Mangalore

ಮಂಗಳೂರು: ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಇ-ಗ್ಯಾಜೆಟ್‌ಗಳು ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.09. ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಧಿಸಿದಂತೆ ಮೇ.10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‌ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟಾçನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ […]

ಮಂಗಳೂರು: ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಇ-ಗ್ಯಾಜೆಟ್‌ಗಳು ನಿಷೇಧ Read More »

ಕರಾವಳಿ

ಮಂಗಳೂರು: (ನಾಳೆ)ಮೇ.10ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.09. ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಮಂಗಳೂರು: (ನಾಳೆ)ಮೇ.10ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಜೆ ಘೋಷಣೆ Read More »

ಕರಾವಳಿ

ಸುಳ್ಯ: ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.09. ಬಳ ಸಮೀಪದ ಕೇನ್ಯ ಕಟ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ನೀರು ಪಾಲಾಗಿದ್ದು ಇಬ್ಬರ ಮೃತದೇಹ ವೂಸ ಹೋದರಿಯರಿಬ್ಬರು ಪತ್ತೆಯಾಗಿದೆ. ಈ ದುರ್ಘಟನೆ ಸಂಭವಿಸಿದೆ. ಮೂಲತಃ ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ನೀರು ಪಾಲಾದರು ಎಂದು ವರದಿ ತಿಳಿಸಿದೆ. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ರಾತ್ರಿ

ಸುಳ್ಯ: ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತ್ಯು Read More »

ಕರಾವಳಿ

 ಈ ಬಾರಿ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳೂ ಕಾಂಗ್ರೆಸ್ ಪಾಲಾಗುವುದು ಖಚಿತ.! ➤ ಫಾರೂಕ್ ಉಳ್ಳಾಲ್

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಅಗತ್ಯ ವಸ್ತುಗಳ ಬೆಲೆಯೇರಿಕೆ ಮತ್ತು ಭ್ರಷ್ಟಾಚಾರವನ್ನು ಮೂಲದೇಯ್ಯವನ್ನಾಗಿ ರಾಜ್ಯದ ಬೊಕ್ಕಸ ಬರಿದಾಗಿಸಿರುವ ಬಿಜೆಪಿ ಸರಕಾರದ ವಿರುದ್ಧ ಜನಾಕ್ರೋಶ ದ.ಕ. ಜಿಲ್ಲೆಯ ಉದ್ದಗಲಕ್ಕೂ ಎದ್ದು ಕಾಣುತ್ತಿವೆ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ‌. ಉಳ್ಳಾಲದಲ್ಲಂತೂ ಯು.ಟಿ.ಖಾದರ್ ಅಭೂತಪೂರ್ವ ದಾಖಲೆಯೊಂದಿಗೆ ಗೆದ್ದು ಬರಲಿದ್ದಾರೆ ಎಂದು ಕೆ.ಪಿ.ಸಿ.ಸಿ ಸಂಯೋಜಕ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಉಸ್ತುವಾರಿ ಫಾರೂಕ್ ಉಳ್ಳಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಈ ಬಾರಿ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳೂ ಕಾಂಗ್ರೆಸ್ ಪಾಲಾಗುವುದು ಖಚಿತ.! ➤ ಫಾರೂಕ್ ಉಳ್ಳಾಲ್ Read More »

ಕರಾವಳಿ

ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.08. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲ ಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆಯಾಗಿದೆ. ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ ಎಂದು ತಿಳಿದುಬಂದಿದೆ. ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ Read More »

ಕರಾವಳಿ

RSS ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ!!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಮಂಗಳೂರಿನ ಆರ್ಎಸ್ಎಸ್ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ, ಆರ್ಎಸ್ಎಸ್ನಲ್ಲಿ 32 ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಸತೀಶ್ ಪ್ರಭು 2014ರಲ್ಲಿ ಮೋದಿ ಅವರನ್ನು ಮಂಗಳೂರಿಗೆ ಕರೆಸಿ ಪಕ್ಷ ಸಂಘಟಿಸಿದ್ದರು. ಆದರಲ್ಲಿ ಇದೀಗ ಈಗಿನ ಬಿಜೆಪಿಯಿಂದ ಜನಹಿತ ಸಾಧ್ಯವಿಲ್ಲ ಎಂದು ಹೇಳಿ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮಂಗಳೂರಿನಲ್ಲಿ ನಿರ್ಣಾಯಕ ಆಗಿರುವ ಜಿಎಸ್ಬಿ ಸಮುದಾಯಕ್ಕೆ ಸೇರಿದ ಸತೀಶ್ ಪ್ರಭು ಅವರು ನಾಲ್ವರು ಮಾಜಿ ಕಾರ್ಪೊರೇಟರ್ಗಳ ಜೊತೆ ಕಾಂಗ್ರೆಸ್ ಕಚೇರಿಯಲ್ಲಿ

RSS ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ!! Read More »

ಕರಾವಳಿ

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ, 08. ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ

SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮೇ.08.  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಮೇ.8 ರಂದು) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ

SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ Read More »

ಕರಾವಳಿ

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ..!➤ ಹಿಮಂತ ಬಿಸ್ವಾ ಶರ್ಮಾ

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಬಹುಪತ್ನಿತ್ವ ಪದ್ಧತಿಯಿದ್ದು, ಮುಸ್ಲಿಂ ಮಹಿಳೆಯರ ಗೌರವ, ಸ್ವಾಭಿಮಾನಕ್ಕೆ ಧಕ್ಕೆ ತರುವ ಕ್ರಮ ತಡೆಯುಲು ಸಮಾನ ನಾಗರಿಕ ಸಂಹಿತೆ ಜಾರಿಗೆ ತಂದು ಕರ್ನಾಟಕದಲ್ಲಿ ಬಹು ಪತ್ನಿತ್ವ ಪದ್ಧತಿ ನಿಷೇಧಿಸಲಾಗುವುದು ಎಂದಿದ್ದಾರೆ. ತ್ರಿವಳಿ ತಲಾಖ್ ನಿಷೇಧ, ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮೊದಲಾದ ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ..!➤ ಹಿಮಂತ ಬಿಸ್ವಾ ಶರ್ಮಾ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ➤ ಎಸ್ಡಿ ಪಿಐ ಕಾರ್ಯಕರ್ತನ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.08. ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು ಎಂದು ವರದಿ ತಿಳಿಸಿದೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಚಾರದ ವಾಹನ ಎಸ್ ಡಿಪಿಐ ಅವರ ರ್ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು.

ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ➤ ಎಸ್ಡಿ ಪಿಐ ಕಾರ್ಯಕರ್ತನ ಬಂಧನ Read More »

ಕರಾವಳಿ
Scroll to Top