Mangalore

ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು!   ➤  ನಾಲ್ವರು ನಕಲಿ ಟಿಟಿಇಗಳು ಪತ್ತೆ.!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06  ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣಾ ದಳವು  ಚಾಮರಾಜನಗರ-ಬೆಂಗಳೂರು ಪ್ಯಾಸೆಂಜರ್ ರೈಲಿನಲ್ಲಿ ಟಿಕೆಟ್​ ಪರಿವೀಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ನಕಲಿ ಟಿಟಿಇಗಳನ್ನು ಪತ್ತೆಹಚ್ಚಿದ್ದಾರೆ. ರೈಲಿನ ಟಿಕೆಟ್​ ಪರಿವೀಕ್ಷಕ ಎಂಬಂತೆ ಸೋಗು ಹಾಕಿದ್ದಕ್ಕಾಗಿ ನಾಲ್ವರನ್ನೂ ಬಂಧಿಸಲಾಗಿದ್ದರೂ, ಅವರು ನೈಋತ್ಯ ರೈಲ್ವೆ ವಲಯದಾದ್ಯಂತ ನಡೆದ ನೇಮಕಾತಿ ಹಗರಣಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.                

ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು!   ➤  ನಾಲ್ವರು ನಕಲಿ ಟಿಟಿಇಗಳು ಪತ್ತೆ.!!   Read More »

ಕರ್ನಾಟಕ

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸಾವಿರಾರು ಮತ್ಸ್ಯಗಳ ಮಾರಣಹೋಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಏ. 06. ಪವಿತ್ರ ಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸುತ್ತಲ ಕುಮಾರ ಪರ್ವತದಿಂದ ಹರಿದು ಬರುವ ನೀರು ಇಲ್ಲಿಯ ಬಾಬುರಾಯನ ಗುಂಡಿ ಎಂಬಲ್ಲಿ ಮಲಿನಗೊಂಡಿರುವ ನೀರಿನಿಂದಾಗಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ. ಆದಿಸುಬ್ರಮಣ್ಯದಿಂದ ದರ್ಪಣ ತೀರ್ಥ ಸಮೀಪದ ಬಾಬುರಾಯನಗುಂಡಿ ಎಂಬಲ್ಲಿ ಈ ಘಟನೆ ನಡೆದಿದೆ. ಇದೇ ನೀರು ಕುಕ್ಕೆ ಸುಬ್ರಮಣ್ಯದ ಕುಮಾರಧಾರ ನದಿಗೆ ಸೇರುತ್ತದೆ ಎನ್ನಲಾಗಿದೆ. ಹೋಟೆಲ್ ಹಾಗೂ ಲಾಡ್ಜ್ ಗಳಿಂದ ಬರುವಂತಹ ಈ ಕಲುಷಿತ ನೀರಿನಿಂದಾಗಿ ಎಲ್ಲೆಂದರಲ್ಲಿ

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸಾವಿರಾರು ಮತ್ಸ್ಯಗಳ ಮಾರಣಹೋಮ Read More »

ಕರಾವಳಿ

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಗೋ ಕಳ್ಳತನ‌ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಕಾವೂರು ಗಾಂಧಿನಗರದಲ್ಲಿ ಗೋವಿನ ಕರುವನ್ನು ಕಳವು ಮಾಡಿದ್ದರು ಎನ್ನಲಾಗಿದೆ. ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ 1,50,000 ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಠಾಣೆಗಳಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು ಎಂದು

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ Read More »

ಕರಾವಳಿ

ಉಳ್ಳಾಲ: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್ ➤ ತೆರವುಗೊಳಿಸಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.05. ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ. ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.  

ಉಳ್ಳಾಲ: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್ ➤ ತೆರವುಗೊಳಿಸಿದ ಸಂಚಾರಿ ಪೊಲೀಸರು Read More »

ಕರಾವಳಿ

ಮಂಗಳೂರು: ಆಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ ➤ ದೈವದ ಮೊರೆಹೋಗಲು ನಿರ್ಧಾರ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ವಯೋವೃದ್ಧರ ಕುಟುಂಬಕ್ಕೆ ಒಡಹುಟ್ಟಿದ ಸೋದರನೇ ವಿಲನ್ ಆಗಿದ್ದು ಆಸ್ತಿ ಕೊಳ್ಳೆ ಹೊಡೆಯೋ ಪ್ಲಾನ್ ಮಾಡಿ ಕೊಂಡಿದ್ದ ಎನ್ನಲಾಗಿದೆ. ಆತ ಆಸ್ತಿ ಪತ್ರವನ್ನು ಲಪಟಾಯಿಸಿ ವಂಚನೆಯ ಹಾದಿ ಹಿಡಿದಿದ್ದಾನೆ. ಇದರ ವಿರುದ್ಧ ಸಿಡಿದೆದ್ದ ಸೋದರ ಒಬ್ಬಂಟಿ ಹೋರಾಟಕ್ಕೆ ಮುಂದಾಗಿದ್ದಾರೆ. ಸದ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಕಾನತ್ತೂರು ಕ್ಷೇತ್ರಕ್ಕೆ ದೂರು ನೀಡಲು ಮುಂದಾಗಿದ್ದಾರೆ.  

