Mangalore

ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.25. ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿ ರಾಜ್ಯ ಸರಕಾರದ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಇದೀಗ ರಾಜಕೀಯ ಪ್ರೇರಿತವಾಗಿ ಪಡಿತರ ಚೀಟಿ ಮಾಫಿಯಾ ಎಂಬ ಸುಳ್ಳು ಸುದ್ದಿ ಹರಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಆಕ್ಷೇಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಡಲಾದ ಆರೋಪದ ಬಗ್ಗೆ ಲಿಖಿತವಾಗಿ ದೂರು ನೀಡುವಂತೆ ತಿಳಿಸಲಾಗಿತ್ತು. […]

ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್ Read More »

ಕರ್ನಾಟಕ

ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.25. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಕಾರು ಹಾಗೂ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಮುಖಾಮುಖಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ Read More »

ಕರಾವಳಿ

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಜಿಲ್ಲಾ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕಳೆದ ಹಲವು ದಿನಗಳಿಂದ ಕೋಮು ಗಲಭೆಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪರಿಸರ ಇದೀಗ ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈಯವರ ಬಿಗಿಮುಷ್ಟಿಯಲ್ಲಿ ಭದ್ರವಾಗಿ ನಿಂತಿದೆ. ರಿಯಲ್ ಸಿಂಗಂ ಎಂದೇ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಆಗಮನದಿಂದಾಗಿ ಜಿಲ್ಲೆಯ ಕೋಮುವಾದಿ ಹಾಗೂ ಕ್ರಿಮಿನಲ್ ಗಳಿಗೆ ನಡುಕವುಂಟಾಗಿದೆ. ಸರಕಾರದ ನಿರ್ದೇಶನದಂತೆ ಬುಧವಾರ ಸಂಜೆಯೇ ಜಿಲ್ಲೆಗೆ ಗಗಮಿಸಿದ ಎಸ್ಪಿ ಅಣ್ಣಾಮಲೈ ತನ್ನ ವಿಶಿಷ್ಟ ರಫ್

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »

ಕರಾವಳಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಮತ್ತು ಬುಧವಾರದಂದು ಬೆಂಜನಪದವಿನಲ್ಲಿ SDPI ಮುಖಂಡನ ಕೊಲೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.21 ನೇ ಬುಧವಾರ ಮಧ್ಯರಾತ್ರಿಯಿಂದ ಜೂ.27 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.27 ರವರೆಗೆ ನಿಷೇಧಾಜ್ಞೆಯನ್ನು

ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ಕೋಮು ಗಲಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈಯವರಿಗೆ ವಹಿಸಲಾಗಿದೆ. ಬಂಟ್ವಾಳ ವೃತ್ತನಿರೀಕ್ಷಕರನ್ನಾಗಿ ಬೆಳಿಯಪ್ಪರವರನ್ನು ನೇಮಿಸಲಾಗಿದ್ದು,

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.  

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ

SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.21. SDPI ಮುಖಂಡ ಕಲಾಯಿ ಅಶ್ರಫ್ ಬರ್ಬರವಾಗಿ ಕೊಲೆಗೀಡಾದ ನಂತರ ಜಿಲ್ಲೆಯ ಅಲ್ಲಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಶಾಂತಿಪ್ರಿಯರನ್ನು ಆತಂಕಕ್ಕೀಡುಮಾಡಿದೆ. ಕಳೆದ ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕದಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚನೆ ನೀಡುತ್ತಿದ್ದಾಗ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಸಂಗಡಿಗರು ಬಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎರಡೂ ಕೋಮಿನ ಜನರು ಸೇರತೊಡಗಿದ್ದರಿಂದ ಪರಿಸ್ಥಿತಿ ಕೈ ಮೀರುವುದನ್ನರಿತ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದರು. ಅಶ್ರಫ್

SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಈ ಹಿಂದೆ ಉಡುಪಿ ಎಸ್ಪಿಯಾಗಿ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಿದ್ದ ಪ್ರಸ್ತುತ ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಳ್ಳುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳನ್ನು ತಡೆಯಲು ಹಾಗೂ ನೈಜ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೊಂಡಿದ್ದ ವೀಡಿಯೋ ಇದೀಗ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…? Read More »

ಕರಾವಳಿ
Scroll to Top