Mangalore

ಬೆಳ್ತಂಗಡಿ: ‘ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ’ ➤ ವಿವಾದಾತ್ಮಕ ಹೇಳಿಕೆ ನೀಡಿದ ಪೂಂಜಾ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.24. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿ ನಾಲಿಗೆ ಹರಿಯಬಿಟ್ಟಿದ್ದಾರೆ.

ಬೆಳ್ತಂಗಡಿ: ‘ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ’ ➤ ವಿವಾದಾತ್ಮಕ ಹೇಳಿಕೆ ನೀಡಿದ ಪೂಂಜಾ Read More »

ಕರಾವಳಿ

ಬೆಳ್ತಂಗಡಿ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.24. ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಸಿಡಿಲು ಬಡಿದಿದೆ ಎಂದು ವರದಿ ತಿಳಿಸಿದೆ.‌ ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಮಳೆ ಬಂದ ಕಾರಣದಿಂದಾಗಿ ಬೆಂಕಿ ನಂದಿ ಹೋಗಿದೆ ಎನ್ನಲಾಗಿದೆ. ಕಳೆದ ಬಾರಿಯೂ ಮಳೆಗಾಲ ಪ್ರಾರಂಭದಲ್ಲಿ ಸಿಡಿಲು ಬಡಿದು ದೊಡ್ಡ ಸ್ಫೋಟದ ಶಬ್ದದೊಂದಿಗೆ ಕಲ್ಲು ಕುಸಿದುಬಿದ್ದು ಸ್ಥಳೀಯರು ಭಯಭೀತರಾಗಿದ್ದರು.

ಬೆಳ್ತಂಗಡಿ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು Read More »

ಕರಾವಳಿ

ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನ ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು

ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ Read More »

ಕರಾವಳಿ

ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಅಡ್ಯಾರ್ ಬಳಿಯ ನಿವಾಸಿ ನವಾಝ್ ಶರೀಫ್ ಎಂಬುವವರ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನೋಂದಣಿ ಸಂಖ್ಯೆ 46/2020 ಕಲಂ 143, 147, 323, 504, 427, 307 ಆರ್/ಡಬ್ಲ್ಯು 149 ಐಪಿಸಿ ಮತ್ತು ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.  

ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಪೊಲೀಸ್ ದೌರ್ಜನ್ಯದಿಂದ ಕಿವಿ ತಮಟೆಗೆ ಹಾನಿ ➤ ಅರುಣ್ ಪುತ್ತಿಲ ಆಕ್ರೋಶ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.24. ಪೊಲೀಸ್ ದೌರ್ಜನ್ಯ ಸಂದರ್ಭ ಅವಿನಾಶ್ ಎಂಬ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಬಿದ್ದಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿ ಡಿವೈಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ಡಿವೈಎಸ್ಪಿ

ಪುತ್ತೂರು: ಪೊಲೀಸ್ ದೌರ್ಜನ್ಯದಿಂದ ಕಿವಿ ತಮಟೆಗೆ ಹಾನಿ ➤ ಅರುಣ್ ಪುತ್ತಿಲ ಆಕ್ರೋಶ Read More »

ಕರಾವಳಿ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ !

(ನ್ಯೂಸ್ ಕಡಬ)newskadaba.com ಕಡಬ, ಮೇ.24. ಕಡಬ ಸಮೀಪದ  ಇಚ್ಲಂಪಾಡಿಯಲ್ಲಿ ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ ಎಂದು ವರದಿ ತಿಳಿಸಿದೆ. ಅನುಮತಿ ಪಡೆದು ಮರಳುಗಾರಿಕೆ ನಡೆಸುತ್ತಿದ್ದೇವೆ ಎಂದು ಮರಳು  ಸಂಗ್ರಹಕಾರರು ಮಾಹಿತಿಯನ್ನು ನೀಡುತ್ತಿದ್ದರಾದರೂ ಕೂಡಾ, ಅನುಮತಿ ಪತ್ರ ಒಂದು ಕಡೆಯ ಪ್ರದೇಶದದ್ದಾರೆ ಬೇರೊಂದು ಕಡೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.  ಅಲ್ಲದೆ, ಅನುಮತಿ ಒಂದು ಕಡೆ, ಮರಳು ಸಂಗ್ರಹ ಇನ್ನೊಂದು ಕಡೆ ಎಂಬ ಆರೋಪಕ್ಕೆ ಸಾಕ್ಷಿಯೆಂಬಂತೆ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.24. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ.  ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಯುವಕ  ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ  ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.24. ವಿಷ್ಣು ಸರ್ಕಲ್ ಬಳಿ ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಅತಿ ವೇಗದಿಂದ ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದ್ದು, ಚಾಲಕ ಗಾಬರಿಗೊಂಡು ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದೆ. ಘಟನೆಯಿಂದ ಓರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭಿಸಿದೆ. ಸುಳ್ಯ ಪೊಲೀಸರು ಘಟನಾ

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿ ನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಮೇ.24. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಡ್ಡಾದಿಡ್ಡಿಯಾಗಿ‌ ವಾಹನ ಚಲಾಯಿಸಿ ಸಾರ್ವಜನಿಕ ಸಂಚಾರಕ್ಕೆ ತೊಡಕು ಉಂಟು ಮಾಡಿದ ನಾಲ್ವರು ಕಾರು ಚಾಲಕರ ಮೇಲೆ ಕಾಪು ಪೋಲಿಸರು ಕೇಸ್ ದಾಖಲಿಸಿದ್ದಾರೆ. ವಾಹನ ಚಾಲಕರಾದ ಗುಡ್ಡೆಯಂಗಡಿ ಉದ್ಯಾವರ ಗ್ರಾಮ ಅಯಾನ್ (24), ಕುಂಜಿಬೆಟ್ಟು ಮಿಶಾಲ್ವುದ್ದೀನ್ (23) ಉಡುಪಿಯ ಹೈಕ ಬಿಲ್ಡಿಂಗ್ ಶಾನೂನ್ ಡಿಸೋಜಾ (25), ಕೊಡಂತೂರು 10ನೇ ಕ್ರಾಸ್ ವಿವೇಕ್ (23) ಎಂಬ ನಾಲ್ವರ ವಿರುದ್ದ ಕೇಸು ದಾಖಲಿಸಿದ್ದಾರೆ.

ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top