Mangalore

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ 250ಕ್ಕೂ ಅಧಿಕ ಪೊಲೀಸರ ಭೇಟಿ ➤ ಕೈದಿಗಳ ಬಗ್ಗೆ ತಪಾಸಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ಕೋಡಿಯಾಲ್ ಬೈಲ್‌ ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಬೇಟಿ ನೀಡಿ ದಿಢೀರ್ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಮಾರು 250ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ಜೈಲಿನಲ್ಲಿ ಕೈದಿಗಳ ತಪಾಸಣೆ ನಡೆಸಿದ್ದಾರೆ. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಕೈದಿಗಳ ಚಲನವಲನ ಹಾಗೂ ಕೈದಿಗಳ ಬಗ್ಗೆ ತಪಾಸಣೆ ನಡೆಸಿದ್ದಾರೆ.  

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ 250ಕ್ಕೂ ಅಧಿಕ ಪೊಲೀಸರ ಭೇಟಿ ➤ ಕೈದಿಗಳ ಬಗ್ಗೆ ತಪಾಸಣೆ..! Read More »

ಕರಾವಳಿ
Crime

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.03. ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ಹಣ ವರ್ಗಾವಣೆ ಮಾಡಿ ನಿಲ್ಲಿಸಿದ್ದ ವಾಹನವನ್ನು ಕದ್ದು ಪರಾರಿಯಾದ ಬೆಳ್ತಂಗಡಿಯಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿಗಳು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 60 ರೌಡಿ ಶೀಟರ್ ಗಳ ಮನೆಗೆ ಪೊಲೀಸ್ ದಾಳಿ 

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ದಕ್ಷಿಣ ಕನ್ನಡದಲ್ಲೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ಮಗ್ನವಾಗಿದೆ. ಕ್ರಿಮಿನಲ್ ಚಟುವಟಿಕೆ, ಹಿಂದೆ ಗಂಭಿರ ಅಪರಾಧಗಳಲ್ಲಿ ತೊಗಡಿಗೊಂಡಿದ್ದವರ ಲೀಸ್ಟ್ ಸಿದ್ದ ಪಡಿಸಿ ಅವರ ಮೇಲೂ ಕ್ರಮ ಕೈಗೊಳ್ಳುವ ಕಾರ್ಯ ಆರಂಭಿಸಿದೆ. ಜಿಲ್ಲಾ ಕೇಂದ್ರ ಸ್ಥಾನ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾರ್ಚ್ 31 ರಂದು ಅಪರಾಧ ಚಟುವಟಿಗಳಲ್ಲಿ ಗುರುತಿಸಿಕೊಂಡಿದ್ದ ವಿವಿಧ ರೌಡಿ ಶೀಟರಗಳ ಮನೆಗಳಿಗೆ ದಾಳಿ ನಡೆಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಮಂಗಳೂರು

ಮಂಗಳೂರು: 60 ರೌಡಿ ಶೀಟರ್ ಗಳ ಮನೆಗೆ ಪೊಲೀಸ್ ದಾಳಿ  Read More »

ಕರಾವಳಿ

ವಾಹನಗಳ ಕರ್ಕಶ ಹಾರನ್, ಟಿಂಟೆಡ್ ಗ್ಲಾಸ್ ವಿರುದ್ದ ಕಾರ್ಯಚರಣೆ    ➤ 120 ಕೇಸು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ಪೊಲೀಸರು ಕರ್ಕಶ ಹಾರನ್ ಮತ್ತು ಟಿಂಟೆಡ್ ಗ್ಲಾಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಒಂದೇ ದಿನ 120 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಸ್‌‌ಗಳು ಸೇರಿದಂತೆ 106 ವಾಹನಗಳಿಂದ ಕರ್ಕಶ ಹಾರನ್ ತೆಗೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದದು, 14 ವಾಹನಗಳಿಂದ ಟಿಂಟೆಡ್ ಗ್ಲಾಸ್‌ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  

