Mangalore

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಇಳಿಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯ ಇಳಿಕೆಯಾದ ಪರಿಣಾಮ ಬಂಟ್ವಾಳ ನಗರ ವ್ಯಾಪ್ತಿಯಲ್ಲೂ ಕುಡಿಯುವ ನೀರಿನ ಆತಂಕ ಎದುರಾಗಿದ್ದು, ಮಳೆ ಬಂದರೂ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಾಗದ ಹಿನ್ನೆಲೆಯಲ್ಲಿ ಮುಂದೆ ನೀರಿನ ಅಭಾವ ಉಂಟಾಗುವ ಅಪಾಯವಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಹುತೇಕ ಪ್ರದೇಶಗಳಿಗೆ ನೇತ್ರಾವತಿ ನದಿಯಿಂದ ಜಕ್ರಿಬೆಟ್ಟಿನಲ್ಲಿ ಜಾಕ್‌ವೆಲ್ ಮೂಲಕ ನೀರನ್ನು ಲಿಫ್ಟ್ ಮಾಡಲಾಗುತ್ತಿದ್ದು, ಪ್ರಸ್ತುತ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆಯಲ್ಲಿ ನದಿಯಲ್ಲಿ ಅಲ್ಲಲ್ಲಿ ನಿಂತಿರುವ ನೀರನ್ನು ಜಾಕ್‌ವೆಲ್‌ನ ಬುಡಕ್ಕೆ […]

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಇಳಿಕೆ Read More »

ಕರಾವಳಿ

ಕುಂದಾಪುರ: ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.16. ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ  ನಡೆದಿದೆ. ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಗೂ ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.  

ಕುಂದಾಪುರ: ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ಕರಾವಳಿ

ಸುಳ್ಯ: ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಿಕ್ಕಿದೆ ➤ ಶಾಸಕಿ ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.15. ಕಾರ್ಯಕರ್ತರ ಶ್ರಮದಿಂದ ನಾನು ಪ್ರಚಂಡ ಬಹುಮತದಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ವಿಜಯಿಯಾಗಲು ಕಾರಣವಾಗಿದೆ‌ ಎಂದು ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ದೇವಳ ವಠಾರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜನರ ಮೂಲಭೂತ ಬೇಡಿಕೆಗಳಿಗೆ ತಕ್ಷಣ ಸ್ಪಂಧಿಸುವ ಕೆಲಸ ಮಾಡುತ್ತೇನೆ ಅಭಿವೃದ್ಧಿ ಕೆಲಸಗಳಿಗೆ ಜನರ ಸಹಕಾರ ಬೇಕೆಂದು ಅವರು ಹೇಳಿದರು. ಈ

ಸುಳ್ಯ: ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಿಕ್ಕಿದೆ ➤ ಶಾಸಕಿ ಭಾಗೀರಥಿ ಮುರುಳ್ಯ Read More »

ಕರಾವಳಿ

ಉಳ್ಳಾಲ: ಇಬ್ಬರು ಯುವಕರ ಮೇಲೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.15. ತಂಡವೊಂದು ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರಿನಲ್ಲಿ ನಡೆದಿದೆ. ಹಲ್ಲೆ ನಡೆಸಿ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಗಾಯಗಳಾಗಿದೆ. ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

ಉಳ್ಳಾಲ: ಇಬ್ಬರು ಯುವಕರ ಮೇಲೆ ತಂಡದಿಂದ ಹಲ್ಲೆ Read More »

ಕರಾವಳಿ

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ➤ ಇಬ್ಬರು ಮಹಿಳೆಯರಿಗೆ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.15. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ➤ ಇಬ್ಬರು ಮಹಿಳೆಯರಿಗೆ ಗಾಯ Read More »

ಕರಾವಳಿ

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ➤  ಉದ್ಯಮಿ ವಿರುದ್ದ ದೂರು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನು ಕಿಡ್ನಾಪ್ ಮಾಡಿ ಹಾಗೂ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ.  

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ➤  ಉದ್ಯಮಿ ವಿರುದ್ದ ದೂರು Read More »

ಕರಾವಳಿ

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.15. ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು Read More »

ಕರ್ನಾಟಕ

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.15. ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು Read More »

ಕರಾವಳಿ

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ➤ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.15. ಬಿಜೆಪಿ ನಾಯಕರ ಫೋಟೋ ಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ➤ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ Read More »

ಕರಾವಳಿ

ಬೆಳ್ತಂಗಡಿ: ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.15. ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಟರ್ ಬಳಿ ವ್ಯಕ್ತಿಯೊಬ್ಬರ ಮೃತದೇಹದ ಪಕ್ಕದಲ್ಲಿದ್ದ ಚೀಲದಲ್ಲಿ 6.65 ಲಕ್ಷ ನಗದು ಪತ್ತೆಯಾಗಿದೆ. ತಮ್ಮಯ್ಯ (55) ಮಡಿಕೇರಿಯ ಕುಶಾಲನಗರ ಮೂಲದ ವ್ಯಕ್ತಿಯಾಗಿದ್ದು, ಇವರು ಹಲವು ವರ್ಷಗಳಿಂದ ಉಜಿರೆಯಲ್ಲಿ ವಾಸಿಸುತ್ತಿದ್ದರು. ಅವರು ಬಸ್‌ ನಿಲ್ಡಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಎನ್ಎಲ್ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು. ಈ ಘಟನೆ ಬಗ್ಗೆ ಕುಟುಂಬದಲ್ಲಿ ಯಾರಿಗೂ ತಿಳಿದಿಲ್ಲ. ಇವರ ಮೃತದೇಹ ಟೆಲಿಪೋನ್ ಎಕ್ಸ್ ಚೇಂಜ್ ಟರ್

ಬೆಳ್ತಂಗಡಿ: ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ Read More »

ಕರಾವಳಿ
Scroll to Top