Mangalore

ಬಂಟ್ವಾಳ: ಎ.26 ರಂದು ಯೋಗಿ ಆದಿತ್ಯನಾಥ್ ರೋಡ್ ಶೋ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.24. ದಕ್ಷಿಣ ಕನ್ನಡ ಜಿಲ್ಲೆಯ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪರ ಪ್ರಚಾರಕ್ಕೆ ಈ ಬಾರಿ ಮತ್ತೆ ಯೋಗಿ ಆದಿತ್ಯನಾಥ್ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ. ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಪರವಾಗಿ ಮತಯಾಚನೆಗಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುವ ಸಾಧ್ಯತೆಯ ಬಗ್ಗೆ ವರದಿಯಾಗಿದೆ. ಕಳೆದ ಬಾರಿ ಕೂಡ ರಾಜೇಶ್ ನಾಯ್ಕ್ ಅವರ ಪರವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ […]

ಬಂಟ್ವಾಳ: ಎ.26 ರಂದು ಯೋಗಿ ಆದಿತ್ಯನಾಥ್ ರೋಡ್ ಶೋ Read More »

ಕರಾವಳಿ

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಏ.24. ದ್ವಿಚಕ್ರ ವಾಹನ ಅಪಘಾತದಲ್ಲಿ ಬಾಲಕ ಮೃತಪಟ್ಟ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಅವರ ಪುತ್ರ ಮೊಹಮ್ಮದ್ ಸೈಪ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.24. ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಪೋನ್ ಕರೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸುತ್ತಿರುವ ವೇಳೆ ಡಿಸಿ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಪರಿಚಿತ ವ್ಯಕ್ತಿಯೊಬ್ಬ ಕೆಟ್ಟ ಶಬ್ದಗಳಿಂದ ಬೈದ ಬಗ್ಗೆ ದೂರು ದಾಖಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಬೆದರಿಕೆ ➤ ದೂರು ದಾಖಲು Read More »

ಕರಾವಳಿ

ಬೆಳ್ತಂಗಡಿ: ಮಾಜಿ ಸಚಿವ ಕೆ.ಗಂಗಾಧರವರ ಮನೆಗೆ ಐಟಿ ದಾಳಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.24. ಮಾಜಿ ಸಚಿವರೂ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಗಂಗಾಧರ ಗೌಡ ಮತ್ತು ಮಗ ರಂಜನ್ ಗೌಡ ಅವರ ಮನೆಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ದಾಳಿ ಸಂಭವಿಸಿದೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯ ಮೇಲೆ, ಲಾಯಿದಲ್ಲಿರುವ ಪ್ರಸನ್ನ ಎಜುಕೇಶನ್ ಇನ್ಸಿಟ್ಯೂಷನ್ ಮತ್ತು ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ

ಬೆಳ್ತಂಗಡಿ: ಮಾಜಿ ಸಚಿವ ಕೆ.ಗಂಗಾಧರವರ ಮನೆಗೆ ಐಟಿ ದಾಳಿ Read More »

ಕರಾವಳಿ

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.23. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ ಎಂದು ಗುರುತಿಸಲಾಗಿದೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮ ಹತ್ಯೆಗೆ

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಮೃತ್ಯು Read More »

ಕರಾವಳಿ

ಮಂಗಳೂರು: ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ ಕುಟುಂಬ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಬಾಲಿವುಡ್ ನಟಿ, ಕರಾವಳಿಯ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ಧಾರೆ. ದೇವಳದ ವತಿಯಿಂದ ನಟಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದಿಸಲಾಯಿತು. ಇನ್ನು ದೇವಿಯ ದರ್ಶನ ಪಡೆದ ನಂತರ ಶಿಲ್ಪಾ ಶೆಟ್ಟಿ ಯಕ್ಷಗಾನವನ್ನು ವೀಕ್ಷಿಸಿ ಕಲೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. ಈ ವೇಳೆ ಪತಿ ರಾಜ್ ಕುಂದ್ರ, ತಂಗಿ ಶಮಿತಾ ಶೆಟ್ಟಿ, ಕುಟುಂಬ ವರ್ಗದವರು,

ಮಂಗಳೂರು: ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ ಕುಟುಂಬ Read More »

ಕರಾವಳಿ

ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಎಪ್ರಿಲ್ 27 ರಂದು ಸಂಜೆ 5 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್‌‌ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ತಿಳಿಸಿದ್ದಾರೆ. ಎಪ್ರಿಲ್ 27 ರಂದು ಅದ್ದೂರಿ ರೋಡ್ ಶೋ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಇನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎ.24

ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ Read More »

ಕರಾವಳಿ

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಸುಳ್ಯ,ಏ.23  ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..! Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ Read More »

ಕರಾವಳಿ

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ರೂರು, ಏ.23. ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ. ಪಡೀಲ್ ನಲ್ಲಿನ ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟದ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳು ದೂರು‌ ನೀಡಿದ್ದರು.ಅರುಣ್ ಪುತ್ತಿಲ ಕೂಡ ಪೊಲೀಸರ ಬಳಿ ತೆರಳಿ ಈ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.  

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ
Scroll to Top