ಮಂಗಳೂರು: ಆಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ ➤ ದೈವದ ಮೊರೆಹೋಗಲು ನಿರ್ಧಾರ Read More »

ಕರಾವಳಿ

ಕರಾವಳಿಗೆ ಬಿಜೆಪಿ, ಕಾಂಗ್ರೆಸ್‌ ಹಿರಿಯ ನಾಯಕರ ಯಾತ್ರೆ ➤ ಮೇ 6ರಂದು ಮೋದಿ ಮಂಗಳೂರಿಗೆ

 (ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಕರಾವಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು ಮೇ ತಿಂಗಳಲ್ಲಿ ಕರಾವಳಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೇ 06 ಅಥವಾ 07ರಂದು ಕರಾವಳಿಗೆ ಬರುವ ಸಾಧ್ಯತೆ ಇದೆ. ಇವರಲ್ಲಿ ಒಬ್ಬರು ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಮತ್ತಿಬ್ಬರು ಉಡುಪಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಎರಡೂ ಕಾರ್ಯಕ್ರಮಗಳು ಜಿಲ್ಲಾ ಕೇಂದ್ರದಲ್ಲಿ

ಕರಾವಳಿಗೆ ಬಿಜೆಪಿ, ಕಾಂಗ್ರೆಸ್‌ ಹಿರಿಯ ನಾಯಕರ ಯಾತ್ರೆ ➤ ಮೇ 6ರಂದು ಮೋದಿ ಮಂಗಳೂರಿಗೆ Read More »

ಕರಾವಳಿ

ಸಮಯ ಪ್ರಜ್ಞೆ ತೋರಿ ರೈಲು ಅವಘಡ ತಪ್ಪಿಸಿದ ಮಹಿಳೆ.!!   ➤ರೈಲ್ವೇ ಪೊಲೀಸರಿಂದ ಸನ್ಮಾನ

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.05 ರೈಲು ಹಳಿಗೆ ಮರ ಬದ್ದಿದ್ದನ್ನು ಗಮನಿಸಿ ತಕ್ಷಣವೇ ಎಚ್ಚೆತ್ತುಕೊಂಡು ಸಮಯ ಪ್ರಜ್ಞೆಯಿಂದ ಕೆಂಪುಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿದ್ದಾರೆ. ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ ಕುಡುಪು ಆಯರಮನೆ ಚಂದ್ರಾವತಿ ಅವರ ಕಾರ್ಯ “ಉದಯವಾಣಿ’ಯಲ್ಲಿ ಪ್ರಕಟಗೊಂಡ ಬಳಿಕ ನಾಡಿನೆಲ್ಲೆಡೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಸಮಯ ಪ್ರಜ್ಞೆ ತೋರಿ ರೈಲು ಅವಘಡ ತಪ್ಪಿಸಿದ ಮಹಿಳೆ.!!   ➤ರೈಲ್ವೇ ಪೊಲೀಸರಿಂದ ಸನ್ಮಾನ Read More »

ಕರಾವಳಿ

MCMC ಮೂಲಕ ಜಾಹೀರಾತುಗಳ ಮೇಲೆ ದಿನದ 24 ನಿಗಾ

(ನ್ಯೂಸ್ ಕಡಬ)newskadaba.com ಉಡುಪಿ, ಏ.05. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ ಇಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎ0ಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ

MCMC ಮೂಲಕ ಜಾಹೀರಾತುಗಳ ಮೇಲೆ ದಿನದ 24 ನಿಗಾ Read More »

ಕರಾವಳಿ

ಸುಳ್ಯ ವಿಧಾನ ಸಭಾ ಕ್ಷೇತ್ರ ಸಹಿತ ದ. ಕ ಜಿಲ್ಲೆಗೆ ಆಗಮಿಸಿದ CRPF ಕಂಪನಿ

 (ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಕಂಪನಿಗಳು ಆಗಮಿಸಿವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ ತಿಳಿಸಿದ್ದಾರೆ. ಈ 4 CRPF ಕಂಪನಿಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮುಂದೆ ಇನ್ನು ಹೆಚ್ಚು ಕಂಪನಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ ಎಂದು

ಸುಳ್ಯ ವಿಧಾನ ಸಭಾ ಕ್ಷೇತ್ರ ಸಹಿತ ದ. ಕ ಜಿಲ್ಲೆಗೆ ಆಗಮಿಸಿದ CRPF ಕಂಪನಿ Read More »

ಕರಾವಳಿ

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌

 (ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಏ.04.  ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದೇ ವೇಳೆ ಜೆಡಿಎಸ್ ವತಿಯಿಂದ ಆಯೋಜಿಸಲಾದ ಎನ್ನಲಾಗುತ್ತಿರುವ ಪ್ರವಾಸಿ ಬಸ್ಸುಗಳನ್ನು ಸೀಝ್ ಮಾಡಿದ ಘಟನೆ ನಡೆದಿದೆ. ಮತದಾರರಿಗೆ ಮತ್ತು ಮುಖಂಡರಿಗೆ ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಭಾಗ್ಯವನ್ನು ಕಲ್ಪಿಸಲಾಗಿತ್ತು. ಈಗ ಪ್ರವಾಸ ಮುಗಿಸಿ ವಾಪಸಾಗುವಾಗ ನಾಲ್ಕು ಬಸ್‌ ಅನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ಬಸ್‌ಗಳನ್ನು ಮಧುಗಿರಿ ತಾಲೂಕಿನ ಗಿಡದಾಗಲಹಳ್ಳಿ

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌ Read More »

ಕರಾವಳಿ
Scroll to Top