Mangalore

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ […]

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                        

(ನ್ಯೂಸ್ ಕಡಬ)newskadaba.com ಮಂಗಳೂರು,ಮಾ.31 ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಕಾರಣ ಜಿಲ್ಲೆಯಲ್ಲಿ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು, ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಧೀಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರು ಹಾಗೂ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಾಸ್ತ್ರ ನಿಯಮ 2016 ನಿಯಮ-48 ರಲ್ಲಿ ತಿಳಿಸಿರುವಂತೆ ಪ್ರತೀ ಆಯುಧಗಳಿಗೆ ತಿಂಗಳಿಗೆ

ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                         Read More »

ಕರಾವಳಿ, ಕರ್ನಾಟಕ

ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..?    ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಕಡಬ, ಮಾ.31. ಕಡಬ ತಾಲೂಕಿನಲ್ಲಿ ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಅಡಿಗ ಮೋಟಾರ್ಸ್ ಸಂಸ್ಥೆಯು ಕಳೆದ 7 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ತೊಡಗಿದ್ದು, ಸಂಸ್ಥೆಯ ವಿಸ್ತರಿಸುವ ಭಾಗವಾಗಿ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್ 2. ಸೇಲ್ಸ್ ಎಕ್ಸಕ್ಯೂಟಿವ್ 3. ಪಾರ್ಟ್ಸ್ ಎಕ್ಸಕ್ಯುಟಿವ್ 4. ಟೆಕ್ನಿಷಿಯನ್ 5. ವಾಶ್ ಅಂಡ್ ಹೆಲ್ಪರ್ ಬಾಯ್ಸ್. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ಬಯೋಡೇಟಾ

ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..?    ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು 

(ನ್ಯೂಸ್ ಕಡಬ)newskadaba.com ಕಿನ್ನಿಗೋಳಿ, ಮಾ.31. ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ ಎಂದು ಗುರುತಿಸಲಾಗಿದೆ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.    

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು  Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ನಿರ್ಬಂಧವಿದೆಯೇ’ ?    ➤ ಡಿಸಿ ಮಾಹಿತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ದ.ಕ.ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 17,58,647 ಮತದಾರರಿದ್ದು, 8,59,899 ಪುರುಷರು, 8,98,132 ಮಹಿಳೆಯರು ಮತ್ತು 75 ತೃತೀಯಲಿಂಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ ಮತ್ತು ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದರು.

ಮಂಗಳೂರು: ‘ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ನಿರ್ಬಂಧವಿದೆಯೇ’ ?    ➤ ಡಿಸಿ ಮಾಹಿತಿ Read More »

ಕರಾವಳಿ

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ. ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೇತ್ರಾವತಿ ಸ್ಥಾನಘಟ್ಟದಲ್ಲಿ ಸಾಬೂನ್, ಶಾಂಪೂ ಬಳಕೆ ನಿಷೇಧ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.30. ನೇತ್ರಾವತಿ ನದಿ ನೀರಿನ ಹರಿವು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ನೀರು ಮಲಿನವಾಗುವುದನ್ನು ತಡೆಯಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಸಾಬೂನು, ಶಾಂಪೂಗಳ ಮಾರಾಟ, ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಧರ್ಮಸ್ಥಳ ಗ್ರಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಂಡು ನದಿ ಸುತ್ತಲಿನ ಅಂಗಡಿಗಳಲ್ಲಿ ಸೋಪು, ಶಾಂಪೂ ಮಾರಾಟ ಮಾಡದಂತೆ ನೋಟಿಸ್‌ ಕಳುಹಿಸಲಾಗಿದೆ.

ಬೆಳ್ತಂಗಡಿ: ನೇತ್ರಾವತಿ ಸ್ಥಾನಘಟ್ಟದಲ್ಲಿ ಸಾಬೂನ್, ಶಾಂಪೂ ಬಳಕೆ ನಿಷೇಧ Read More »

ಕರಾವಳಿ

ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು           

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಂಝಾನ್ ಹಿನ್ನೆಲೆ ಸಹರಿ ಉಪಾಹಾರ ಸೇವಿಸಿ ಫ್ಲ್ಯಾಟ್ ನ ಹೊರಗೆ ಬಂದ ಯುವಕ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ. ಮಂಗಳೂರಿನ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್(20) ಮೃತ ಯುವಕ‌ ಎಂದು ಗುರುತಿಸಲಾಗಿದೆ.  

ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು            Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಬೈಕ್ ನಲ್ಲಿ ತೆರಳುತ್ತಿದ್ದ ಯುವಕ- ಯುವತಿಯನ್ನು ತಡೆದು ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ (27), ಸೋಮೇಶ್ವರ ನಿವಾಸಿ ಉಬೈದುಲ್ಲ(33), ಮೇಲಂಗಡಿ ನಿವಾಸಿ ಖಲೀಲ್(22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಉಚ್ಚಿಲ ಪರಿಸರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೂವರ ತಂಡ ಅವರನ್ನು ತಡೆದು ಯುವತಿಯ ಕೈಯಲ್ಲಿದ್ದ ಐ-ಫೋನ್, ಬೈಕ್ ದೋಚಿ ಪರಾರಿಯಾಗಿದ್ದರು. ಈ ಕುರಿತು ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯ ಮೂವರು ಮಹಿಳೆಯರು ರಾಷ್ಟ್ರಪತಿಗಳೊಂದಿಗೆ ಸಂವಾದ ನಡೆಸಲು ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.30. ಬಂಟ್ವಾಳದ ಮೂವರು ಮಹಿಳೆಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಜೊತೆ ಸಂವಾದ ನಡೆಸುವ ಸೌಭಾಗ್ಯ ಪಡೆದುಕೊಂಡಿದ್ದು, ಅದಕ್ಕಾಗಿ ದೆಹಲಿಯತ್ತ ಹೊರಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿರುವ ಈ ಮೂವರು ಮಹಿಳೆಯರೂ ಬಂಟ್ವಾಳ ತಾಲೂಕಿನವರಾಗಿದ್ದು, ಬೆಂಗಳೂರಿಗೆ ರೈಲಿನಲ್ಲಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ಪಯಣಿಸುವ ಭಾಗ್ಯ ಇವರಿಗೆ ಒದಗಿ ಬಂದಿದ್ದು, ಅಳಿಕೆ ಅನುಗ್ರಹ ಒಕ್ಕೂಟದ ವಾರಿಜ ಮತ್ತು ಅಮಿತ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನೀ ಒಕ್ಕೂಟದ ಇಂದ್ರಾವತಿ ಎಂಬವರೇ ರಾಷ್ಟ್ರಪತಿಗಳ ಭೇಟಿಯ ಅವಕಾಶ ಪಡೆದವರು

ಕರಾವಳಿಯ ಮೂವರು ಮಹಿಳೆಯರು ರಾಷ್ಟ್ರಪತಿಗಳೊಂದಿಗೆ ಸಂವಾದ ನಡೆಸಲು ಆಯ್ಕೆ Read More »

ಕರಾವಳಿ
Scroll to Top