Mangalore

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ➤ ಸಚಿವ ಎಸ್. ಅಂಗಾರ

(ನ್ಯೂಸ್ ಕಡಬ)newskadaba.com ಸುಳ್ಯ, ಏ.14. ರಾಜಕೀಯ ನಿವೃತ್ತಿ ಹೇಳಿಕೆ ಟಿಕೆಟ್ ಸಿಗದ ಕಾರಣ ತತ್ ಕ್ಷಣದ ನೋವಾಗಿತ್ತು. ಆದರೆ ಇದೀಗ ನನ್ನ ಹೇಳಿಕೆ ಹಿಂಪಡೆಯುತ್ತಿದ್ದು, ಸಕ್ರೀಯ ರಾಜಕೀಯದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ, ಆದರೆ ನನಗೆ ಹೇಳದೆ ಆಯ್ಕೆ ಮಾಡಿರುವುದು ನೋವುಂಟಾಗಿತ್ತು. ಇದು […]

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ➤ ಸಚಿವ ಎಸ್. ಅಂಗಾರ Read More »

ಕರಾವಳಿ

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ಗುಂಡ್ಯ, ಏ.14. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪ KSRTC ರಾಜಹಂಸ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕನ ಕೈ ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ತುಮಕೂರಿನ ಮಧು(25)ಎಂದು ಗುರುತಿಸಲಾಗಿದ್ದು, ಆತನಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ.

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ Read More »

ಕರಾವಳಿ

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್‌ ಬಾರ್‌ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್‌ ಅಲಿಯಾಸ್‌ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ,

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಉಳ್ಳಾಲ ಶಾಸಕ ಯು.ಟಿ ಖಾದರ್ ವಿರುದ್ಧ ಚುನಾವಣಾ ಆಯೋಗಕ್ಕೆ SDPI ನಿಂದ ದೂರು ನೀಡಲಾಗಿದೆ. ಮದನಿ ನಗರ, ಉಳ್ಳಾಲ ಕೋಡಿ ತೋಟದ ಮಸೀದಿ ಹಾಗೂ ಮದರಸಗಳಲ್ಲಿ ಶಾಸಕ ಯು.ಟಿ ಖಾದರ್ ಮಾತನಾಡುತ್ತಿರುವ ಚಿತ್ರಗಳು ವೈರಲ್ ಆಗಿತ್ತು. ಇದೊಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದು ಸಮಂಜಸವಲ್ಲ, ತಕ್ಷಣ ಆಯೋಗ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಅನ್ನುವ ಒತ್ತಾಯ ಮಾಡಿದ್ದಾರೆ.

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು Read More »

ಕರಾವಳಿ

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.14. ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಅಂಗಡಿ ಹಾಗೂ ಗ್ಯಾರೇಜ್ ಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಮರೋಳಿಯಲ್ಲಿರುವ ವೃಧ್ದಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ವಾಹನ ನಿಯಂತ್ರಣ ಕಳೆದುಕೊಂಡಿದೆ. ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್ Read More »

ಕರಾವಳಿ

ಉಳ್ಳಾಲ: ಸಿಎಂ ಭೇಟಿ ಹಿನ್ನೆಲೆ ➤ ಸಂಚಾರಿ ಪೇದೆ ಗಂಭೀರ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.13. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆ ರಾ.ಹೆ.66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಆಡಂಕುದ್ರು ಬಳಿ ಸಂಭವಿಸಿದೆ. ಮಂಜುನಾಥ ಹೆಗಡೆ ಗಂಭೀರ ಗಾಯಗೊಂಡವರು. ರಾ.ಹೆ66 ರಲ್ಲಿ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದರ ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ

ಉಳ್ಳಾಲ: ಸಿಎಂ ಭೇಟಿ ಹಿನ್ನೆಲೆ ➤ ಸಂಚಾರಿ ಪೇದೆ ಗಂಭೀರ Read More »

ಕರಾವಳಿ

ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಏ.13. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಇವರೊಂದಿಗೆ ಪತ್ನಿ ಚೆನ್ನಮ್ಮ ಇದ್ದರು ಎನ್ನಲಾಗಿದೆ. ಬೊಮ್ಮಾಯಿ(CM Basavaraj Bommai) ಅವರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಸೀತರಾಮ ಯಡಪಡಿತ್ತಾಯ ಶಾಲು ಹೊದೆಸಿ ದೇವರ ಪ್ರಸಾದ ನೀಡಿ ಹರಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರುಶನ ಪಡೆದರು. ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ Read More »

ಕರಾವಳಿ

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.13. KSRTC ಬಸ್ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿ.ಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top