Mangalore

ಮಂಗಳೂರು: ದ.ಕ ಜಿಲೆಯಲ್ಲಿ 15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ದಿನವಾದ 14 ಪುರುಷ ಹಾಗೂ ಮಹಿಳಾ ಅಭ್ಯರ್ಥಿಯೊಬ್ಬರು ಸೇರಿದಂತೆ 15 ಅಭ್ಯರ್ಥಿಗಳಿಂದ 23 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಳ್ತಂಗಡಿ ಕ್ಷೇತ್ರದಿಂದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಆದಿತ್ಯ ನಾರಾಯಣ ಕೊಲ್ಲಾಜೆ, ಭಾರತೀಯ ಜನತಾ ಪಕ್ಷದಿಂದ ಹರೀಶ್ ಪೂಂಜಾ ಎರಡು ನಾಮಪತ್ರಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ರಕ್ಷಿತ್ ಶಿವರಾಂ ಎರಡು ನಾಮಪತ್ರಗಳು, ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ […]

ಮಂಗಳೂರು: ದ.ಕ ಜಿಲೆಯಲ್ಲಿ 15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.18. ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಿ.ಸಿ ರೋಡಿಗೆ ಬರುತ್ತಿದ್ದ ಇ.ವಿ.ಕಾರು ಹಾಗೂ ಅಂಬಾಸಿಡರ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಇನ್ನು ಢಿಕ್ಕಿಯ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.  

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ನಗರದ ತ್ರೀವೇಣಿ ಸರ್ಕಲ್ ಬಳಿ KSRTC ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ. ರಾಜಶೇಖರ ಪೂಜಾರಿ ಅವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು Read More »

ಕರಾವಳಿ
Death, deadbody, Waterfall

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಅಪಾರ್ಟ್‌ಮೆಂಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್‌ ಕೊಂಚಾಡಿಯಲ್ಲಿ ಸಂಭವಿಸಿದೆ. ಮೃತರನ್ನು ಜಿತೇಂದ್ರ (44) ಎಂದು ಗುರುತಿಸಲಾಗಿದೆ. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್‌ ಅಮೀನ್‌ ಅವರೊಂದಿಗೆ ಹಳೆಯ ಫೈಬರ್‌ಶೀಟ್‌ ಬದಲಿ ಮಾಡುವ, ಕಬ್ಬಿಣದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸ ಮಾಡುತ್ತಿದ್ದರು.

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಡೊಂಬಯ್ಯ ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ
crime, arrest, suspected

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ಆನಂದ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಲಂ 365, 395, 326, 506 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈತನು ಬಯಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಎ ಒನ್ ರೌಡಿಯಾಗಿದ್ದು ಈತನ ವಿರುದ್ಧ ಬೈಲುಕೊಪ್ಪ, ಹಾಸನ, ಬೆಟ್ಟದಹಳ್ಳಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಈ ಪೈಕಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಖರ್ಚುಗಳ ವೀಕ್ಷಕರು (ಎಕ್ಸೆಂಡಿಚರ್ ಅಬ್ಸರ್ ವರ್) ಜಿಲ್ಲೆಗೆ ಆಗಮಿಸಿದ್ದಾರೆ. 204 ಮಂಗಳೂರು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪ್ರದೀಪ್ ಸಿಂಗ್ ಗೌತಮ್ (ಐಆರ್‌ಎಸ್) ಅವರು ಖರ್ಚು ವೆಚ್ಚಗಳ ವೀಕ್ಷಕರಾಗಿ ಆಗಮಿಸಿದ್ದಾರೆ ಅವರ ಮೊಬೈಲ್ ಸಂಖ್ಯೆ: 9141046507 ಆಗಿದೆ. 206 ಪುತ್ತೂರು ಹಾಗೂ 207 ಸುಳ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ Read More »

ಕರಾವಳಿ
Death, deadbody, Waterfall

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು ಎಂದು ಗುರುತಿಸಲಾಗಿದೆ. ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ

ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ !

(ನ್ಯೂಸ್ ಕಡಬ)newskadaba.com ಸುಳ್ಯ, ಏ.17. ಕಳ್ಳನೋರ್ವ ಒಂದು ಸ್ಕೂಟಿ ಕದ್ದುಕೊಂಡು ಬಂದು ಹೋಟೆಲ್ ಒಂದರ ಶೌಚಾಲಯದಲ್ಲಿ ನಿದ್ದೆ ಮಾಡಿ ಕೊನೆಗೆ ಪೊಲೀಸ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡ್ಯದ ನಿವಾಸಿ ಸುಲ್ತಾನ್ ಎಂಬಾತ ಉಡುಪಿಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರಿಂದ ಸ್ಕೂಟಿ ಕದ್ದಿದ್ದ. ಅದನ್ನು ಮಂಡ್ಯದತ್ತ ತೆಗೆದುಕೊಂಡು ಹೋಗುವ ದಾರಿಯಲ್ಲಿ ಸುಳ್ಯ ಸಮೀಪದ ಗೂನಡ್ಕದ ದೊಡ್ಡಡ್ಕದಲ್ಲಿರುವ ತಾಜುದ್ದೀನ್ ಟರ್ಲಿ ಎಂಬುವವರ ಇಂಡಿಯನ್ ಗೇಟ್ ಹೋಟೆಲ್ ನಲ್ಲಿ ಟೀ ಕುಡಿಯಲೆಂದು ವಾಹನ ನಿಲ್ಲಿಸಿದ್ದಾನೆ ಎಂದು ವರದಿ

ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ ! Read More »

ಕರಾವಳಿ
Scroll to Top