Mangalore

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ […]

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಅವರ ಗೆಳತಿ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಒಂದೇ ದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃತಪಟ್ಟರೆ ಲಾವಣ್ಯ ಬಳಿಕ

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿರುವ ಘಟನೆ ನಡೆದಿದೆ. ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ ತೆರಳಿದ್ದರಿಂದ ಜೀವಹಾನಿ ತಪ್ಪಿದೆ. ಇನ್ನು ಘಟನಾ ಸ್ಥಳಕ್ಕೆ ಪಂಚಾಯತ್‌ ಸಿಬಂದಿ ಭೇಟಿ ನೀಡಿದ್ಧಾರೆ.  

ಬೆಳ್ತಂಗಡಿ: ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ Read More »

ಕರಾವಳಿ

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.  

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿಯಲ್ಲಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಏ. 27ಕ್ಕೆ ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ ➤ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಏ.08. ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ರಾಷ್ಟ್ರೀಯ ಪಕ್ಷವೊಂದರಿಂದ ಮನೆ ನಿರ್ಮಾಣ- ಏ.27ರಂದು ಗೃಹಪ್ರವೇಶ ಎಂದು ತಿಳಿದುಬಂದಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಅಕ್ಷಯ ಚಿಕನ್ ಸೆಂಟರ್ ಬಳಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದಿ.ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗಾಗಿ ಆ ಪಕ್ಷದ ವತಿಯಿಂದ ನಿರ್ಮಿಸುತ್ತಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಏ.27ರಂದು ನಡೆಯಲಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರು ಎಂಬಲ್ಲಿ ಪ್ರವೀಣ್‌ ಅವರ ಕನಸಾಗಿದ್ದ ಮತ್ತು ಅವರ ಆಸೆಯಂತೆ

ಬೆಳ್ಳಾರೆ: ಏ. 27ಕ್ಕೆ ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ ➤ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ

ಮಂಗಳೂರು: ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಎಚ್ಚರಿಕೆ ➤ ಪೊಲೀಸ್ ವರಿಷ್ಠಾಕಾರಿ ಡಾ.ವಿಕ್ರಂ ಅಮ್ಟೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.08. ಸಾಮಾಜಿಕ ಜಾಲತಾಣಗಳ‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕಣ್ಣಿಟ್ಟಿದ್ದು, ಕಾನೂನುಬಾಹಿರ ಪೋಸ್ಟ್ ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ವಿಕ್ರಂ ಅಮ್ಟೆ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಚಿತ್ರ, ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಇತ್ಯಾದಿ ಪೋಸ್ಟ್ ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸರು, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಕಚೇರಿಗಳಲ್ಲಿ ಸಾಮಾಜಿಕ

ಮಂಗಳೂರು: ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಎಚ್ಚರಿಕೆ ➤ ಪೊಲೀಸ್ ವರಿಷ್ಠಾಕಾರಿ ಡಾ.ವಿಕ್ರಂ ಅಮ್ಟೆ Read More »

ಕರಾವಳಿ

ಉಳ್ಳಾಲ: ಅಂತರಾಜ್ಯ ವಾಹನ ಚೋರನ ಬಂಧನ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.08. ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ ಎಂದು ಗುರುತಿಸಲಾಗಿದೆ. ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ

ಉಳ್ಳಾಲ: ಅಂತರಾಜ್ಯ ವಾಹನ ಚೋರನ ಬಂಧನ Read More »

ಕರಾವಳಿ

ಉಡುಪಿ: ‘ಫ್ಯಾಕ್ಟ್ ಚೆಕ್ ವಿಭಾಗ’ ➤ ನಕಲಿ ಸುದ್ದಿಗೆ ಕೇಂದ್ರ ಕಡಿವಾಣ

(ನ್ಯೂಸ್ ಕಡಬ)newskadaba.com ಉಡುಪಿ, ಏ.08. ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ಕುರಿತು ನಕಲಿ ಸುದ್ದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನೂತನವಾಗಿ “ಫ್ಯಾಕ್ಟ್ ಚೆಕ್ ವಿಭಾಗ” ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಫೇಸ್ ಬುಕ್, ಯೂಟ್ಯೂಬ್ ,ಟ್ವಟರ್ ಸೇರಿ ವಿವಿಧ ಆನ್ ಲೈನ್ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗುವ ಸುದ್ದಿಗಳ ಸತ್ಯಾ ಸತ್ಯತೆಯನ್ನು ಪರಿಶೀಲಿಸಲು, ಅವುಗಳ ಸತ್ಯಾಂಶ ಗಮನಿಸಲು ಹೊಸ ವಿಭಾಗ ಸ್ಥಾಪಿಸಲು ನಿರ್ಧರಿಸುವುದಾಗಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಸಹಾಯಕ ಸಚಿವರಾದ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.  

ಉಡುಪಿ: ‘ಫ್ಯಾಕ್ಟ್ ಚೆಕ್ ವಿಭಾಗ’ ➤ ನಕಲಿ ಸುದ್ದಿಗೆ ಕೇಂದ್ರ ಕಡಿವಾಣ Read More »

ಕರಾವಳಿ

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.08. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪ ಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.  

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ
Scroll to Top