ವಾಹನಗಳ ಕರ್ಕಶ ಹಾರನ್, ಟಿಂಟೆಡ್ ಗ್ಲಾಸ್ ವಿರುದ್ದ ಕಾರ್ಯಚರಣೆ    ➤ 120 ಕೇಸು ದಾಖಲು Read More »

ಕರಾವಳಿ

ಸೈಕಲ್‌ನಲ್ಲಿ ಕನ್ಯಾಕುಮಾರಿಗೆ 1500 ಕಿ.ಮೀ ಯಾತ್ರೆ ಪೂರ್ಣಗೊಳಿಸಿದ ಪದವಿ ವಿದ್ಯಾರ್ಥಿ 

(ನ್ಯೂಸ್ ಕಡಬ)newskadaba.com  ಉಡುಪಿ, ಏ.01. ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ತೃತೀಯ ಬಿಎ ​​ವಿದ್ಯಾರ್ಥಿ ದಿನೇಶ್ ಸೈಕಲ್‌ನಲ್ಲಿ ಕನ್ಯಾಕುಮಾರಿಗೆ 1500 ಕಿಲೋಮೀಟರ್ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಕಾಲೇಜಿನಲ್ಲಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು ಎನ್ನಲಾಗಿದೆ. 1500 ಕಿ.ಮೀ 20 ದಿನಗಳಲ್ಲಿ ಕನ್ಯಾಕುಮಾರಿ ಯಾತ್ರೆ ಪೂರ್ಣಗೊಳಿಸಿದ ದಿನೇಶ್ ಅವರನ್ನು ಕಾಲೇಜು ಕ್ಯಾಂಪಸ್‌ನಿಂದ ಅವರ ತಾಯಿ ಪಾರ್ವತಿ ಬೋವಿಯವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.  

ಸೈಕಲ್‌ನಲ್ಲಿ ಕನ್ಯಾಕುಮಾರಿಗೆ 1500 ಕಿ.ಮೀ ಯಾತ್ರೆ ಪೂರ್ಣಗೊಳಿಸಿದ ಪದವಿ ವಿದ್ಯಾರ್ಥಿ  Read More »

ಕರಾವಳಿ

ಮಂಗಳೂರು: ಚುನಾವಣಾ ಸಿಬ್ಬಂದಿಗೆ ತರಬೇತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ಪುತ್ತೂರಿನ ಪುರಭವನದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ತರಬೇತಿ ನಡೆಯಿತು ಎನ್ನಲಾಗಿದೆ. ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತರಬೇತಿ ನೀಡಿದರು. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.  

ಮಂಗಳೂರು: ಚುನಾವಣಾ ಸಿಬ್ಬಂದಿಗೆ ತರಬೇತಿ Read More »

ಕರಾವಳಿ

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕೊಕ್ಕಡ, ಏ.01. ಶಿಬಾಜೆ ಗ್ರಾಮದ ಪೆರ್ಲದಲ್ಲಿ  ಮೀನು ವ್ಯಾಪಾರಿಯೊಬ್ಬರು  ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಪೆರ್ಲ ನಿವಾಸಿ ನೋಣಯ್ಯ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ . ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅಂಗವೈಫಲ್ಯ ಹೊಂದಿದ್ದ ಇವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಪಡಲಾಗಿದೆ ಎಂದು ವರದಿ ತಿಳಿಸಿದೆ.  

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಇಂದಿನಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ   

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.01. ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಎ.1ರಿಂದ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸೇತುವೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ. ಆದರೆ ಗ್ರಾಮಸ್ಥರು ಸೇತುವೆಯ ಬಳಕೆಗೆ ಅವಕಾಶ ಮಾಡಿಕೊಡುವಂತೆ ಸ್ಥಳೀಯ ಶಾಸಕ ಯು.ಟಿ. ಖಾದರ್ ಬಳಿ ಮನವಿ ಮಾಡಿಕೊಂಡ

ಉಳ್ಳಾಲ: ಇಂದಿನಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ    Read More »

ಕರಾವಳಿ

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.01. ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ ಎನ್ನಲಾಗಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top