ನಿಬ್ಬೆರಗಾಗುವಂತೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವಂತೆ ಅವರ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ Read More »

ಕರಾವಳಿ

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.11, ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಯಾವ ಜಾಗದಲ್ಲೇ ಇದೆ ಎಂಬುದರ ಖಚಿತ ಮಾಹಿತಿಯನ್ನು ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!! Read More »

ಕರಾವಳಿ

ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.08. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 34ನೇ ನೆಕ್ಕಿಲಾಡಿ ಸಮೀಪ ಮಾರುತಿ ಎಸ್ ಕ್ರಾಸ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಿನಿಮೀಯ ಶೈಲಿಯಲ್ಲಿ ಮುಖ್ಯ ರಸ್ತೆಯಿಂದ ಕೆಳಗಿನ ರಸ್ತೆಗೆ ಇಳಿದ ದೃಶ್ಯ ಗುರುವಾರ ಸಂಜೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಸುತ್ತಿದ್ದರು. ಚಾಲಕ ಸೀಟ್ ಬೆಲ್ಟ್ ಧರಿಸಿದ್ದ ಕಾರಣದಿಂದ ಕಾರನ್ನು ಹತೋಟಿಗೆ ತರಲು ಸಾಧ್ಯವಾಯಿತೆನ್ನಲಾಗಿದೆ. ಕಾರು ಕೆಳಗಿನ ರಸ್ತೆಗೆ ಬಂದು ನಿಲ್ಲುವ

ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Read More »

ಕರಾವಳಿ
Scroll to Top